AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murugha Mutt Case: ಪ್ರಕರಣದ ಎ2 ಆರೋಪಿ ಮಹಿಳಾ ವಾರ್ಡನ್​ಗೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ಬೆನ್ನಲ್ಲೆ ಪ್ರಕರಣದ ಎರಡನೇ ಆರೋಪಿ ಮಹಿಳಾ ವಾರ್ಡನ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

Murugha Mutt Case: ಪ್ರಕರಣದ ಎ2 ಆರೋಪಿ ಮಹಿಳಾ ವಾರ್ಡನ್​ಗೆ 14 ದಿನ ನ್ಯಾಯಾಂಗ ಬಂಧನ
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
TV9 Web
| Edited By: |

Updated on:Sep 02, 2022 | 6:18 PM

Share

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ಬೆನ್ನಲ್ಲೆ ಪ್ರಕರಣದ ಎರಡನೇ ಆರೋಪಿ ಮಹಿಳಾ ವಾರ್ಡನ್​ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಆರೋಪಿ ಮಹಿಳಾ ವಾರ್ಡನ್​ ಅವರನ್ನು ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶೆ ಕೋಮಲಾ ಅವರಿದ್ದ ಪೀಠವು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಬಂಧಿತರಾಗಿರುವ ಮಹಿಳಾ ವಾರ್ಡನ್ 2ನೇ ಆರೋಪಿಯಾಗಿದ್ದಾರೆ. ಇವರನ್ನು ಗುರುವಾರ (ಸೆ.01) ಪೊಲೀಸರು ಬಂಧಿಸಿದ್ದರು. ಇಂದು ಅವರನ್ನು 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಅದರಂತೆ ಆರೋಪಿಯನ್ನು 14ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಆಗಸ್ಟ್‌ 26 ಶುಕ್ರವಾರ ಮುರುಘಾಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಕೇಸ್ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು. ಅದರಂತೆ ಚಿತ್ರದುರ್ಗ ಪೊಲೀಸರು ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇನ್ನೊಂದೆಡೆ ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್ ಕೂಡ ಜಾರಿ ಮಾಡಿದ್ದರು. ಅದರಂತೆ ಗುರುವಾರ ರಾತ್ರಿ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಬಂಧಿಸಿದ್ದರು. ಪ್ರಕರಣದ ಎ2 ಆರೋಪಿಯಾಗಿರುವ ಮಹಿಳಾ ವಾರ್ಡನ್​ ಅವರನ್ನು ಕೂಡ ಗುರುವಾರವೇ ಬಂಧಿಸಲಾಗಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Fri, 2 September 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ