AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸಲು ಮನವಿ: ಪ್ರಧಾನಿ ಕಚೇರಿ ಸ್ಪಂದನೆ

Puneeth Rajkumar: ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆ.

ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸಲು ಮನವಿ: ಪ್ರಧಾನಿ ಕಚೇರಿ ಸ್ಪಂದನೆ
ಮೆಟ್ರೊ ರೈಲು ಮತ್ತು ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Feb 06, 2022 | 4:43 PM

Share

ಬೆಂಗಳೂರು: ನಗರದ ಗೊಟ್ಟಿಗೆರೆ-ನಾಗವಾರ ಮಾರ್ಗದಲ್ಲಿ ನಿರ್ಮಾಣವಾಗಲಿರುವ ಪಾಟರಿಟೌನ್​ ಮೆಟ್ರೊ ರೈಲು ನಿಲ್ದಾಣಕ್ಕೆ (Metro Station) ಈಚೆಗೆ ನಿಧನರಾದ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರು ಇರಿಸುವಂತೆ ಪ್ರಧಾನಿ ಕಾರ್ಯಾಲಯವು (PM Office) ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸುವ ಮೂಲಕ ಅವರ​ ಹೆಸರು ಚಿರಸ್ಥಾಯಿ ಆಗುವಂತೆ ಮಾಡಿ ಎಂದು ಕರ್ನಾಟಕ ಬಹುಜನ ಫೆಡರೇಷನ್ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನವರಿ 2ರಂದು ಪತ್ರ ಬರೆದಿತ್ತು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದಲೂ ಸ್ಪಂದನೆ ಸಿಕ್ಕಿದ್ದು, ಕರ್ನಾಟಕ ಸರ್ಕಾರವು ಶೀಘ್ರ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪುಲಿಕೇಸಿ ನಗರ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಇರಿಸಬೇಕೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರ್ನಾಟಕ ಬಹುಜನ ಫೆಡರೇಷನ್ ಸಂಘಟನೆ ಮನವಿ ಮಾಡಿತ್ತು. ಈ ಕುರಿತು ಸಂಸದ ಡಿ.ವಿ.ಸದಾನಂದಗೌಡರ ಅವರಿಗೂ ಮನವಿ ಪತ್ರ ನೀಡಲಾಗಿತ್ತು.

ರಾಜ್ಯದ ಹೆಮ್ಮೆಯ ನಟ ಪುನೀತ್ ಅವರನ್ನು ಕನ್ನಡಿಗರು ಹಲವು ರೀತಿಗಳಲ್ಲಿ ಗೌರವಿಸುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ. ನಗರದ ಯಾವುದಾದರೂ ಒಂದು ಮೆಟ್ರೊ ನಿಲ್ದಾಣಕ್ಕೆ ಪುನೀತ್ ಹೆಸರು ನಾಮಕರಣ ಮಾಡಬೇಕು ಎಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬಂದಿತ್ತು. ಬೆಂಗಳೂರಿನಲ್ಲಿ ಪ್ರಸ್ತುತ ಬಾಲಗಂಗಾಧರನಾಥ ಸ್ವಾಮೀಜಿ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಮೆಟ್ರೊ ನಿಲ್ದಾಣಗಳು ಇವೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೊ 2ಎ, 2ಬಿ ಹಂತಗಳಿಗೆ ಕೇಂದ್ರದ ಅನುಮೋದನೆ: ಸಂಸದ ತೇಜಸ್ವಿ ಸೂರ್ಯ ಸಂತಸ ಇದನ್ನೂ ಓದಿ: ಫಿಲ್ಮ್​ ಫೆಸ್ಟಿವಲ್​ ಸಲಹಾ ಸಮಿತಿಯಲ್ಲಿ ಪುನೀತ್ ರಾಜ್​ಕುಮಾರ್​ ಪತ್ನಿ ಅಶ್ವಿನಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ