AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಎಸ್‌ಪಿಪಿಯಾಗಿ ಅಶೋಕ್ ಎನ್ ನಾಯಕ್ ನೇಮಿಸಿದ ಸರ್ಕಾರ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬಿ.ಎಸ್.ಯಡಿಯೂರಪ್ಪ ಬಂಧನಕ್ಕೂ ಸಿದ್ಧತೆ ನಡೆಸಿದೆ. ಇನ್ನು ಸಂತ್ರಸ್ತೆಯ ಸಹೋದರ ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಎಸ್‌ಪಿಪಿಯಾಗಿ ಅಶೋಕ್ ಎನ್ ನಾಯಕ್ ನೇಮಿಸಿದ ಸರ್ಕಾರ
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಎಸ್‌ಪಿಪಿಯಾಗಿ ಅಶೋಕ್ ಎನ್ ನಾಯಕ್ ನೇಮಿಸಿದ ಸರ್ಕಾರ
Ramesha M
| Edited By: |

Updated on: Jun 12, 2024 | 7:15 PM

Share

ಬೆಂಗಳೂರು, ಜೂನ್​ 12: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ (POCSO Case) ಸಂತ್ರಸ್ತೆಯ ಸಹೋದರನಿಂದ ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್​ರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಯಡಿಯೂರಪ್ಪ ಬಂಧನಕ್ಕೂ ಸರ್ಕಾರ ಸಿದ್ಧತೆ ನಡೆಸಿದೆ.

ಹೈಕೋರ್ಟ್‌ಗೆ ರಿಟ್​ ಅರ್ಜಿ ಸಲ್ಲಿಸಿರುವ ಸಂತ್ರಸ್ತೆಯ ಸಹೋದರ ಘಟನೆ ನಡೆದು ಹಲವು ತಿಂಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಕನಿಷ್ಠ 41A ಅಡಿ ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆದಿಲ್ಲ.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ

ಈ ಮಧ್ಯೆ ದೂರು ನೀಡಿದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ದೂರುದಾರೆ ಸಾವು

ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ