AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್​ ಮಹತ್ವದ ಆದೇಶದಿಂದಾಗಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಬಂಧನದಿಂದ ಬಚಾವ್ ಆಗಿದ್ದಾರೆ.

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಬಿಎಸ್ ಯಡಿಯೂರಪ್ಪ
Ramesha M
| Edited By: |

Updated on:Jul 26, 2024 | 5:09 PM

Share

ಬೆಂಗಳೂರು, (ಜುಲೈ 26): ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್​ ಮತ್ತೆ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜುಲೈ 26) ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ತಾಯಿ ಮಾರ್ಚ್​ 3 ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.  ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ 2 ಬಾರಿ ನೋಟಿಸ್​ ನೀಡಿದ್ದರು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ಮಧ್ಯಂತರ ಜಾಮೀನು ವಿಸ್ತರಣೆ

ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ಇದರಿಂದಾಗಿ ಮಾಜಿ ಸಿಎಂ ಬಂಧನ ಭೀತಿಯಿಂದ ನಿರಾಳರಾಗಿದ್ದರು. ಬಳಿಕ ಕೋರ್ಟ್​ ನಿರ್ದೇಶನದಂತೆ ಬಿಎಸ್​ವೈ ಸಿಐಡಿ ಎದುರು ಹಾಜರಾಗಿ ವಿಚಾರಣೆಗೆ ಹಾಜರಾಗಿದ್ದರು.

ಸದ್ಯ ಯಡಿಯೂರಪ್ಪ ಅವರು ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದು, ಇದೀಗ ಕೇಸ್​ ರದ್ದುಗೊಳಿಸುವಂತೆ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:45 pm, Fri, 26 July 24

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು