AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ: ನೂತನ ಸಿಎಂಗೆ ಅಭಿನಂದನೆ

PM Narendra Modi: ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ: ನೂತನ ಸಿಎಂಗೆ ಅಭಿನಂದನೆ
ನಿರ್ಗಮಿತ ಮತ್ತು ನೂತನ ಮುಖ್ಯಮಂತ್ರಿ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Jul 28, 2021 | 12:16 PM

Share

ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಚರ್ಚೆ ಉತ್ತುಂಗದಲ್ಲಿದ್ದಾಗಲೂ ಬಿಜೆಪಿ ಹೈಕಮಾಂಡ್ ಮೌನವಾಗಿಯೇ ಇತ್ತು. ಅಂತೂ ಯಡಿಯೂರಪ್ಪ ರಾಜೀನಾಮೆ ನೀಡಿದರು..ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

ಇಂದು ಯಡಿಯೂರಪ್ಪನವರ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಬಿಜೆಪಿ ಪಕ್ಷ ಮತ್ತು ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಗೆ ಯಡಿಯೂರಪ್ಪನವರು ನೀಡಿದ ಸ್ಮರಣೀಯ ಕೊಡುಗೆ ಬಗ್ಗೆ ಮಾತನಾಡಲು ಯಾವ ಪದಗಳೂ ನ್ಯಾಯ ಒದಗಿಸುವುದಿಲ್ಲ. ಅರ್ಥಾತ್​ ಪದಗಳೇ ಇಲ್ಲ. ಅದೆಷ್ಟೋ ದಶಕಗಳಿಂದ ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕಾಗಿ ಶ್ರಮವಹಿಸಿ ದುಡಿದಿದ್ದಾರೆ. ಪಕ್ಷ ಸಂಘಟನೆಗಾಗಿ ಕರ್ನಾಟಕವನ್ನು ಸುತ್ತಿದ್ದಾರೆ. ಪಕ್ಷವನ್ನು ಜನರು ಒಪ್ಪಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ ಅಭಿವೃದ್ಧಿ ಕಾರ್ಯಗಳಿಂದ ಮೆಚ್ಚುಗೆ ಪಡೆದಿದ್ದಾರೆ ಎಂದು ಹೊಗಳಿದ್ದಾರೆ.

ನೂತನ ಸಿಎಂಗೆ ಅಭಿನಂದನೆ ಹಾಗೇ, ಪ್ರಧಾನಿ ಮೋದಿಯವರು ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಶುಭಹಾರೈಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಬೊಮ್ಮಾಯಿಯವರಿಗೆ ಶಾಸಕಾಂಗ ಮತ್ತು ಆಡಳಿತಾತ್ಮಕವಾಗಿ ಅಪಾರ ಅನುಭವ ಇದೆ. ಈಗಾಗಲೇ ಕರ್ನಾಟಕದಲ್ಲಿ ನಮ್ಮ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗುತ್ತಾರೆಂಬ ಆತ್ಮವಿಶ್ವಾಸ ನನಗೆ ಇದೆ. ಅವರ ಮುಂದಿನ ಆಡಳಿತಕ್ಕೆ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ, ಎದ್ದು ಕಾಣುತ್ತಿತ್ತು ಕೆ.ಎಸ್.ಈಶ್ವರಪ್ಪ ಅನುಪಸ್ಥಿತಿ

Published On - 12:15 pm, Wed, 28 July 21

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್