AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murugha Mutt: ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಲಿರುವ ಮುರುಘಾ ಶ್ರೀ

ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ.

Murugha Mutt: ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಲಿರುವ ಮುರುಘಾ ಶ್ರೀ
ಮುರುಘಾ ಮಠದ ಶ್ರೀಗಳು
Follow us
TV9 Web
| Updated By: Rakesh Nayak Manchi

Updated on:Sep 03, 2022 | 6:49 AM

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಶ್ರೀಗಳನ್ನು ನ್ಯಾಯಾಲಯವು 3 ದಿನ ಕಸ್ಟಡಿಗೆ ಒಪ್ಪಿಸಿದ ನಂತರ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಶ್ರೀಗಳ ಪರ ವಕೀಲರು ಕೂಡ ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ಟಿವಿ9 ಜೊತೆ ಮಾತನಾಡಿದ ವಕೀಲ ಉಮೇಶ್, ಶನಿವಾರ (ಸೆ.3) ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ಪೊಲೀಸರು ಕಸ್ಟಡಿಗೆ ಪಡೆದುಕೊಂಡ ಹಿನ್ನೆಲೆ ಇಂದು ಶ್ರೀಗಳನ್ನು ವಿಚಾರಣೆ ನಡೆಸಲಿದ್ದಾರೆ. ಪೋಕ್ಸೋ ಕೇಸ್‌ ಮತ್ತು ಅಟ್ರಾಸಿಟಿ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲಿದ್ದು, ಚಿತ್ರದುರ್ಗ ಡಿವೈಎಸ್​ಪಿ ಕಚೇರಿಯಲ್ಲಿಯೇ ವಿಚಾರಣೆ ನಡೆಯಲಿದೆ. ನಿನ್ನೆ ನಿರಂತರ ಎರಡು ಗಂಟೆಗಳ ಕಾಲ ಡಿವೈಎಸ್​ಪಿ ನೇತೃತ್ವದಲ್ಲಿ ವಿಚಾರಣೆ ನಡೆದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ನಿನ್ನೆ ರಾತ್ರಿ 8 ಗಂಟೆಗೆ ಡಿವೈಎಸ್​ಪಿ ಕಚೇರಿಗೆ ಕರೆದೊಯ್ದು ವಿಚಾರಣೆ ಆರಂಭಿಸಲಾಗಿದೆ.

ಮಠದ ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಶ್ರೀಗಳು ಎ1 ಆರೋಪಿಯಾಗಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ನಿರೀಕ್ಷಣ ಜಾಮೀನು ಕೋರಿ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೆ ಗುರುವಾರ ರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು, ನ್ಯಾಯಾಲಯವು ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆದರೆ ಶುಕ್ರವಾರ ಎದೆನೋವು ಕಂಡುಬಂದ ಹಿನ್ನೆಲೆ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನೊಂದೆಡೆ ಒಂದು ದಿನದ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆ ಶ್ರೀಗಳನ್ನು ಕೋರ್ಟ್​ಗೆ ಹಾಜರುಪಡಿಸಬೇಕಿತ್ತು. ಆದರೆ ಅವರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಪೊಲೀಸರೇ ಶುಕ್ರವಾರ ಕೋರ್ಟ್​ಗೆ ತೆರಳಿ ಆರೋಪಿಯನ್ನು ಐದು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಈ ವೇಳೆ ಆರೋಪಿಯನ್ನು ತಮ್ಮ ಗಮನಕ್ಕೆ ತರದೆ ಆಸ್ಪತ್ರೆಗೆ ಹೇಗೆ ದಾಖಲಿಸಿದ್ದೀರಿ ಎಂದು ಪ್ರಶ್ನಿಸಿದ ಕೋರ್ಟ್, ಕೂಡಲೇ ಆರೋಪಿಯನ್ನು ಕೋರ್ಟ್​ಗೆ ಹಾಜರುಪಡಿಸಿ ಎಂದು ಸೂಚಿಸಿತ್ತು.

ಅದರಂತೆ ಪೊಲೀಸರು ಆರೋಪಿ ಶ್ರೀಗಳನ್ನು ಕೋರ್ಟ್​ಗೆ ಹಾಜರುಪಡಿಸಿದ್ದು, ನ್ಯಾಯಾಲಯವು 3 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಿತು. ಇದರ ಬೆನ್ನಲ್ಲೆ ಟಿವಿ9ಗೆ ಹೇಳಿಕೆ ನೀಡಿದ ಶ್ರೀಗಳ ಪರ ವಕೀಲರು ಶನಿವಾರ ಜಾಮೀನು ಕೋರಿ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sat, 3 September 22

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ