AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ

Pratap Simha Birthday: ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹ
TV9 Web
| Updated By: guruganesh bhat|

Updated on:Jun 21, 2021 | 6:22 PM

Share

ಮೈಸೂರು: ಇಂದು ಮೈಸೂರು,ಕೊಡಗು ಸಂಸದ ಪ್ರತಾಪ್ ಸಿಂಹ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಪತ್ರ ಬರೆದು ಪ್ರತಾಪ್ ಸಿಂಹ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಪ್ರತಾಪ್ ಸಿಂಹ ದೀರ್ಘಕಾಲ ಆರೋಗ್ಯಯುತವಾಗಿ ಜೀವಿಸುವಂತಾಗಲಿ ಹಾಗೂ ಜೀವನದ ಪ್ರತಿ ಹೆಜ್ಜೆಯಲ್ಲೂ ಯಶಸ್ಸು ದೊರೆಯುವಂತಾಗಲಿ. ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಪತ್ರದ ಪ್ರತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Pratap Simha Wish

ಶುಭಕೋರಿರುವ ಪತ್ರ

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ: ಸಂಸದ ಪ್ರತಾಪ್ ಸಿಂಹ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದಲ್ಲಿ ಚಾಮರಾಜನಗರಕ್ಕೆ ಏಕೆ ಆಕ್ಸಿಜನ್ ಹೋಗಿಲ್ಲವೆಂದು ಗೊತ್ತಿದೆ. ಆದರೆ ಆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಫೇಸ್​ಬುಕ್ ಪೋಸ್ಟ್ ಒಂದರಲ್ಲಿ ಇತ್ತೀಚಿಗೆ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ನಮ್ಮ ಪಕ್ಷವೇ ಆಡಳಿತ ನಡೆಸುತ್ತಿದೆ. ಎಲ್ಲಾ ಅಧಿಕಾರಿಗಳು ನಮ್ಮ ಅಧೀನದಲ್ಲೇ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸತ್ಯಗಳನ್ನು ಹೇಳಲು ಆಗಲ್ಲ. ಸದ್ಯ ಅದ್ಯಾವುದೋ ತೇಪೆ ಹಚ್ಚುವ ವರದಿಯನ್ನು ಕೊಟ್ಟಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ, ಅದರ ಸತ್ಯಾಂಶ ಗೊತ್ತಾಗಲಿದೆ. ಸಚಿವ ಸುರೇಶ್ ಕುಮಾರ್‌ ನಮ್ಮ ಡಿಸಿ ಬಗ್ಗೆ ಆರೋಪಿಸಿದ್ದರು. ಮೈಸೂರನ್ನು ಕಟ ಕಟೆಯಲ್ಲಿ ನಿಲ್ಲಸಬಾರದು ಎಂಬ ಕಾರಣಕ್ಕೆ ಮತ್ತು ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಜಗಳವಾಗುತ್ತೆಂದು ಆ ಸಂದರ್ಭದಲ್ಲಿ ನಾನು ಸಮರ್ಥಿಸಿಕೊಂಡಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ, ಆದರೆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗದು: ಸಂಸದ ಪ್ರತಾಪ್ ಸಿಂಹ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

(PM Narendra Modi wishes Mysuru Kodagu MP Pratap Simha on his birthady in Kannada)

Published On - 6:07 pm, Mon, 21 June 21

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್