AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತೊಮ್ಮೆ ಮೋದಿ ಸಂಪುಟ ಸೇರುವ ಸಂಭವ, ದೆಹಲಿಗೆ ಬುಲಾವ್!

Union Cabinet Expansion: ‘ಜುಲೈ 8ರಂದು ಕೇಂದ್ರದ ಹಿರಿಯ ನಾಯಕರಿಂದ ದೆಹಲಿಗೆ ಬರುವಂತೆ ಸಂದೇಶ ಬಂದಿದೆ. ಯಾವ ಕಾರಣಕ್ಕಾಗಿ ದೆಹಲಿಗೆ ಕರೆದಿದ್ದಾರೆ ಎಂದು ತಿಳಿದಿಲ್ಲ’ ಎಂದು ಸ್ವತಃ ಸಂಸದ ರಮೇಶ ಜಿಗಜಿಣಗಿ ಟಿವಿ9ಗೆ ತಿಳಿಸಿದ್ದಾರೆ.

ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತೊಮ್ಮೆ ಮೋದಿ ಸಂಪುಟ ಸೇರುವ ಸಂಭವ, ದೆಹಲಿಗೆ ಬುಲಾವ್!
ರಮೇಶ್ ಜಿಗಜಿಣಗಿ
TV9 Web
| Edited By: |

Updated on:Jul 06, 2021 | 3:57 PM

Share

ಬೆಂಗಳೂರು: ನಾಡಿದ್ದು, ಜುಲೈ 8ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಕರ್ನಾಠಕದ ಇನ್ನೋರ್ವ ಸಂಸದರಿಘು ದೆಹಲಿಯಿಂದ ಬುಲಾವ್ ಬಂದಿದೆ. ವಿಜಯಪುರ ಸಂಸದ ರಮೇಶ್ ಜಿಗಜಿಣಗಿಗೆ ಎನ್​ಡಿಎ ಮೈತ್ರಿಕೂಟದ ಉನ್ನತ ಮಟ್ಟದ ನಾಯಕರು ಆಹ್ವಾನ ನೀಡಿದ್ದು, ಅವರು ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ‘ಜುಲೈ 8ರಂದು ಕೇಂದ್ರದ ಹಿರಿಯ ನಾಯಕರಿಂದ ದೆಹಲಿಗೆ ಬರುವಂತೆ ಸಂದೇಶ ಬಂದಿದೆ. ಯಾವ ಕಾರಣಕ್ಕಾಗಿ ದೆಹಲಿಗೆ ಕರೆದಿದ್ದಾರೆ ಎಂದು ತಿಳಿದಿಲ್ಲ’ ಎಂದು ಸ್ವತಃ ಸಂಸದ ರಮೇಶ ಜಿಗಜಿಣಗಿ ಟಿವಿ9ಗೆ ತಿಳಿಸಿದ್ದಾರೆ. ಈ ಹಿಂದೆ ಮೋದಿ ಸಂಪುಟದಲ್ಲಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ಖಾತೆಯ ರಾಜ್ಯ ಸಚಿವರಾಗಿದ್ದ ಸಂಸದ ರಮೇಶ ಜಿಗಜಿಣಗಿ ಅವರಿಗೆ ಇನ್ನೊಮ್ಮೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ದಟ್ಟವಾಗಿದೆ.

ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ‌ ಇಬ್ಬರಿಗೆ‌ ಸಚಿವ ಸ್ಥಾನ‌‌ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ವರಿಷ್ಠರು ಬುಲಾವ್ ನೀಡಿದ ಹಿನ್ನೆಲೆ ಮಧ್ಯಾಹ್ನ ದೆಹಲಿಗೆ ತೆರಳಲು ನಾರಾಯಣಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪತ್ನಿ ವಿಜಯ ಮತ್ತು ಪುತ್ರಿ ಶೀತಲ್ ಸೇರಿ ಕುಟುಂಬ ಸಮೇತ ದೆಹಲಿಗೆ ತೆರಳಲಿದ್ದಾರೆ.

ಮೊದಲ ಬಾರಿಗೆ ಸಂಸದರಾಗಿರುವ ಎಡಗೈ ಸಮುದಾಯದ ನಾಯಕ ನಾರಾಯಣಸ್ವಾಮಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗುತ್ತಾ? ಎಂದು ನೋಡಬೇಕಿದೆ. ನಾರಾಯಣಸ್ವಾಮಿಗೆ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಸಚಿವ ಸ್ಥಾನ ಒಲಿಯುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿ ಎಡಗೈ ಸಮೂದಾಯಕ್ಕೆ ಸೇರಿರುವುದರಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳು ಅವಕಾಶ ಇದೆ.

ಇದನ್ನೂ ಓದಿ: 

Thawar Chand Gehlot: ಸಂಘ ಪರಿವಾರ ಹಿನ್ನೆಲೆಯ ತಾವರ್‌ಚಂದ್ ಗೆಹ್ಲೋಟ್ ಈ ಹಿಂದೆಯೂ ಕರ್ನಾಟಕದೊಂದಿಗೆ ಸಂಪರ್ಕದಲ್ಲಿದ್ದರು 

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ

(PM Narendra Modi Cabinet Expansion Vijayapura MP Ramesh Jigajinagi Travel to Delhi)

Published On - 3:48 pm, Tue, 6 July 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ