AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತುಸು ರಿಲೀಫ್

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪದಲ್ಲಿ ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್​​ನಲ್ಲಿ ತುಸು ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಕೋರ್ಟ್ ಮುಂದುವರಿಸಿದೆ.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತುಸು ರಿಲೀಫ್
ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತುಸು ರಿಲೀಫ್
ರಮೇಶ್​ ಎಮ್​.
| Edited By: |

Updated on: Aug 30, 2024 | 1:53 PM

Share

ಬೆಂಗಳೂರು, ಆಗಸ್ಟ್ 30: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ. ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ.

ಮಂತ್ರಿಗಳು ತಪ್ಪು ತಪ್ಪಾಗಿ ಪೋಕ್ಸೋ ಪೋಕ್ಸೋ ಎನ್ನುತ್ತಿದ್ದಾರೆ. ಬರಲಿ, ಮಾಡಿಬಿಡೋಣ ವಾದಮಂಡನೆ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಸವಾಲು ಹಾಕಿದರು. ಇದೇ ವೇಳೆ, ನಾವು ಸಿದ್ಧರಿದ್ದೇವೆ, ಸ್ವಲ್ಪ ಸಮಯ ಬೇಕು ಎಂದು ಎಸ್​ಪಿಪಿ ಅಶೋಕ್ ನಾಯ್ಕ್ ಹೇಳಿದರು. ನೀವು ರೆಡಿ ಆದ್ರೆ ನಾನು ಈಗಲೇ‌ ರೆಡಿ ಎಂದು ನಾಗೇಶ್ ಹೇಳಿದರು. ನಂತರ ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು.

ಪ್ರತಿನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಯಡಿಯೂರಪ್ಪ ವಿರುದ್ಧ ಆರೋಪಿಸುತ್ತಿದ್ದಾರೆ. ಬಿಎಸ್​ವೈ ಶರಣಾಗಬೇಕು, ಜೈಲಿಗೆ ಕಳುಹಿಸುತ್ತೇವೆ ಎನ್ನುತ್ತಿದ್ದಾರೆ. ಮಧ್ಯಂತರ ಆದೇಶ ತೆರವುಗೊಳಿಸುತ್ತೇವೆ ಎನ್ನುತ್ತಿದ್ದಾರೆ. ಈಗ ನೋಡಿದರೆ ವಿಚಾರಣೆ ಮುಂದೂಡಿಕೆ ಕೇಳುತ್ತಿದ್ದಾರೆ. ಬರಲಿ ವಾದ ಮಂಡಿಸಲಿ, ಹಣೆಯಲ್ಲಿ ಬರೆದಿದ್ದರೆ ಜೈಲಿಗೆ ಹೋಗುತ್ತಾರೆ ಎಂದು ವಕೀಲ ನಾಗೇಶ್ ಸವಾಲು ಹಾಕಿದರು.

ಸಿಐಡಿ ಪರ ವಕೀಲರು, ಬಿಎಸ್​ವೈ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಆರೋಪಪಟ್ಟಿಯ ಪ್ರತಿ ಸಲ್ಲಿಸಲು ಕಾಲಾವಕಾಶ ಬೇಕಿದೆ ಎಂದು ಸಿಐಡಿ ಪರ ಎಸ್​ಪಿಪಿ ಅಶೋಕ್ ನಾಯ್ಕ್ ಮನವಿ ಮಾಡಿದರು. ಅಂತಿಮವಾಗಿ ವಿಚಾರಣೆ ಮುಂದೂಡಿಕೆಯಾಯಿತು.

ಇದನ್ನೂ ಓದಿ: ಬಿಎಸ್ ​ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ

ಪ್ರಕರಣ ಸಂಬಂಧ ಜೂನ್​ನಲ್ಲಿ ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಹಳೇ ಕೇಸ್ ಬಗ್ಗೆ ವಿಚಾರಿಸುತ್ತಾ ರೂಮಿಗೆ ಕರೆದೊಯ್ದು ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಯಡಿಯೂರಪ್ಪ ವಿರುದ್ಧದ ಆರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ. ಬಾಲಕಿ ಪ್ರತಿಭಟಿಸಿದಾಗ ಹಣ ನೀಡಿ ಕಳುಹಿಸಿರುವುದಾಗಿ ಆರೋಪಿಸಲಾಗಿದೆ ಎಂದೂ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ