Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಯ: ಪ್ರಧಾನಿ ಮೋದಿಯೇ ಸೂಚಿಸಿದರೂ ಊರಿನ ಬೇಡಿಕೆ ಈಡೇರಲಿಲ್ಲ! ಆಗ ಗ್ರಾಮಸ್ಥರು ಏನು ಮಾಡಿದರು ಗೊತ್ತಾ?

PMO: ತಕ್ಷಣವೇ ಪ್ರಧಾನಿ ಕಾರ್ಯಾಲಯದಿಂದ ಸಮಸ್ಯೆ ಬಗೆಹರಿಸುವಂತೆ ದ.ಕ. ಜಿಲ್ಲಾ ಪಂಚಾಯತ್ ಗೆ  ಸೂಚನೆ ಬಂದಿತು. ಪ್ರಧಾನಿಯೇ ಸೂಚಿಸಿದರೂ ಸ್ಥಳೀಯ ಅಧಿಕಾರಿಗಳು ಇಚ್ಛಾ ಶಕ್ತಿ ಮೆರೆಯಲಿಲ್ಲ. ಇನ್ನೂ ಕಾದರೆ ಪ್ರಯೋಜನವಿಲ್ಲ ಅಂತಾ ತಾವೇ ಸಮಸ್ಯೆ ಬಗೆಹರಿಸಲು ಗುತ್ತಿಗಾರು ಗ್ರಾಮಸ್ಥರು ಮುಂದಾದರು.

ಸುಳ್ಯ: ಪ್ರಧಾನಿ ಮೋದಿಯೇ ಸೂಚಿಸಿದರೂ ಊರಿನ ಬೇಡಿಕೆ ಈಡೇರಲಿಲ್ಲ! ಆಗ ಗ್ರಾಮಸ್ಥರು ಏನು ಮಾಡಿದರು ಗೊತ್ತಾ?
ಸುಳ್ಯ: ಪ್ರಧಾನಿ ಮೋದಿಯೇ ಸೂಚಿಸಿದರೂ ಊರಿನ ಜನೋಪಯೋಗಿ ಬೇಡಿಕೆ ಈಡೇರಲಿಲ್ಲ! ಆಗ ಗ್ರಾಮಸ್ಥರು ಏನು ಮಾಡಿದರು ಗೊತ್ತಾ?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 25, 2021 | 12:41 PM

ಮಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಸೂಚಿಸಿದರೂ ಊರಿನ ಬಹು ಜನೋಪಯೋಗಿ ಬೇಡಿಕೆಯೊಂದು ಈಡೇರಿಲ್ಲ! ಆದರೆ ತಮ್ಮ ಗುರಿಯಿಂದ ವಿಮುಖರಾಗದ ಗ್ರಾಮಸ್ಥರು ತಾವೇ, ಸ್ವಂತ ಖರ್ಚಿನಲ್ಲಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ! ದಕ್ಷಿಣ ಕ‌ನ್ನಡ ಜಿಲ್ಲೆಯ ಸುಳ್ಯ (Sullia) ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಬಳಿಯ ಜನ ಇಂತಹ ವಿಪರ್ಯಾಸ ಪ್ರಸಂಗಕ್ಕೆ  ಸಾಕ್ಷಿಯಾಗಿದ್ದಾರೆ. 

ಇದು ಸಚಿವ ಎಸ್ ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿದೆ! ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಬಳಿಯ ಜನ ತಮ್ಮೂರಿನ ಹೊಳೆಗೆ ಶಾಶ್ವತ ಸೇತುವೆ ಬೇಕೆಂಬುದು ಪುರಾತನ ಮನವಿಯಾಗಿತ್ತು. ಸ್ಥಳೀಯ ಶಾಸಕ ಮತ್ತು ಸಚಿವರುಗಳಿಗೆ ಮನವಿ ಸಲ್ಲಿಸಿ, ಸಲ್ಲಿಸಿ ಪ್ರಯೋಜನಕಾರಿಯಾಗದೇ ನೇರವಾಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಮನವಿ ಮಾಡಿದ್ದರು.  ಗ್ರಾಮಸ್ಥರು ತಾವೇ ವಿಡಿಯೋ ಸಿ.ಡಿ.  ಕಳುಹಿಸಿ ಸೇತುವೆಗೆ ಮನವಿ ಮಾಡಿದ್ದರು.

ತಕ್ಷಣವೇ ಪ್ರಧಾನಿ ಕಾರ್ಯಾಲಯದಿಂದ (PMO) ಸಮಸ್ಯೆ ಬಗೆಹರಿಸುವಂತೆ ದ.ಕ. ಜಿಲ್ಲಾ ಪಂಚಾಯತ್ ಗೆ  ಸೂಚನೆ ಬಂದಿತು. ಪ್ರಧಾನಿಯೇ ಸೂಚಿಸಿದರೂ ಸ್ಥಳೀಯ ಅಧಿಕಾರಿಗಳು ಇಚ್ಛಾ ಶಕ್ತಿ ಮೆರೆಯಲಿಲ್ಲ. ಇನ್ನೂ ಕಾದರೆ ಪ್ರಯೋಜನವಿಲ್ಲ ಅಂತಾ ತಾವೇ ಸಮಸ್ಯೆ ಬಗೆಹರಿಸಲು ಗುತ್ತಿಗಾರು ಗ್ರಾಮಸ್ಥರು ಮುಂದಾದರು.

PMO intimation also fail to yield essential bridge for guthigaru village in sullia dakshina kannada 2

ಗ್ರಾಮಸ್ಥರು ತಾವೇ ವಿಡಿಯೋ ಸಿ.ಡಿ.  ಕಳುಹಿಸಿ ಸೇತುವೆಗೆ ಮನವಿ ಮಾಡಿದ್ದರು.

ಅಂದಹಾಗೆ ಸುಳ್ಯದ ಈ ಗುತ್ತಿಗಾರು ಗ್ರಾಮವು (Guthigaru Village ) ಸಚಿವ ಎಸ್. ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿದೆ! ಆದರೆ ಇಲ್ಲಿನ ಜನಪ್ರತಿನಿಧಿಗಳು ನೂರಾರು ಬಾರಿ ಮನವಿ ಮಾಡಿದರೂ ಗಣನೆಗೆ ತೆಗೆದುಕೊಳ್ಳಲಿಲ್ಲ. ಆಗ ಗ್ರಾಮಸ್ಥರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ (Crowd Fund) ತಾತ್ಕಾಲಿಕ ಕಬ್ಬಿಣದ ಸೇತುವೆಯನ್ನು ತಯಾರಿಸಿದರು.

ಗ್ರಾಮಸ್ಥರೇ ಮುಂದೆ ಬಂದು ತಮಗೆ ಅತ್ಯವಶ್ಯಕವಾಗಿದ್ದ ಸೇತುವೆ ನಿರ್ಮಾಣ ಕಾಮಗಾರಿ (Guthigaru Mogra Bridge) ಕೈಗೊಂಡರು. ಹಲವು ದಶಕಗಳಿಂದ ಎದುರಿಸುತ್ತಿದ್ದ ತೀವ್ರ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಸ್ಥರೇ ಮುಂದಾದರು. ಹೊಳೆಯ ಇನ್ನೊಂದು ಭಾಗದಲ್ಲಿರುವ ಶಾಲೆ ಮತ್ತು ಅಂಗನವಾಡಿ ಕೇಂದ್ರ ತಲುಪುವುದು ಗುತ್ತಿಗಾರು ಗ್ರಾಮಸ್ಥರ ಅಗತ್ಯವಾಗಿತ್ತು. ಮಳೆಗಾಲದ ಸಂದರ್ಭದಲ್ಲಿ ಪೋಷಕರು ಹೊಳೆಯಲ್ಲಿ ಮಕ್ಕಳನ್ನು ಹಿಡಿದು ಶಾಲೆಗೆ ತಲುಪಿಸುತ್ತಿದ್ದರು. ಅದನ್ನು ಅನೇಕ ಬಾರಿ ನೋಡಿಯೂ ಇಲ್ಲಿನ ಜನಪ್ರತಿನಿಧಿಗಳು/ ಅಧಿಕಾರಿಗಳ ಮನಸ್ಸು ಕರಗಿರಲಿಲ್ಲ; ತಮ್ಮ ಜವಾಬ್ದಾರಿಯನ್ನೂ ಪೂರೈಸಲಿಲ್ಲ ಎಂಬುದು ಖೇದಕರ ಸಂಗತಿ.

(PMO intimation also fail to yield essential bridge for guthigaru village in sullia dakshina kannada)

Published On - 12:40 pm, Fri, 25 June 21

ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!