AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ

Pratap Simha Birthday: ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹ
TV9 Web
| Edited By: |

Updated on:Jun 21, 2021 | 6:22 PM

Share

ಮೈಸೂರು: ಇಂದು ಮೈಸೂರು,ಕೊಡಗು ಸಂಸದ ಪ್ರತಾಪ್ ಸಿಂಹ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಪತ್ರ ಬರೆದು ಪ್ರತಾಪ್ ಸಿಂಹ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಪ್ರತಾಪ್ ಸಿಂಹ ದೀರ್ಘಕಾಲ ಆರೋಗ್ಯಯುತವಾಗಿ ಜೀವಿಸುವಂತಾಗಲಿ ಹಾಗೂ ಜೀವನದ ಪ್ರತಿ ಹೆಜ್ಜೆಯಲ್ಲೂ ಯಶಸ್ಸು ದೊರೆಯುವಂತಾಗಲಿ. ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಪತ್ರದ ಪ್ರತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Pratap Simha Wish

ಶುಭಕೋರಿರುವ ಪತ್ರ

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ: ಸಂಸದ ಪ್ರತಾಪ್ ಸಿಂಹ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದಲ್ಲಿ ಚಾಮರಾಜನಗರಕ್ಕೆ ಏಕೆ ಆಕ್ಸಿಜನ್ ಹೋಗಿಲ್ಲವೆಂದು ಗೊತ್ತಿದೆ. ಆದರೆ ಆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಫೇಸ್​ಬುಕ್ ಪೋಸ್ಟ್ ಒಂದರಲ್ಲಿ ಇತ್ತೀಚಿಗೆ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ನಮ್ಮ ಪಕ್ಷವೇ ಆಡಳಿತ ನಡೆಸುತ್ತಿದೆ. ಎಲ್ಲಾ ಅಧಿಕಾರಿಗಳು ನಮ್ಮ ಅಧೀನದಲ್ಲೇ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸತ್ಯಗಳನ್ನು ಹೇಳಲು ಆಗಲ್ಲ. ಸದ್ಯ ಅದ್ಯಾವುದೋ ತೇಪೆ ಹಚ್ಚುವ ವರದಿಯನ್ನು ಕೊಟ್ಟಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ, ಅದರ ಸತ್ಯಾಂಶ ಗೊತ್ತಾಗಲಿದೆ. ಸಚಿವ ಸುರೇಶ್ ಕುಮಾರ್‌ ನಮ್ಮ ಡಿಸಿ ಬಗ್ಗೆ ಆರೋಪಿಸಿದ್ದರು. ಮೈಸೂರನ್ನು ಕಟ ಕಟೆಯಲ್ಲಿ ನಿಲ್ಲಸಬಾರದು ಎಂಬ ಕಾರಣಕ್ಕೆ ಮತ್ತು ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಜಗಳವಾಗುತ್ತೆಂದು ಆ ಸಂದರ್ಭದಲ್ಲಿ ನಾನು ಸಮರ್ಥಿಸಿಕೊಂಡಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ, ಆದರೆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗದು: ಸಂಸದ ಪ್ರತಾಪ್ ಸಿಂಹ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

(PM Narendra Modi wishes Mysuru Kodagu MP Pratap Simha on his birthady in Kannada)

Published On - 6:07 pm, Mon, 21 June 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು