AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಕಲಬುರಗಿಯಲ್ಲಿ ಇಬ್ಬರು ಬಂಧನ

ಪೊಲೀಸರು ಬಂಧಿತರಿಂದ ಐದು ರೆಮ್​ಡಿಸಿವಿರ್ ಇಂಜೆಕ್ಷನ್ ಬಾಟಲ್, ಮೊಬೈಲ್ ಮತ್ತು ಬೈಕ್​ನ ವಶಪಡಿಸಿಕೊಂಡಿದ್ದಾರೆ. ಬಂಧಿತರು ಮಹಂತೇಶ್ ಮಠಪತಿ, ಸಾಜೀದ್ ಕೂಡಿ ಎಂದು ತಿಳಿದುಬಂದಿದ್ದು, ಇವರಿಬ್ಬರು ನಗರದ ನವಜೀವನ್ ಬ್ಲಡ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು.

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಕಲಬುರಗಿಯಲ್ಲಿ ಇಬ್ಬರು ಬಂಧನ
ರೆಮ್​ಡಿಸಿವಿರ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ
sandhya thejappa
|

Updated on: May 03, 2021 | 12:15 PM

Share

ಕಲಬುರಗಿ: ಕೊರೊನಾ ಸೋಂಕಿನಿಂದ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೂಕ್ತ ಚಿಕಿತ್ಸೆ, ಬೆಡ್ ಹಾಗು ಆಕ್ಸಿಜನ್ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕೆಲವು ಕಡೆ ಅಕ್ರಮವಾಗಿ ರೆಮ್ಡಿಸಿವಿರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಇಂತಹದೊಂದು ಘಟನೆ ಇದೀಗ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ರೆಮ್​ಡಿಸಿವಿರ್​ನ್ನು ಇಬ್ಬರು ಮಾರಾಟ ಮಾಡುತ್ತಿದ್ದರು. ನಗರ ರೌಡಿ ನಿಗ್ರಹ ಪಡೆಯ ಪೊಲೀಸರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಬಂಧಿತರಿಂದ ಐದು ರೆಮ್​ಡಿಸಿವಿರ್ ಇಂಜೆಕ್ಷನ್ ಬಾಟಲ್, ಮೊಬೈಲ್ ಮತ್ತು ಬೈಕ್​ನ ವಶಪಡಿಸಿಕೊಂಡಿದ್ದಾರೆ. ಬಂಧಿತರು ಮಹಂತೇಶ್ ಮಠಪತಿ, ಸಾಜೀದ್ ಕೂಡಿ ಎಂದು ತಿಳಿದುಬಂದಿದ್ದು, ಇವರಿಬ್ಬರು ನಗರದ ನವಜೀವನ್ ಬ್ಲಡ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಕೆಲ ಆಸ್ಪತ್ರೆಯವರಿಂದ ರೆಮ್​ಡಿಸಿವಿರ್ ಇಂಜೆಕ್ಷನ್ ಪಡೆಯುತ್ತಿದ್ದರು. ಜೊತೆಗೆ ಒಂದು ಬಾಟಲ್ ರೆಮ್​ಡಿಸಿವಿರ್​ಗೆ ಇಪ್ಪತ್ತರಿಂದ ಇಪ್ಪತ್ತೈದು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.

ಬಂಧಿತರಿಂದ ಐದು ಬಾಟಲ್​ ರೆಮ್​ಡಿಸಿವಿರ್​ನ ವಶಪಡಿಸಿಕೊಂಡಿದ್ದಾರೆ

ಆಂಬುಲೆನ್ಸ್ ಚಾಲಕ ಅಮಾನತು ಈ ಹಿಂದೆ ಅಕ್ರಮವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಆಂಬುಲೆನ್ಸ್ ಚಾಲಕನನ್ನು ರಿಮ್ಸ್ ನಿರ್ದೇಶಕ ಡಾ.ಪೀರಾಪುರರಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರಿನ ಒಪೆಕ್ ಬಳಿ ಆ್ಯಂಬುಲೆನ್ಸ್ ನಿಲ್ಲಿಸಿ, ಚಾಲಕ ಬಂಡೆಪ್ಪನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ಸಂದರ್ಭ ಚಾಲಕನ ಜೇಬಿನಲ್ಲಿ ವಯಲ್​ಗಳು ಪತ್ತೆಯಾಗಿದ್ದವು. ಚಾಲಕನ ವಿರುದ್ಧ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದರು. ಚಾಲಕ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಾಟ ಮಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು.

ಇದನ್ನೂ ಓದಿ

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಣೆ: ರಾಯಚೂರಿನಲ್ಲಿ ಆಂಬುಲೆನ್ಸ್​ ಚಾಲಕ ಅಮಾನತು, ಬೆಂಗಳೂರಿನಲ್ಲಿ ಇಬ್ಬರ ಬಂಧನ

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

(Police arrested two people who were illegally selling Remdesivir injection in kalaburagi)

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?