AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ

ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡಿರುವ ಮೋದಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ್ ಎಂದಿಗೂ ಸ್ಮರಣೀಯರು. ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಎಂದು ಹೇಳಿದ್ದಾರೆ.

ಅಂಬೇಡ್ಕರ್​ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್
Skanda
| Edited By: |

Updated on: Apr 14, 2021 | 8:14 AM

Share

ದೆಹಲಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಪ್ರಯುಕ್ತ ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡಿರುವ ಮೋದಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ್ ಎಂದಿಗೂ ಸ್ಮರಣೀಯರು. ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಎಂದು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಸಂವಿಧಾನ ಶಿಲ್ಪಿ, ಭಾರತರತ್ನ ಡಾ|ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆಗಳನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ|ಅಂಬೇಡ್ಕರ್ ಅವರ ಸಾಧನೆ, ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಚರಿತ್ರಾರ್ಹ ಎಂದು ಬಣ್ಣಿಸಿದ್ದಾರೆ.

ಕರ್ನಾಟಕ ಬಿಜೆಪಿ ಟ್ವೀಟ್ ಅಂಬೇಡ್ಕರ್ ಜಯಂತಿಗೆ ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟರ್ ಅಕೌಂಟ್ ಮೂಲಕ ಶುಭಕೋರಲಾಗಿದೆ. ಸಂವಿಧಾನ ಶಿಲ್ಪಿ, ಶೋಷಿತರ ಧ್ವನಿಯಾಗಿ ಶಿಕ್ಷಣ, ಸಮಾನತೆಗೆ ಶ್ರಮಿಸಿದ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಜೀವನ ಮತ್ತು ಆದರ್ಶಗಳು ಸರ್ವಕಾಲಕ್ಕೂ ಸ್ಮರಣೀಯವಾದದ್ದು. ಭಾರತ ರತ್ನ ಡಾ. ಬಿ.ಆರ್.‌ಅಂಬೇಡ್ಕರ್‌ ಅವರ ಜಯಂತಿಯಂದು ಶತ ನಮನಗಳು ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್​ ಕುರಿತು ಹಾಡುವಾಗ ಭಾವುಕರಾದ ಸಂಸದ ವಿ.ಶ್ರೀನಿವಾಸ ಪ್ರಸಾದ್

(PM Narendra Modi CM BS Yediyurappa tweet for Ambedkar Jayanti)

Follow Us
Skanda
Skanda
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ