AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮೇಲೆ ಮಾಸ್ಕ್​ ಹಾಕಿಕೊಳ್ಳದೆ ಹೊರಗಡೆ ಹೋದರೆ ಹುಷಾರ್..!

ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಿಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಆದೇಶಿಸಿದೆ. ಆದರೆ, ನಮ್ಮ ಜನ ಮಾತ್ರ ಇದಕ್ಕೆ ಡೋಂಟ್​ ಕೇರ್​. ಹಾಗಾಗಿ ಜಾಣನಿಗೆ ಮಾತಿನ ಪೆಟ್ಟು, ಭಂಡನಿಗೆ ದಂಡದ ಪೆಟ್ಟು ಎಂಬಂತೆ ಅಧಿಕಾರಿಗಳು ಇದೀಗ ನಿಯಮ ಪಾಲಿಸದೆ ಬಿಂದಾಸ್​ ಆಗಿ ಓಡಾಡೋರಿಗೆ ದಂಡ ವಿಧಿಸಲು ಮುಂದಾಗಿದೆ. ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ವ್ಯಾಪ್ತಿಯಲ್ಲಿ 5 ದಿನದಲ್ಲಿ 250 ಕೇಸ್​ ದಾಖಲು ನಮ್ಮ ಸಿಲಿಕಾನ್​ ಸಿಟಿ ಮಂದಿಯಂತೂ ಬಿಡಿ. ಎಷ್ಟೇ ತಿಳಿಹೇಳಿದ್ರೂ […]

ಇನ್ಮೇಲೆ ಮಾಸ್ಕ್​ ಹಾಕಿಕೊಳ್ಳದೆ ಹೊರಗಡೆ ಹೋದರೆ ಹುಷಾರ್..!
KUSHAL V
|

Updated on:Jun 27, 2020 | 8:27 AM

Share

ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಿಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಆದೇಶಿಸಿದೆ. ಆದರೆ, ನಮ್ಮ ಜನ ಮಾತ್ರ ಇದಕ್ಕೆ ಡೋಂಟ್​ ಕೇರ್​. ಹಾಗಾಗಿ ಜಾಣನಿಗೆ ಮಾತಿನ ಪೆಟ್ಟು, ಭಂಡನಿಗೆ ದಂಡದ ಪೆಟ್ಟು ಎಂಬಂತೆ ಅಧಿಕಾರಿಗಳು ಇದೀಗ ನಿಯಮ ಪಾಲಿಸದೆ ಬಿಂದಾಸ್​ ಆಗಿ ಓಡಾಡೋರಿಗೆ ದಂಡ ವಿಧಿಸಲು ಮುಂದಾಗಿದೆ.

ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ವ್ಯಾಪ್ತಿಯಲ್ಲಿ 5 ದಿನದಲ್ಲಿ 250 ಕೇಸ್​ ದಾಖಲು ನಮ್ಮ ಸಿಲಿಕಾನ್​ ಸಿಟಿ ಮಂದಿಯಂತೂ ಬಿಡಿ. ಎಷ್ಟೇ ತಿಳಿಹೇಳಿದ್ರೂ ಮಾಸ್ಕ್​ ಹಾಕಿಕೊಳ್ಳದೇ ಓಡಾಡೋರ ಸಂಖ್ಯೆನೇ ಜಾಸ್ತಿ. ಹಾಗಾಗಿ ನಮ್ಮ ಪೊಲೀಸರು ಹಾಗೂ ಬಿಬಿಎಂಪಿ ಮಾರ್ಷಲ್​ಗಳು ಇಂಥವರನ್ನ ಹಿಡಿದು ಫೈನ್​ ಹಾಕುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಕಳೆದ ಐದು ದಿನದಲ್ಲಿ ಸರಿಸುಮಾರು 250ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಏರಿಯಾದ ಹೋಟೆಲ್, ಬೇಕರಿ ಸೇರಿ ಹಲವೆಡೆ ಗಸ್ತು ತಿರುಗುತ್ತಿರುವ ಪೊಲೀಸರು ಹಾಗೂ ಬಿಬಿಎಂಪಿ ಮಾರ್ಷಲ್​ಗಳು ನಿಯಮ ಪಾಲಿಸದವರಿಗೆ ದಂಡ ವಿಧಿಸುತ್ತಿದ್ದಾರೆ. ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದವರಿಗಂತೂ ದಂಡದ ಜೊತೆ ಸರಿಯಾದ ಮಾಸ್ಕ್​ ಹಾಕಿಕೊಳ್ಳುವಂತೆ ಅಧಿಕಾರಿಗಳು ಬುದ್ಧಿಮಾತು ಸಹ ಹೇಳಿದರು.

ರಾಯಚೂರಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ FIR ರಾಯಚೂರಿನಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸರು FIR ಕೂಡ ದಾಖಲಿಸಿದ್ದಾರೆ. ಇದುವರೆಗೂ ಕೊವಿಡ್ ನಿಯಮ ಉಲ್ಲಂಘಿಸಿದ ಸುಮಾರು 12 ಜನರ ವಿರುದ್ಧ FIR ದಾಖಲಾಗಿದೆ. ಮಾಸ್ಕ್ ಧರಿಸದೆ ಅಂಗಡಿಯಲ್ಲಿ ವ್ಯಾಪಾರ ಮತ್ತು ಸಾಮಾಜಿಕ ಅಂತರ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದಡಿ ರಾಯಚೂರಿನಲ್ಲಿ 6, ಸಿಂಧನೂರಿನಲ್ಲಿ 4 ಹಾಗೂ ಲಿಂಗಸುಗೂರಿನಲ್ಲಿ 2 ಅಂಗಡಿ ಮಾಲೀಕರು ವಿರುದ್ಧ ಕೇಸ್ ದಾಖಲಿಸಲಾಗಿದೆ. ಜೊತೆಗೆ, ಮಾಸ್ಕ್ ಹಾಕಿಕೊಳ್ಳದೆ ಓಡಾಡುತ್ತಿದ್ದ 501 ಬೈಕ್ ಸವಾರರಿಗೂ ದಂಡ ವಿಧಿಸಲಾಗಿದೆ. ನಿನ್ನೆ ಒಂದೇ ದಿನ ನಿಯಮ ಉಲ್ಲಂಘಿಸಿದವರಿಂದ ಒಟ್ಟು 82,200 ರೂಪಾಯಿ ದಂಡ ವಸೂಲಿಯಾಗಿದೆ.

ಕಾಫಿನಾಡಲ್ಲಿ ನಿಯಮ ಪಾಲಿಸದವರಿಗೆ ಫೈನ್​..! ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಹೀಗೆ ಮಾಸ್ಕ್ ಹಾಕದೆ ರಸ್ತೆಯಲ್ಲಿ ಓಡಾಡುತ್ತಿದ್ದ ಜನರಿಗೆ 200 ರೂಪಾಯಿ ದಂಡ ವಿಧಿಸಿದ್ದಾರೆ. ಜೊತೆಗೆ ಕೊರೊನಾದ ವಿರುದ್ಧ ಎಚ್ಚರ ವಹಿಸುವ ಬಗ್ಗೆ ಜಾಗೃತಿ ಸಹ ಮೂಡಿಸಿದ್ದಾರೆ.

Published On - 8:10 am, Sat, 27 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ