AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಹತ್ತು ಜನ ಬಂಧನ

ಪೊಲೀಸರು ಬಂಧಿತರಿಂದ 9 ರೆಮ್​ಡಿಸಿವಿರ್ ವಯಲ್ಸ್ ವಶಕ್ಕೆ ಪಡೆದಿದ್ದು, ಗೋಲಗುಂಬಜ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣ ಮತ್ತು ಗಾಂಧಿಚೌಕ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ಎಸ್​ಪಿ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ವಿಜಯಪುರದಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಹತ್ತು ಜನ ಬಂಧನ
ಬಂಧಿತರು
sandhya thejappa
|

Updated on: May 04, 2021 | 12:11 PM

Share

ವಿಜಯಪುರ: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ. ಆದರೆ ಕೆಲವರು ಈ ಸಂದಿಗ್ಧ ಕಾಲದಲ್ಲಿ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಒಂದು ಕಡೆ ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಟ ಪಡುತ್ತಿದ್ದಾರೆ. ಇನ್ನೊಂದು ಕಡೆ ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟವಾಗುತ್ತಿದೆ. ಹೀಗೆ ಅಕ್ರಮವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಸುಮಾರು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಬಂಧಿತರಿಂದ 9 ರೆಮ್​ಡಿಸಿವಿರ್ ವಯಲ್ಸ್ ವಶಕ್ಕೆ ಪಡೆದಿದ್ದು, ಗೋಲಗುಂಬಜ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣ ಮತ್ತು ಗಾಂಧಿಚೌಕ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ಎಸ್​ಪಿ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ರೆಮ್​ಡಿಸಿವಿರ್  ಔಷಧಿಯ ಬೇಡಿಕೆ ಹೆಚ್ಚಾಗಿದೆ. ಈ ಔಷಧಿಯ ಡಿಮ್ಯಾಂಡ್ ಈಗ ಹೆಚ್ಚಾಗಿರುವ ಕಾರಣ ಇದನ್ನು ಈಗ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ನಿಜವಾಗಿ ಯಾರಿಗೆ ಔಷಧಿ ಅಗತ್ಯವಿದೆಯೋ ಅವರಿಗೆ ಸಿಗುತ್ತಿಲ್ಲ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಇದನ್ನು ಮಾರಾಟ ಮಾಡಲಾಗುತ್ತಿದೆ. ಈ ಕುರಿತು ವಿಜಯಪುರ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಯ ಸ್ಟಾಪ್ ನರ್ಸ್​ಗಳು ಸಹಿತ ಶಾಮೀಲಾಗಿದ್ದಾರೆ ಎಂದು ಎಸ್​ಪಿ ಅನುಪಮ್ ಅಗರ್ವಾಲ್ ಹೇಳಿದರು.

ರೋಗಿಗಳ ಹೆಸರು ಮೇಲೆ ಇಂಜೆಕ್ಷನ್ ಪಡೆದು ಬ್ಲ್ಯಾಕ್ ಮಾರ್ಕೆಟ್​ನಲ್ಲಿ ಮಾರಾಟ ಮಾಡುತ್ತಿದ್ದಾರೆ. ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಮಾರಾಟ ಮಾಡಿದ ಮೂರು ಪ್ರಕರಣ ಜಿಲ್ಲೆಯಲ್ಲಿ ದಾಖಲಿಸಲಾಗಿದೆ. ಒಟ್ಟು ಮೂರು ಪ್ರಕರಣಗಳ ಪೈಕಿ ಹತ್ತು ಜನರ ಬಂಧನ ಹಾಗೂ 9 ಇಂಜೆಕ್ಷನ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಇಷ್ಟಕ್ಕೂ ಕೊರೊನಾ ಸೋಂಕಿತ ವ್ಯಕ್ತಿಗೆ ಆಕ್ಸಿಜನ್​ ಎಷ್ಟು ಬೇಕು? ಆಕ್ಸಿಜನ್ ಕಾನ್ಸೆಂಟ್ರೇಟ್ ಮಾತ್ರವೇ ಸಾಕಾದೀತಾ?

ಚಾಮರಾಜನಗರ ರೋಗಿಗಳ ಸಾವು ಪ್ರಕರಣ; ಡೆತ್ ಆಡಿಟ್ ಕಮಿಟಿ ವರದಿ ಟಿವಿ9ಗೆ ಲಭ್ಯ

(Police arrested ten people who were illegally selling Remdesivir injection at Vijayapura)

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ