AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ನಾಡಬಂದೂಕು ತಯಾರಿ: 3 ಆರೋಪಿಗಳನ್ನು ಬಂಧಿಸಿದ ನಂದಿ ಗಿರಿಧಾಮ ಠಾಣೆ ಪೊಲೀಸರು

ಗಂಗಾಧರ್, ಅನಿಲ್ ಮತ್ತು ರಾಜು ಎಂಬ ಮೂವರು ಆರೋಪಿಗಳು ಅಕ್ರಮವಾಗಿ ಗನ್ ತಯಾರಿ ಅಷ್ಟೇ ಅಲ್ಲ ರಿಪೇರಿ ಕೂಡ ಮಾಡಿಕೊಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದ್ದು, ಸದ್ಯ ನಂದಿಗಿರಿಧಾಮ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಕ್ರಮವಾಗಿ ನಾಡಬಂದೂಕು ತಯಾರಿ: 3 ಆರೋಪಿಗಳನ್ನು ಬಂಧಿಸಿದ ನಂದಿ ಗಿರಿಧಾಮ ಠಾಣೆ ಪೊಲೀಸರು
ಅಕ್ರಮವಾಗಿ ಗನ್ ತಯಾರಿ ಮಾಡಿದ ಮೂವರು ಆರೋಪಿಗಳ ಬಂಧನ
preethi shettigar
| Edited By: |

Updated on: Mar 02, 2021 | 11:57 AM

Share

ಚಿಕ್ಕಬಳ್ಳಾಪುರ: ಅಕ್ರಮವಾಗಿ ನಾಡಬಂದೂಕು ತಯಾರಿ ಮಾಡಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಂಗಿರ್ಲಹಳ್ಳಿಯಲ್ಲಿ ನಡೆದಿದೆ. ಗಂಗಾಧರ್, ಅನಿಲ್ ಮತ್ತು ರಾಜು ಎಂಬ ಮೂವರು ಆರೋಪಿಗಳು ಅಕ್ರಮವಾಗಿ ಗನ್ ತಯಾರಿ ಅಷ್ಟೇ ಅಲ್ಲ ರಿಪೇರಿ ಕೂಡ ಮಾಡಿಕೊಡುತ್ತಿದ್ದರು ಎನ್ನುವುದು ಬೆಳಕಿಗೆ ಬಂದಿದ್ದು, ಸದ್ಯ ನಂದಿ ಗಿರಿಧಾಮ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲೂ ಅಕ್ರಮ ಬಂದೂಕು ಮಾಫಿಯಾ: ಸಿಟಿ ಮಾರ್ಕೆಟ್ ಪೊಲೀಸರಿಂದ ರಹಸ್ಯ ಕಾರ್ಯಾಚರಣೆ ನಡೆದಿದ್ದು, ಗನ್ ಮಾಫಿಯಾದ ಸ್ಪೋಟಕ ಮಾಹಿತಿ ಹೊರಬಂದಿದೆ. ಬೆಂಗಳೂರು ನಗರದ ಕಾಳಸಂತೆಯಲ್ಲಿ ಪಿಸ್ತೂಲ್‌ಗಳ ಮಾರಾಟದ ಬಗ್ಗೆ ಸಿಕ್ಕಿಬಿದ್ದ ಡೀಲರ್ ಕದೀರ್‌ನಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಕದೀರ್ ನೀಡಿದ ಮಾಹಿತಿ ಆಧರಿಸಿ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.

ಅಕ್ರಮವಾಗಿ ತಯಾರಾಗುತ್ತಿದ್ದ ಗನ್​ಗಳು ಉತ್ತರ ಭಾರತದಿಂದ ಬೆಂಗಳೂರಿಗೆ ಬರುತ್ತಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದಲೇ ಪಿಸ್ತೂಲ್‌ಗಳ ಡೀಲಿಂಗ್ ನಡೆಯುತ್ತಿತ್ತು.ಇನ್ನು ಜೈಲಿನಿಂದಲೇ ದಂಧೆ ನಡೆಸುತ್ತಿದ್ದ 2017ರ ಸಂಪಿಗೆಹಳ್ಳಿ ಸುಪಾರಿ ಕೊಲೆ ಕೇಸ್​ನ ಆರೋಪಿ ಫಯಾಜ್ ಉಲ್ಲಾಖಾನ್, ಫೋನ್‌ನಲ್ಲಿಯೇ ಪಿಸ್ತೂಲ್ ಡೀಲಿಂಗ್ ಮಾಡುತ್ತಿದ್ದ.

ಜೈಲಿನೊಳಗಿನವರಿಗೆ ಪೇಮೆಂಟ್ ಆದ ಒಂದೇ ಗಂಟೆಯಲ್ಲಿ ಗನ್ ಕೈಗೆ ಸಿಗುತ್ತಿತ್ತು ಎನ್ನುವ ಮಾಹಿತಿಯ ಆಧಾರದ ಮೇಲೆ ಕದೀರ್ ಮೂಲಕ ಗನ್ ಖರೀದಿ ಮಾಡುವುದಾಗಿ ಪೊಲೀಸರು ಕರೆ ಮಾಡಿದ್ದು, ಫೋನ್ ಮುಖಾಂತರ ಸಂಭಾಷಣೆ ನಡೆಸಿದ ಸಿಟಿ ಮಾರ್ಕೆಟ್ ಪೊಲೀಸರು, ನಂತರ ವ್ಯವಹಾರ ಕುದುರಿಸಿ ಫೋನ್ ಪೇ ಮುಖಾಂತರ ಹಣ ಸಂದಾಯ ಮಾಡಿದ್ದಾರೆ.

ಒಂದು ಲಕ್ಷದಿಂದ 1,25,000 ರೂಪಾಯಿ ಮೊತ್ತದ ವರೆಗೂ ಗನ್ ಮಾರಾಟ ಮಾಡಲಾಗುತ್ತಿತ್ತು. ಇನ್ನು ಈ ಎಲ್ಲಾ ವ್ಯವಹಾರವನ್ನು ಫಯಾಜ್​ ಉಲ್ಲಾಖಾನ್ ಜೈಲಿನಿಂದಲೇ ನಡೆಸುತ್ತಿದ್ದು, ಕಳೆದ 17 ವರ್ಷಗಳಿಂದ ಅಕ್ರಮವಾಗಿ ಗನ್ ಮಾರಾಟ ದಂಧೆ ಮಾಡುತ್ತಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ:ಗನ್ ಮಾಫಿಯಾದಲ್ಲಿ ಸದ್ದು ಮಾಡುತ್ತಿದೆ ಬೆಂಗಳೂರು: ಸಿಟಿ ಪೊಲೀಸರ ರಹಸ್ಯ ಕಾರ್ಯಾಚರಣೆ ವೇಳೆ ಹೊರಬಂತು ಸ್ಪೋಟಕ ಮಾಹಿತಿ

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್