AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ

Pratap Simha Birthday: ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹ
TV9 Web
| Edited By: |

Updated on:Jun 21, 2021 | 6:22 PM

Share

ಮೈಸೂರು: ಇಂದು ಮೈಸೂರು,ಕೊಡಗು ಸಂಸದ ಪ್ರತಾಪ್ ಸಿಂಹ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಪತ್ರ ಬರೆದು ಪ್ರತಾಪ್ ಸಿಂಹ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಪ್ರತಾಪ್ ಸಿಂಹ ದೀರ್ಘಕಾಲ ಆರೋಗ್ಯಯುತವಾಗಿ ಜೀವಿಸುವಂತಾಗಲಿ ಹಾಗೂ ಜೀವನದ ಪ್ರತಿ ಹೆಜ್ಜೆಯಲ್ಲೂ ಯಶಸ್ಸು ದೊರೆಯುವಂತಾಗಲಿ. ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಪತ್ರದ ಪ್ರತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Pratap Simha Wish

ಶುಭಕೋರಿರುವ ಪತ್ರ

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ: ಸಂಸದ ಪ್ರತಾಪ್ ಸಿಂಹ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದಲ್ಲಿ ಚಾಮರಾಜನಗರಕ್ಕೆ ಏಕೆ ಆಕ್ಸಿಜನ್ ಹೋಗಿಲ್ಲವೆಂದು ಗೊತ್ತಿದೆ. ಆದರೆ ಆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಫೇಸ್​ಬುಕ್ ಪೋಸ್ಟ್ ಒಂದರಲ್ಲಿ ಇತ್ತೀಚಿಗೆ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ನಮ್ಮ ಪಕ್ಷವೇ ಆಡಳಿತ ನಡೆಸುತ್ತಿದೆ. ಎಲ್ಲಾ ಅಧಿಕಾರಿಗಳು ನಮ್ಮ ಅಧೀನದಲ್ಲೇ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸತ್ಯಗಳನ್ನು ಹೇಳಲು ಆಗಲ್ಲ. ಸದ್ಯ ಅದ್ಯಾವುದೋ ತೇಪೆ ಹಚ್ಚುವ ವರದಿಯನ್ನು ಕೊಟ್ಟಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ, ಅದರ ಸತ್ಯಾಂಶ ಗೊತ್ತಾಗಲಿದೆ. ಸಚಿವ ಸುರೇಶ್ ಕುಮಾರ್‌ ನಮ್ಮ ಡಿಸಿ ಬಗ್ಗೆ ಆರೋಪಿಸಿದ್ದರು. ಮೈಸೂರನ್ನು ಕಟ ಕಟೆಯಲ್ಲಿ ನಿಲ್ಲಸಬಾರದು ಎಂಬ ಕಾರಣಕ್ಕೆ ಮತ್ತು ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಜಗಳವಾಗುತ್ತೆಂದು ಆ ಸಂದರ್ಭದಲ್ಲಿ ನಾನು ಸಮರ್ಥಿಸಿಕೊಂಡಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ, ಆದರೆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗದು: ಸಂಸದ ಪ್ರತಾಪ್ ಸಿಂಹ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

(PM Narendra Modi wishes Mysuru Kodagu MP Pratap Simha on his birthady in Kannada)

Published On - 6:07 pm, Mon, 21 June 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ