AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ: ನೂತನ ಸಿಎಂಗೆ ಅಭಿನಂದನೆ

PM Narendra Modi: ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ: ನೂತನ ಸಿಎಂಗೆ ಅಭಿನಂದನೆ
ನಿರ್ಗಮಿತ ಮತ್ತು ನೂತನ ಮುಖ್ಯಮಂತ್ರಿ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ
TV9 Web
| Edited By: |

Updated on:Jul 28, 2021 | 12:16 PM

Share

ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಚರ್ಚೆ ಉತ್ತುಂಗದಲ್ಲಿದ್ದಾಗಲೂ ಬಿಜೆಪಿ ಹೈಕಮಾಂಡ್ ಮೌನವಾಗಿಯೇ ಇತ್ತು. ಅಂತೂ ಯಡಿಯೂರಪ್ಪ ರಾಜೀನಾಮೆ ನೀಡಿದರು..ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

ಇಂದು ಯಡಿಯೂರಪ್ಪನವರ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಬಿಜೆಪಿ ಪಕ್ಷ ಮತ್ತು ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಗೆ ಯಡಿಯೂರಪ್ಪನವರು ನೀಡಿದ ಸ್ಮರಣೀಯ ಕೊಡುಗೆ ಬಗ್ಗೆ ಮಾತನಾಡಲು ಯಾವ ಪದಗಳೂ ನ್ಯಾಯ ಒದಗಿಸುವುದಿಲ್ಲ. ಅರ್ಥಾತ್​ ಪದಗಳೇ ಇಲ್ಲ. ಅದೆಷ್ಟೋ ದಶಕಗಳಿಂದ ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕಾಗಿ ಶ್ರಮವಹಿಸಿ ದುಡಿದಿದ್ದಾರೆ. ಪಕ್ಷ ಸಂಘಟನೆಗಾಗಿ ಕರ್ನಾಟಕವನ್ನು ಸುತ್ತಿದ್ದಾರೆ. ಪಕ್ಷವನ್ನು ಜನರು ಒಪ್ಪಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ ಅಭಿವೃದ್ಧಿ ಕಾರ್ಯಗಳಿಂದ ಮೆಚ್ಚುಗೆ ಪಡೆದಿದ್ದಾರೆ ಎಂದು ಹೊಗಳಿದ್ದಾರೆ.

ನೂತನ ಸಿಎಂಗೆ ಅಭಿನಂದನೆ ಹಾಗೇ, ಪ್ರಧಾನಿ ಮೋದಿಯವರು ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಶುಭಹಾರೈಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಬೊಮ್ಮಾಯಿಯವರಿಗೆ ಶಾಸಕಾಂಗ ಮತ್ತು ಆಡಳಿತಾತ್ಮಕವಾಗಿ ಅಪಾರ ಅನುಭವ ಇದೆ. ಈಗಾಗಲೇ ಕರ್ನಾಟಕದಲ್ಲಿ ನಮ್ಮ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗುತ್ತಾರೆಂಬ ಆತ್ಮವಿಶ್ವಾಸ ನನಗೆ ಇದೆ. ಅವರ ಮುಂದಿನ ಆಡಳಿತಕ್ಕೆ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ, ಎದ್ದು ಕಾಣುತ್ತಿತ್ತು ಕೆ.ಎಸ್.ಈಶ್ವರಪ್ಪ ಅನುಪಸ್ಥಿತಿ

Published On - 12:15 pm, Wed, 28 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ