AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ನಾಳೆ ಅಂದರೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆ ಮೂಲಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:May 09, 2026 | 9:29 PM

Share

ಬೆಂಗಳೂರು, ಮೇ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ. ಆರ್ಟ್ ಆಫ್ ಲೀವಿಂಗ್ ಆಶ್ರಮದಲ್ಲಿ ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ ಇಲ್ಲಾಖೆ ಕೂಡ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದೆ.

ಮುಖ್ಯಾಂಶಗಳು

  • ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ
  • ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ
  • ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೂ ಭೇಟಿ

ಪ್ರಧಾನಿ ಮೋದಿ ಭೇಟಿ ವಿವರ ಹೀಗಿದೆ

  • ಬೆಳಗ್ಗೆ 9.40ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಆಗಮನ
  • ಬೆಳಗ್ಗೆ 9.45 ರಿಂದ 10.15ರವರೆಗೆ ಹೆಚ್​​ಎಎಲ್ ಏರ್​​ಪೋರ್ಟ್ ಮುಂಭಾಗ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
  • ನಂತರ ಹೆಚ್​ಎಎಲ್ ಏರ್​​ಪೋರ್ಟ್​ನಿಂದ ಹೆಲಿಕಾಪ್ಟರ್ ಮೂಲಕ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲೀವಿಂಗ್ ಆಶ್ರಮಕ್ಕೆ ತೆರಳಲಿರುವ ಮೋದಿ, ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಒಂದೂವರೆ ಗಂಟೆ ಕಾಲ ಆಶ್ರಮದಲ್ಲಿ ಇರಲಿದ್ದಾರೆ.
  • ಮಧ್ಯಾಹ್ನ 01.40ಕ್ಕೆ ಬೆಂಗಳೂರಿನಿಂದ ಹೈದರಾಬಾದ್​ಗೆ ನಿರ್ಗಮಿಸಲಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಬಗ್ಗೆ ಆರ್​​ ಅಶೋಕ್​ ಮಾಹಿತಿ

ಇನ್ನು ಪ್ರಧಾನಿ ಮೋದಿ ಬೆಂಗಳೂರು ಭೇಟಿ ಬಗ್ಗೆ ಇತ್ತೀಚೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾಹಿತಿ ನಿಡಿದ್ದರು. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿದ ಹಿನ್ನೆಲೆ ಹಾಗೂ ಕೇರಳದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಹೆಚ್‌ಎಎಲ್ ವಿಮಾನ ನಿಲ್ದಾಣದ ಪ್ರವೇಶದ್ವಾರದ ಬಳಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದರು.

ಪ್ರಧಾನಿ ಮೋದಿ ಟ್ವೀಟ್​​

ಮೇ 10ರಂದು ಪ್ರಧಾನಿ ಮೋದಿ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿ ಸೇರುವ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ 10 ರಿಂದ 15 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?

ಇದೊಂದು ಸಂಪೂರ್ಣ ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿದ್ದು, ಬಳಿಕ ಪ್ರಧಾನಿ ಮೋದಿ ಅವರು ರವಿಶಂಕರ್ ಗುರೂಜಿ ಅವರ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:21 pm, Sat, 9 May 26

Follow Us
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ