AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ

Pratap Simha Birthday: ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹ
TV9 Web
| Edited By: |

Updated on:Jun 21, 2021 | 6:22 PM

Share

ಮೈಸೂರು: ಇಂದು ಮೈಸೂರು,ಕೊಡಗು ಸಂಸದ ಪ್ರತಾಪ್ ಸಿಂಹ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಪತ್ರ ಬರೆದು ಪ್ರತಾಪ್ ಸಿಂಹ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಪ್ರತಾಪ್ ಸಿಂಹ ದೀರ್ಘಕಾಲ ಆರೋಗ್ಯಯುತವಾಗಿ ಜೀವಿಸುವಂತಾಗಲಿ ಹಾಗೂ ಜೀವನದ ಪ್ರತಿ ಹೆಜ್ಜೆಯಲ್ಲೂ ಯಶಸ್ಸು ದೊರೆಯುವಂತಾಗಲಿ. ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಪತ್ರದ ಪ್ರತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Pratap Simha Wish

ಶುಭಕೋರಿರುವ ಪತ್ರ

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ: ಸಂಸದ ಪ್ರತಾಪ್ ಸಿಂಹ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದಲ್ಲಿ ಚಾಮರಾಜನಗರಕ್ಕೆ ಏಕೆ ಆಕ್ಸಿಜನ್ ಹೋಗಿಲ್ಲವೆಂದು ಗೊತ್ತಿದೆ. ಆದರೆ ಆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಫೇಸ್​ಬುಕ್ ಪೋಸ್ಟ್ ಒಂದರಲ್ಲಿ ಇತ್ತೀಚಿಗೆ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ನಮ್ಮ ಪಕ್ಷವೇ ಆಡಳಿತ ನಡೆಸುತ್ತಿದೆ. ಎಲ್ಲಾ ಅಧಿಕಾರಿಗಳು ನಮ್ಮ ಅಧೀನದಲ್ಲೇ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸತ್ಯಗಳನ್ನು ಹೇಳಲು ಆಗಲ್ಲ. ಸದ್ಯ ಅದ್ಯಾವುದೋ ತೇಪೆ ಹಚ್ಚುವ ವರದಿಯನ್ನು ಕೊಟ್ಟಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ, ಅದರ ಸತ್ಯಾಂಶ ಗೊತ್ತಾಗಲಿದೆ. ಸಚಿವ ಸುರೇಶ್ ಕುಮಾರ್‌ ನಮ್ಮ ಡಿಸಿ ಬಗ್ಗೆ ಆರೋಪಿಸಿದ್ದರು. ಮೈಸೂರನ್ನು ಕಟ ಕಟೆಯಲ್ಲಿ ನಿಲ್ಲಸಬಾರದು ಎಂಬ ಕಾರಣಕ್ಕೆ ಮತ್ತು ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಜಗಳವಾಗುತ್ತೆಂದು ಆ ಸಂದರ್ಭದಲ್ಲಿ ನಾನು ಸಮರ್ಥಿಸಿಕೊಂಡಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ, ಆದರೆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗದು: ಸಂಸದ ಪ್ರತಾಪ್ ಸಿಂಹ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

(PM Narendra Modi wishes Mysuru Kodagu MP Pratap Simha on his birthady in Kannada)

Published On - 6:07 pm, Mon, 21 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!