AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ

ಪೊಕ್ಸೊ ಕಾಯ್ದೆ ಆರೋಪಿ ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು, ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ ಹಾಗೂ ಸಂತ್ರಸ್ತೆ‌ ಕೋರ್ಟಗೆ ಅರ್ಜಿ ಹಾಕಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾದ ಪೋಕ್ಸೋ ಆರೋಪಿ; ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ ಹೈಕೋರ್ಟ್ ಏಕಸದಸ್ಯ ಪೀಠ
ಕರ್ನಾಟಕ್​ ಹೈಕೋರ್ಟ್​
TV9 Web
| Updated By: ವಿವೇಕ ಬಿರಾದಾರ|

Updated on: Aug 24, 2022 | 8:16 PM

Share

ಬೆಂಗಳೂರು: ಪೋಕ್ಸೋ ಕಾಯ್ದೆ (Pocso Act) ಆರೋಪಿ, ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗಿದ್ದು,  ಈಗ  ಪ್ರಕರಣವನ್ನು ರದ್ದು ಪಡಿಸುವಂತೆ ಆರೋಪಿ (Accused) ಹಾಗೂ ಸಂತ್ರಸ್ತೆ‌ ಹೈಕೋರ್ಟಗೆ (Court) ಅರ್ಜಿ ಹಾಕಿದ್ದಾರೆ. 2019 ರಲ್ಲಿ ಯುವತಿಯ ತಂದೆ, ಆರೋಪಿ ವಿರುದ್ಧ ಅಪಹರಣ ಮತ್ತು ಪೊಕ್ಸೋ ಪ್ರಕರಣ ದಾಖಲಿಸಿದ್ದರು. ದೂರಿನ ಹಿನ್ನೆಲೆ ಆರೋಪಿ 18 ತಿಂಗಳು ಜೈಲಿನಲ್ಲಿದ್ದನು.

ಈಗ ಆರೋಪಿ ಮತ್ತು ಸಂತ್ರಸ್ತೆ‌ ವಿವಾಹದ‌ ಸರ್ಟಿಫಿಕೇಟ್​ನ್ನು ಕೋರ್ಟಗೆ ಸಲ್ಲಿಸಿದ್ದಾರೆ. ಜೊತೆಗೆ  ಆರೋಪಿಯನ್ನೇ ಮದುವೆಯಾಗಿ ಮಗುವಿಗೆ ಜನ್ಮ ನೀಡಿರುವುದಾಗಿ ಸಂತ್ರಸ್ತೆ‌ ಪ್ರಮಾಣಪತ್ರವನ್ನು ಕೋರ್ಟಗೆ ಹಾಜರುಪಡಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ರದ್ದು ಮಾಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಯುವತಿ ತಾನು ಅಪ್ರಾಪ್ತಳಾಗಿದ್ದಾಗ ಪ್ರೀತಿಸಿದ್ದಾಗಿ, ವಯಸ್ಕಳಾದ ನಂತರ ಆತನನ್ನೇ ವಿವಾಹವಾಗಿರುವುದಾಗಿ ಹೇಳಿಕೆ ನೀಡಿದ್ದಾಳೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂಥ ಕೇಸ್​ಗಳಲ್ಲಿ ಅತ್ಯಾಚಾರ ಆರೋಪ ಸಾಬೀತು ಪಡಿಸುವುದು ಕಷ್ಟ. ಪ್ರಕರಣ ಮುಂದುವರಿಸುವುದರಿಂದ ದಂಪತಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ