AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸಲು ಮನವಿ: ಪ್ರಧಾನಿ ಕಚೇರಿ ಸ್ಪಂದನೆ

Puneeth Rajkumar: ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆ.

ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸಲು ಮನವಿ: ಪ್ರಧಾನಿ ಕಚೇರಿ ಸ್ಪಂದನೆ
ಮೆಟ್ರೊ ರೈಲು ಮತ್ತು ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Feb 06, 2022 | 4:43 PM

Share

ಬೆಂಗಳೂರು: ನಗರದ ಗೊಟ್ಟಿಗೆರೆ-ನಾಗವಾರ ಮಾರ್ಗದಲ್ಲಿ ನಿರ್ಮಾಣವಾಗಲಿರುವ ಪಾಟರಿಟೌನ್​ ಮೆಟ್ರೊ ರೈಲು ನಿಲ್ದಾಣಕ್ಕೆ (Metro Station) ಈಚೆಗೆ ನಿಧನರಾದ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರು ಇರಿಸುವಂತೆ ಪ್ರಧಾನಿ ಕಾರ್ಯಾಲಯವು (PM Office) ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸುವ ಮೂಲಕ ಅವರ​ ಹೆಸರು ಚಿರಸ್ಥಾಯಿ ಆಗುವಂತೆ ಮಾಡಿ ಎಂದು ಕರ್ನಾಟಕ ಬಹುಜನ ಫೆಡರೇಷನ್ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನವರಿ 2ರಂದು ಪತ್ರ ಬರೆದಿತ್ತು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದಲೂ ಸ್ಪಂದನೆ ಸಿಕ್ಕಿದ್ದು, ಕರ್ನಾಟಕ ಸರ್ಕಾರವು ಶೀಘ್ರ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪುಲಿಕೇಸಿ ನಗರ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಇರಿಸಬೇಕೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರ್ನಾಟಕ ಬಹುಜನ ಫೆಡರೇಷನ್ ಸಂಘಟನೆ ಮನವಿ ಮಾಡಿತ್ತು. ಈ ಕುರಿತು ಸಂಸದ ಡಿ.ವಿ.ಸದಾನಂದಗೌಡರ ಅವರಿಗೂ ಮನವಿ ಪತ್ರ ನೀಡಲಾಗಿತ್ತು.

ರಾಜ್ಯದ ಹೆಮ್ಮೆಯ ನಟ ಪುನೀತ್ ಅವರನ್ನು ಕನ್ನಡಿಗರು ಹಲವು ರೀತಿಗಳಲ್ಲಿ ಗೌರವಿಸುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ. ನಗರದ ಯಾವುದಾದರೂ ಒಂದು ಮೆಟ್ರೊ ನಿಲ್ದಾಣಕ್ಕೆ ಪುನೀತ್ ಹೆಸರು ನಾಮಕರಣ ಮಾಡಬೇಕು ಎಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬಂದಿತ್ತು. ಬೆಂಗಳೂರಿನಲ್ಲಿ ಪ್ರಸ್ತುತ ಬಾಲಗಂಗಾಧರನಾಥ ಸ್ವಾಮೀಜಿ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಮೆಟ್ರೊ ನಿಲ್ದಾಣಗಳು ಇವೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೊ 2ಎ, 2ಬಿ ಹಂತಗಳಿಗೆ ಕೇಂದ್ರದ ಅನುಮೋದನೆ: ಸಂಸದ ತೇಜಸ್ವಿ ಸೂರ್ಯ ಸಂತಸ ಇದನ್ನೂ ಓದಿ: ಫಿಲ್ಮ್​ ಫೆಸ್ಟಿವಲ್​ ಸಲಹಾ ಸಮಿತಿಯಲ್ಲಿ ಪುನೀತ್ ರಾಜ್​ಕುಮಾರ್​ ಪತ್ನಿ ಅಶ್ವಿನಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ