AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್.ಎಂ.ಗೋಲ್ಡ್ ಫೈನಾನ್ಸ್ ಸಿಬ್ಬಂದಿಗೆ ವಂಚಿಸಿದ ಮೈಸೂರಿನ ಖತರ್ನಾಕ್ ದಂಪತಿ ಅರೆಸ್ಟ್

ಎಸ್.ಎಂ.ಗೋಲ್ಡ್ ಫೈನಾನ್ಸ್ ಸಿಬ್ಬಂದಿಗೆ ವಂಚಿಸಿದ್ದ ಬಗ್ಗೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ಕಾರ್ಯಚರಣೆಯಲ್ಲಿ ಆರೋಪಿಗಳು ಬಲೆಗೆ ಬಿದ್ದಿದ್ದಾರೆ.

ಎಸ್.ಎಂ.ಗೋಲ್ಡ್ ಫೈನಾನ್ಸ್ ಸಿಬ್ಬಂದಿಗೆ ವಂಚಿಸಿದ ಮೈಸೂರಿನ ಖತರ್ನಾಕ್ ದಂಪತಿ ಅರೆಸ್ಟ್
ವಂಚಿಸಿದ ದಂಪತಿ
TV9 Web
| Updated By: sandhya thejappa|

Updated on: Jul 20, 2021 | 9:25 AM

Share

ಮೈಸೂರು: ಗಿರವಿ ಇಟ್ಟ ಒಡವೆಯನ್ನು ಬಿಡಿಸಿ ಮಾರಾಟ ಮಾಡುವುದಾಗಿ ವಂಚಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಲಿಗ್ರಾಮ ಠಾಣೆ ಪೊಲೀಸರು ವಂಚಕ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. 29 ವರ್ಷದ ಸೌಭಾಗ್ಯ ಅಲಿಯಾಸ್ ಸೌಮ್ಯಾ ಮತ್ತು 30 ವರ್ಷದ ಪ್ರಸಾದ್ ಎಂಬುವವರು ಬಂಧನಕ್ಕೊಳಗಾದ ದಂಪತಿ. ಇವರು ಮೈಸೂರಿನ ಅಗ್ರಹಾರದಲ್ಲಿರುವ ಎಸ್.ಎಂ.ಗೋಲ್ಡ್ ಫೈನಾನ್ಸ್ ಸಿಬ್ಬಂದಿಗೆ ವಂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

50 ಗ್ರಾಂ ಚಿನ್ನದ ಆಭರಣ ಅಡ ಇಟ್ಟಿದ್ದೇವೆ. ಅದನ್ನು ಬಿಡಿಸಿ ನಿಮ್ಮ ಸಂಸ್ಥೆಗೆ ಮಾರಾಟ ಮಾಡುತ್ತೇವೆ ಅಂತ ಸುಮಾರು 1.75 ಲಕ್ಷ ರೂ. ಹಣವನ್ನು ದಂಪತಿ ವಂಚಿಸಿದ್ದಾರೆ. ಸಾಲಿಗ್ರಾಮಕ್ಕೆ ಹಣದೊಂದಿಗೆ ಕರೆಸಿಕೊಂಡು ವಂಚಿಸಿದ್ದ ದಂಪತಿ ಹೀಗೆ ಹಲವು ಕಡೆ ಮೋಸ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಎಸ್.ಎಂ.ಗೋಲ್ಡ್ ಫೈನಾನ್ಸ್ ಸಿಬ್ಬಂದಿಗೆ ವಂಚಿಸಿದ್ದ ಬಗ್ಗೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ಕಾರ್ಯಚರಣೆಯಲ್ಲಿ ಆರೋಪಿಗಳು ಬಲೆಗೆ ಬಿದ್ದಿದ್ದಾರೆ.

ಮೈಸೂರು ರಾಜವಂಶಸ್ಥರ ಹೆಸರಲ್ಲಿ ವ್ಯಕ್ತಿಯಿಂದ ಯುವತಿಯರಿಗೆ ವಂಚನೆ ಮೈಸೂರು ರಾಜವಂಶಸ್ಥರ ಹೆಸರಿನಲ್ಲಿ ವ್ಯಕ್ತಿಯೋರ್ವ ಹಲವು ಯುವತಿಯರಿಗೆ ವಂಚನೆ ಎಸಗಿದ ಪ್ರಕರಣ ಪಿರಿಯಾಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ ಎಸಗಿದ್ದು, ವೈಟ್‌ಫೀಲ್ಡ್‌ ಸಿಇಎನ್ ಠಾಣೆಯಲ್ಲಿ ಯುವತಿಯೋರ್ವಳು ದೂರು ನೀಡಿದ್ದಳು. ಆರೋಪಿಯ ನಿಜವಾದ ಹೆಸರು ಮುತ್ತು ಎಂದು ತಿಳಿದುಬಂದಿದ್ದು, ಸಿದ್ದಾರ್ಥ ಎಂಬ ಹೆಸರಿನಲ್ಲಿ ಎಲ್ಲರಿಗೂ ಪರಿಚಯ ಮಾಡಿಕೊಂಡಿದ್ದ ಎಂದು ಬೆಂಗಳೂರಿನ ವೈಟ್‌ಫೀಲ್ಡ್‌ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ. ಮೂವರು ಯುವತಿಯರ ಬಳಿ ವೈಯಕ್ತಿಕ ಸಹಾಯ ಬೇಕೆಂದು ಹಣವನ್ನು ಖಾತೆಗೆ ಹಾಕಿಸಿಕೊಳ್ಳುತ್ತಿದ್ದ ಆರೋಪಿ ಒಟ್ಟಾರೆಯಾಗಿ ಮೂರು ಪ್ರಕರಣಗಳಲ್ಲಿ 40 ಲಕ್ಷ ವಂಚನೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ

ಹೆಚ್.ಡಿ.ಕುಮಾರಸ್ವಾಮಿ, ಇಂದ್ರಜಿತ್ ಲಂಕೇಶ್ ಇರುವ ಫೋಟೋ ವೈರಲ್; ಅವಾಚ್ಯ ಪದ ಬಳಸಿದ ಟ್ರೋಲ್ ಮಗ ಪೇಜ್ ಅಡ್ಮಿನ್ ವಿರುದ್ಧ ದೂರು

ವಿದೇಶಿಗರಿಂದ ಇಂಗ್ಲೀಷ್, ಸ್ಪಾನಿಷ್ ಕಲಿತು ಮೈಸೂರು ರಾಜವಂಶಸ್ಥರ ಹೆಸರಲ್ಲಿ ವ್ಯಕ್ತಿಯಿಂದ ಯುವತಿಯರಿಗೆ ವಂಚನೆ

(Police arrested a couple who defrauded SM Gold Finance staff in mysuru)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ