AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Interview: ಟಿವಿ9 ಗ್ರೂಪ್ ಸಂಪಾದಕರಿಂದ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ಇಂದು ರಾತ್ರಿ 8 ಗಂಟೆಗೆ

ಪ್ರಧಾನಿ ಮೋದಿ ಸಂದರ್ಶನ: ಟಿವಿ9 ನೆಟ್ವರ್ಕ್ ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚ್ಯಾನೆಲ್ ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದು ಇದನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ವೀಕ್ಷಿಸಬಹದು,

ಅರುಣ್​ ಕುಮಾರ್​ ಬೆಳ್ಳಿ
|

Updated on:May 02, 2024 | 4:50 PM

Share

ಬೆಂಗಳೂರು: ದುಂಡು ಮೇಜಿನ ಪರಿಷತ್ ಬಗ್ಗೆ ನೀವು ಕೇಳಿರುತ್ತೀರಿ, ಅದು ಭಾರತಕ್ಕೆ ಸ್ವಾಂತಂತ್ರ್ಯ ಸಿಗುವ ಮೊದಲು ನಡೆದಿತ್ತು. ನಿಖರವಾಗಿ ಹೇಳುವುದಾದರೆ 1930 ರಿಂದ 1932 ರ ಅವಧಿಯಲ್ಲಿ ಆಗಿನ ಬ್ರಿಟಿಷ್ ಸರ್ಕಾರ ಮತ್ತು ಭಾರತದ ರಾಜಕೀಯ ನಾಯಕರ ನಡುವೆ ಸಂವಿಧಾನ ಸುಧಾರಣೆಗೆ ಸಂಬಂಧಿಸಿದಂತೆ ಮೂರು ಸುತ್ತಿನ ಮಾತುಕತೆ ನಡೆದಿತ್ತು ಮತ್ತು ಅದು ದುಂಡು ಮೇಜಿನ ಪರಿಷತ್ ಅಂತ ಇತಿಹಾಸದಲ್ಲಿ ದಾಖಲಾಗಿದೆ. ಅದು ಸರಿ, ದುಂಡು ಮೇಜಿನ ಸಂದರ್ಶನದ ಬಗ್ಗೆ ನೀವು ಕೇಳಿದ್ದೀರಾ? ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಇಂದು ಟಿವಿ9 ನೆಟ್ವರ್ಕ್ ನ (Tv9 Network) ಬೇರೆ ಬೇರೆ ಭಾಷೆಗಳ ಸಂಪಾದಕರು (editors) ನಡೆಸುವ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿಯವರ ದುಂಡು ಮೇಜಿನ ಸಂದರ್ಶನ ಯಾವತ್ತು ಮತ್ತು ಯಾವ ಸಮಯಕ್ಕೆ?

ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ಮೋದಿಯವರೊಂದಿಗೆ ನಡೆಸುವ ದುಂಡು ಮೇಜಿನ ಸಂದರ್ಶನವನ್ನು ಇವತ್ತು ಅಂದರೆ ಮೇ 2, ಸಾಯಂಕಾಲ 8 ಗಂಟೆಯಿಂದ 10 ಗಂಟೆಯವರೆಗೆ ವೀಕ್ಷಿಸಬಹುದು.

ಪ್ರಧಾನಿ ಮೋದಿಯವರ ದುಂಡು ಮೇಜಿನ ಸಂದರ್ಶನ ಎಲ್ಲಿ ವೀಕ್ಷಿಸಬಹುದು?

ಪ್ರಧಾನಿ ಮೋದಿ ಜೊತೆ ಟಿವಿ9 ನೆಟ್ವರ್ಕ್ ಸಂಪಾದಕರು ನಡೆಸುವ ಸಂದರ್ಶನವನ್ನು ಟಿವಿ9 ಕನ್ನಡ ವಾಹಿನಿ, ಟಿವಿ9 ವೆಬ್ಸೈಟ್ ಮತ್ತು ಟಿವಿ9 ಯೂಟ್ಯೂಬ್ ಚ್ಯಾನೆಲ್ ನಲ್ಲಿ ವೀಕ್ಷಿಸಬಹುದು.

ಯಾವ್ಯಾವ ಭಾಷೆಯ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ಮಾಡಿದ್ದಾರೆ?

ಟಿವಿ9 ನೆಟ್ವರ್ಕ್ ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚ್ಯಾನೆಲ್ ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್ಶನ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

Published On - 12:19 pm, Thu, 2 May 24

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ