AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೀರೋ ಡಿಫೆಕ್ಟ್​, ಝೀರೋ ಎಫೆಕ್ಟ್​: ಮೇಕ್ ಇನ್ ಇಂಡಿಯಾ ಉತ್ಪನ್ನಗಳ ಗುಣಮಟ್ಟ ಸುಧಾರಣೆ ಬಗ್ಗೆ ಮೋದಿ ಮಾತು

ಮೇಕ್ ಇನ್ ಇಂಡಿಯಾ ಅಂದರೆ ಪರಿಸರಕ್ಕೆ ಹಾನಿಯಾಗದ ದೋಷರಹಿತ ಉತ್ಪನ್ನಗಳು ಎಂಬ ಅರ್ಥವನ್ನು ನೀಡುವ ಶೂನ್ಯ ದೋಷ ಮತ್ತು ಶೂನ್ಯ ಪರಿಣಾಮ ಉತ್ಪಾದನೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದಾರೆ . ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 11 ವರ್ಷಗಳಲ್ಲಿ ಭಾರತದ ಆರ್ಥಿಕತೆ 10 ನೇ ಸ್ಥಾನದಿಂದ ಅಗ್ರ ಐದು ಸ್ಥಾನಕ್ಕೆ ಏರಿದೆ . ಬೆಂಗಳೂರು ಮತ್ತು ಕರ್ನಾಟಕದ ಯುವಕರು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಉಪಕ್ರಮಗಳನ್ನು ಮುನ್ನಡೆಸಬೇಕೆಂದು ಒತ್ತಾಯಿಸಿದರು.

ಝೀರೋ ಡಿಫೆಕ್ಟ್​, ಝೀರೋ ಎಫೆಕ್ಟ್​: ಮೇಕ್ ಇನ್ ಇಂಡಿಯಾ ಉತ್ಪನ್ನಗಳ ಗುಣಮಟ್ಟ ಸುಧಾರಣೆ ಬಗ್ಗೆ ಮೋದಿ ಮಾತು
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on: Aug 11, 2025 | 7:56 AM

Share

ಬೆಂಗಳೂರು, ಆಗಸ್ಟ್​ 11: ಮೇಕ್ ಇನ್ ಇಂಡಿಯಾಗಾಗಿ ಝೀರೋ ಡಿಫೆಕ್ಟ್​, ಝೀರೋ ಎಫೆಕ್ಟ್(Zero Defect, Zero Effect)​ ಉತ್ಪಾದನೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi)  ಕರೆ ನೀಡಿದ್ದಾರೆ. ದೋಷರಹಿತ ಉತ್ಪನ್ನಗಳು ಇರಬೇಕು ಮತ್ತು ಅವುಗಳ ತಯಾರಿಕೆಯು ಪರಿಸರದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರಬಾರದು ಎಂಬುದು ಇದರ ಅರ್ಥವಾಗಿದೆ.

ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 11 ವರ್ಷಗಳಲ್ಲಿ ಭಾರತದ ಆರ್ಥಿಕತೆಯು 10 ನೇ ಸ್ಥಾನದಿಂದ ಅಗ್ರ ಐದು ಸ್ಥಾನಕ್ಕೆ ಬೆಳೆದಿದೆ. ಬೆಂಗಳೂರು ಮತ್ತು ಕರ್ನಾಟಕದ ಯುವಕರು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಉಪಕ್ರಮಗಳನ್ನು ಮುನ್ನಡೆಸಬೇಕೆಂದು ಒತ್ತಾಯಿಸಿದರು. ಇದು ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸುತ್ತದೆ ಎಂದರು.

ಭಾರತದ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಮತ್ತು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ.ಈ ಪ್ರಗತಿಗೆ ಸರ್ಕಾರದ ಸುಧಾರಣೆ, ಕಾರ್ಯಕ್ಷಮತೆ ಮತ್ತು ರೂಪಾಂತರ ವಿಧಾನ, ಸ್ಪಷ್ಟ ಉದ್ದೇಶಗಳು ಮತ್ತು ಪ್ರಾಮಾಣಿಕ ಪ್ರಯತ್ನಗಳು ಕಾರಣ ಎಂದು ಅವರು ಹೇಳಿದರು. ಆಪರೇಷನ್ ಸಿಂದೂರ್ ನಂತರ ನಗರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದ್ದು, ಗಡಿಯುದ್ದಕ್ಕೂ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸುವ ಭಾರತದ ಸಾಮರ್ಥ್ಯವನ್ನು ಅವರು ಶ್ಲಾಘಿಸಿದರು, ಇದರಿಂದಾಗಿ ಪಾಕಿಸ್ತಾನವು ಕೆಲವೇ ಗಂಟೆಗಳಲ್ಲಿ ಶರಣಾಗಬೇಕಾಯಿತು ಎಂದು ಹೇಳಿದರು.

ಆಪರೇಷನ್ ಸಿಂಧೂರ್ ಸಫಲತೆ ಹಿಂದೆ ಟೆಕ್ನಾಲಜಿ ಇತ್ತು, ಡಿಫೆನ್ಸ್​​ನಲ್ಲಿ ಮೇಕ್ ಇನ್ ಇಂಡಿಯಾದ ತಾಕತ್ತಿತ್ತು, ಇದರಲ್ಲಿ ಬೆಂಗಳೂಎಉ, ಕರ್ನಾಟಕದ ಯುವಕರ ಕೊಡುಗೆಯೂ ಇದೆ ಎಂದರು. ಮುಂದುವರೆದ ಆರ್ಥಿಕತೆಯಲ್ಲಿ ಟಾಪ್ ಹತ್ತರಲ್ಲಿ ಐದನೇ ಸ್ಥಾನದಲ್ಲಿದ್ದೇವೆ, ಶೀಘ್ರ ಟಾಪ್ ಮೂರನೇ ಸ್ಥಾನದಲ್ಲಿ ಭಾರತ ಇರಲಿದೆ. 2014ಕ್ಕೂ ಮೊದಲು ಕೇವಲ ಐದು ನಗರಗಳಿಗೆ ಮೆಟ್ರೋ ಸೀಮಿತವಾಗಿತ್ತು.

ಮತ್ತಷ್ಟು ಓದಿ: ಬೆಂಗಳೂರಿನ ಆತ್ಮದಲ್ಲಿ ತತ್ವಜ್ಞಾನ, ಆ್ಯಕ್ಷನ್​​ನಲ್ಲಿ ಟೆಕ್ ಜ್ಞಾನ: ಹೊಗಳಿದ ಮೋದಿ

ಈಗ 24 ನಗರಗಳಲ್ಲಿದೆ. ವಿಶ್ವದಲ್ಲಿ ಭಾರತವು ಮೆಟ್ರೋ ಸಂಪರ್ಕ ಹೊಂದಿದ ಮೂರನೇ ರಾಷ್ಟ್ರವಾಗಿದೆ. ಸ್ವಾತಂತ್ರ್ಯ ಬಂದಾಗಿಂದ 2014ರವರೆಗೆ ಕೇವಲ 20 ಸಾವಿರ ರೈಲ್ವೆ ಎಲೆಕ್ಟ್ರಿಫಿಕೇಷನ್ ಮಾಡಲಾಗಿತ್ತು, ಆದರೆ ಈಗ ಅದರ ಸಂಖ್ಯೆ 40 ಸಾವಿರಕ್ಕೆ ಏರಿದೆ. 2014ಕ್ಕೂ ಮೊದಲು 74 ಏರ್​​ಪೋರ್ಟ್​ಗಳಿದ್ದವು, ಬಳಿಕ ಅದು 160ಕ್ಕೆ ಏರಿದೆ.

ಇದಕ್ಕೂ ಮೊದಲು, ಪ್ರಧಾನಿಯವರು ಬೆಂಗಳೂರು ಮೆಟ್ರೋದ ಆರ್‌ವಿ ರಸ್ತೆ (ರಾಗಿಗುಡ್ಡ) ದಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗವನ್ನು ಉದ್ಘಾಟಿಸಿದರು, ಇದು ರೂ. 7,160 ಕೋಟಿ ಎರಡನೇ ಹಂತದ ಯೋಜನೆಯ ಭಾಗವಾಗಿದೆ. 16 ನಿಲ್ದಾಣಗಳನ್ನು ಹೊಂದಿರುವ 19 ಕಿ.ಮೀ ಉದ್ದದ ಮಾರ್ಗವು ನಗರದ ಮೆಟ್ರೋ ಜಾಲವನ್ನು 96 ಕಿ.ಮೀ.ಗೆ ವಿಸ್ತರಿಸಲಿದ್ದು, ಆರು ಲಕ್ಷಕ್ಕೂ ಹೆಚ್ಚು  ಪ್ರಯಾಣಿಕರಿಗೆ ಪ್ರಯೋಜನವನ್ನು ನೀಡುತ್ತದೆ.

15,610ರೂ. ಕೋಟಿ ವೆಚ್ಚದ ಮೂರನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಆಧುನಿಕ, ವಿಶ್ವ ದರ್ಜೆಯ ರೈಲು ಪ್ರಯಾಣವನ್ನು ಒದಗಿಸುವ ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ