AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಎಲೆಕ್ಷನ್​ನಲ್ಲಿ ಅಧಿಕ ಸ್ಥಾನ, ಬಿಎಸ್​ವೈ ಜೊತೆ ದೂರವಾಣಿಯಲ್ಲಿ ಮೋದಿ ಮಾತು

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರಧಾನಿ ಮೋದಿ ಕರೆ ಮಾಡಿ ಮತ್ತೊಮ್ಮೆ ಅಭಿನಂದನೆ ತಿಳಿಸಿದ್ದಾರೆ. ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಸಿಎಂಗೆ ಭರವಸೆ ನೀಡಿದ್ದಾರೆ. ಜೊತೆಗೆ ರಾಜ್ಯಕ್ಕೆ ಬರಬೇಕಾದ ಜಿಎಸ್​ಟಿ ತೆರಿಗೆಯ ಪಾಲು ಕೊಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ರಾಜ್ಯದ ತೆರಿಗೆ ಸಂಗ್ರಹ, ಅಭಿವೃದ್ಧಿ ಕುರಿತು ಸಿಎಂ ಅವರಿಂದ ಮಾಹಿತಿ ಪಡೆದ ಪ್ರಧಾನಿ, […]

ಬೈಎಲೆಕ್ಷನ್​ನಲ್ಲಿ ಅಧಿಕ ಸ್ಥಾನ, ಬಿಎಸ್​ವೈ ಜೊತೆ ದೂರವಾಣಿಯಲ್ಲಿ ಮೋದಿ ಮಾತು
ಸಾಧು ಶ್ರೀನಾಥ್​
|

Updated on:Dec 14, 2019 | 12:36 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರಧಾನಿ ಮೋದಿ ಕರೆ ಮಾಡಿ ಮತ್ತೊಮ್ಮೆ ಅಭಿನಂದನೆ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಸಿಎಂಗೆ ಭರವಸೆ ನೀಡಿದ್ದಾರೆ. ಜೊತೆಗೆ ರಾಜ್ಯಕ್ಕೆ ಬರಬೇಕಾದ ಜಿಎಸ್​ಟಿ ತೆರಿಗೆಯ ಪಾಲು ಕೊಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

ರಾಜ್ಯದ ತೆರಿಗೆ ಸಂಗ್ರಹ, ಅಭಿವೃದ್ಧಿ ಕುರಿತು ಸಿಎಂ ಅವರಿಂದ ಮಾಹಿತಿ ಪಡೆದ ಪ್ರಧಾನಿ, ಆದಷ್ಟು ಬೇಗ ರಾಜ್ಯದ ಜಿಎಸ್​ಟಿ ಪಾಲು ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ ಸಿಎಬಿ ಮತ್ತು ಎನ್​ಆರ್​ಸಿ ಜಾರಿ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಬಿಎಸ್​ವೈರಿಂದ ಮಾಹಿತಿ ಪಡೆದಿದ್ದಾರೆ.

Published On - 12:34 pm, Sat, 14 December 19