AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯ ಪಾದ್ರಿ ಜೈಲುಪಾಲು.. ಮದುವೆಯಾಗ್ತೀನಿ ಅಂತ ಹಲವರಿಗೆ ಕೈಕೊಟ್ಟ ಭೂಪನನ್ನು ಕೊನೆಗೂ ಬಂಧಿಸಿದ ಪೊಲೀಸರು

54 ವರ್ಷದ ಪಾದ್ರಿ ಚರ್ಚ್​ಗೆ ಬರ್ತಿದ್ದ 24 ವರ್ಷದ ಯುವತಿಯೊಂದಿಗೆ ಎಸ್ಕೇಪ್ ಆಗಿದ್ದ. ಯುವತಿ ಪೋಷಕರ ವಿರೋಧದ ನಡುವೆ ಮದುವೆ ಕೂಡ ಆಗಿದ್ದ. ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದ ಫಾಸ್ಟರ್ ಹಲವು ಯುವತಿಯರಿಗೆ ನಂಬಿಸಿ ಮೋಸ ಮಾಡಿದ್ದಾನೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿತ್ತು. ಮೋಸ ಹೋದ ಯುವತಿಯರು ನೀಡಿದ ದೂರಿನ ಮೇರೆಗೆ ಫಾಸ್ಟರ್ ಜೈಲು ಸೇರಿದ್ದಾನೆ. ಅದ್ರ ಡಿಟೇಲ್ಸ್ ಇಲ್ಲಿದೆ.

ಬಳ್ಳಾರಿಯ ಪಾದ್ರಿ ಜೈಲುಪಾಲು.. ಮದುವೆಯಾಗ್ತೀನಿ ಅಂತ ಹಲವರಿಗೆ ಕೈಕೊಟ್ಟ ಭೂಪನನ್ನು ಕೊನೆಗೂ ಬಂಧಿಸಿದ ಪೊಲೀಸರು
ಪಾದ್ರಿ ರವಿಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on:Jan 03, 2021 | 6:57 AM

Share

ಬಳ್ಳಾರಿ: ಜಿಲ್ಲೆಯ ವಿದ್ಯಾನಗರ ಭತ್ರಿ ರಸ್ತೆಯ ಚರ್ಚ್​ನಲ್ಲಿ ಫಾಸ್ಟರ್ ಆಗಿದ್ದ ರವಿಕುಮಾರ್​ಗೆ ಈಗಾಗಲೇ ಮದುವೆಯಾಗಿತ್ತು. ಆದ್ರೆ ಚರ್ಚ್​​ಗೆ ಬರುತ್ತಿದ್ದ ಯುವತಿಯರ ಮೇಲೆ ಕಣ್ಣು ಹಾಕುತ್ತಿದ್ದ ಫಾಸ್ಟರ್ ರವಿಕುಮಾರ್ ಮೊದಲ ಪತ್ನಿಗೆ ಡಿವೋರ್ಸ್ ನೀಡಿದ್ದಾನೆ. ಹೀಗೆ ಚರ್ಚ್​ಗೆ ಬರುತ್ತಿದ್ದ 24 ವರ್ಷದ ಇಂಜಿನಿಯರ್ ಪದವೀಧರೆ ಯುವತಿಯನ್ನ ಪ್ರೀತಿಸಿ ಇತ್ತೀಚಿಗೆ ಯುವತಿಯೊಂದಿಗೆ ಎಸ್ಕೇಪ್ ಆಗಿದ್ದ.

ಈ ಬಗ್ಗೆ ಯುವತಿಯ ಪೋಷಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದ್ರೆ, ಯುವತಿಯೇ ವಿಡಿಯೋ ಮಾಡಿ ನಾನೇ ಫಾಸ್ಟರ್​ ಜೊತೆ ಮದುವೆಯಾಗಿದ್ದೇನೆ ಅಂತಾ ಹೇಳಿಕೆ ನೀಡಿದ್ದಳು. ಇದರ ನಡುವೆ ಇನ್ನೂ ಇಬ್ಬರು ಯುವತಿಯರು ಮದುವೆಯಾಗುವುದಾಗಿ ನಂಬಿಸಿ ಫಾಸ್ಟರ್ ರವಿಕುಮಾರ್ ನಮಗೆ ವಂಚಿಸಿದ್ದಾನೆ ಅಂತಾ ಆರೋಪಿಸಿ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ, ಪಾದ್ರಿ ರವಿಕುಮಾರ್​ನನ್ನ ಬಂಧಿಸಿದ್ದಾರೆ.

ರವಿಕುಮಾರ್ ವಿರುದ್ಧ ಮೋಸದ ಆರೋಪ ಬೆಂಗಳೂರಿನಲ್ಲಿದ್ದ ಫಾಸ್ಟರ್ ರವಿಕುಮಾರ್​ನನ್ನ ಬಂಧಿಸಿದ ಬಳ್ಳಾರಿ ಪೊಲೀಸರು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದ್ದರಿಂದ ಫಾಸ್ಟರ್ ರವಿಕುಮಾರ್ ಈಗ ಬಳ್ಳಾರಿಯ ಕೇಂದ್ರ ಕಾರಗೃಹ ಸೇರಬೇಕಾಗಿದೆ. ರವಿಕುಮಾರ್ ವಿರುದ್ಧ ಮೋಸ ಹೋದ ಯುವತಿಯರು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ಮೋಸ ಹೋದ ಯುವತಿಯರ ಆರೋಪದ ಹಿನ್ನಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ. ಚರ್ಚ್​ಗೆ ಬರುತ್ತಿದ್ದ ಹಲವು ಯುವತಿಯರಿಗೆ ರವಿಕುಮಾರ್ ಮೋಸ ಮಾಡಿದ್ದಾನೆ ಅನ್ನೋ ಆರೋಪ ಕೇಳಿಬರುತ್ತಿವೆ. ಆರೆಸ್ಟ್ ಆಗಿರೋ ಪಾದ್ರಿ ಮಾತ್ರ ನಾನು ಯಾವುದೇ ತಪ್ಪು ಮಾಡಿಲ್ಲ, ದುರುದ್ದೇಶದಿಂದ ನನ್ನ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಇದ್ರಲ್ಲಿ ನ್ಯಾಯ ಸಿಗುವ ವಿಶ್ವಾಸ ಇದೆ ಅಂತಾ ಹೇಳ್ತಾನೆ.

ಚರ್ಚ್​​ನಲ್ಲಿ ಧರ್ಮ ಸಂದೇಶ ಸಾರಿ, ಭಕ್ತರ ಗೌರವಕ್ಕೆ ಪಾತ್ರರಾಗಿದ್ದಿದ್ರೆ ರವಿಕುಮಾರ್​ಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಆದ್ರೆ ಅದನ್ನ ಬಿಟ್ಟು ಮಾಡಬಾರದ ಕೆಲ್ಸ ಮಾಡಿ ಬಳ್ಳಾರಿ ಜೈಲು ಸೇರಬೇಕಾಗಿದ್ದು, ವಿಪರ್ಯಾಸವೇ ಸರಿ.

ಮದುವೆ ಆಗ್ತೀನಿ ಅಂತಾ ನಂಬಿಸಿ.. ಪಾರ್ಥನೆಗೆಂದು ಚರ್ಚ್​ಗೆ ಬರುತ್ತಿದ್ದ ಯುವತಿಯೊಂದಿಗೆ ಪರಾರಿಯಾದ ಪಾದ್ರಿ, ಯಾವೂರಲ್ಲಿ?

ಚರ್ಚ್ ಪಾದ್ರಿಯ ಜೊತೆ ಯುವತಿ ನಾಪತ್ತೆ : ವಿಡಿಯೋ ಮೂಲಕ ಸಿಕ್ತು ಬಿಗ್ ಟ್ವಿಸ್ಟ್

Published On - 6:57 am, Sun, 3 January 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ