AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಕಲಬುರಗಿಯಲ್ಲಿ ಇಬ್ಬರು ಬಂಧನ

ಪೊಲೀಸರು ಬಂಧಿತರಿಂದ ಐದು ರೆಮ್​ಡಿಸಿವಿರ್ ಇಂಜೆಕ್ಷನ್ ಬಾಟಲ್, ಮೊಬೈಲ್ ಮತ್ತು ಬೈಕ್​ನ ವಶಪಡಿಸಿಕೊಂಡಿದ್ದಾರೆ. ಬಂಧಿತರು ಮಹಂತೇಶ್ ಮಠಪತಿ, ಸಾಜೀದ್ ಕೂಡಿ ಎಂದು ತಿಳಿದುಬಂದಿದ್ದು, ಇವರಿಬ್ಬರು ನಗರದ ನವಜೀವನ್ ಬ್ಲಡ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು.

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಮಾರಾಟ; ಕಲಬುರಗಿಯಲ್ಲಿ ಇಬ್ಬರು ಬಂಧನ
ರೆಮ್​ಡಿಸಿವಿರ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ
sandhya thejappa
sandhya thejappa|

Updated on: May 03, 2021 | 12:15 PM

Share

ಕಲಬುರಗಿ: ಕೊರೊನಾ ಸೋಂಕಿನಿಂದ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೂಕ್ತ ಚಿಕಿತ್ಸೆ, ಬೆಡ್ ಹಾಗು ಆಕ್ಸಿಜನ್ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಕೆಲವು ಕಡೆ ಅಕ್ರಮವಾಗಿ ರೆಮ್ಡಿಸಿವಿರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಇಂತಹದೊಂದು ಘಟನೆ ಇದೀಗ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ರೆಮ್​ಡಿಸಿವಿರ್​ನ್ನು ಇಬ್ಬರು ಮಾರಾಟ ಮಾಡುತ್ತಿದ್ದರು. ನಗರ ರೌಡಿ ನಿಗ್ರಹ ಪಡೆಯ ಪೊಲೀಸರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಬಂಧಿತರಿಂದ ಐದು ರೆಮ್​ಡಿಸಿವಿರ್ ಇಂಜೆಕ್ಷನ್ ಬಾಟಲ್, ಮೊಬೈಲ್ ಮತ್ತು ಬೈಕ್​ನ ವಶಪಡಿಸಿಕೊಂಡಿದ್ದಾರೆ. ಬಂಧಿತರು ಮಹಂತೇಶ್ ಮಠಪತಿ, ಸಾಜೀದ್ ಕೂಡಿ ಎಂದು ತಿಳಿದುಬಂದಿದ್ದು, ಇವರಿಬ್ಬರು ನಗರದ ನವಜೀವನ್ ಬ್ಲಡ್ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಕೆಲ ಆಸ್ಪತ್ರೆಯವರಿಂದ ರೆಮ್​ಡಿಸಿವಿರ್ ಇಂಜೆಕ್ಷನ್ ಪಡೆಯುತ್ತಿದ್ದರು. ಜೊತೆಗೆ ಒಂದು ಬಾಟಲ್ ರೆಮ್​ಡಿಸಿವಿರ್​ಗೆ ಇಪ್ಪತ್ತರಿಂದ ಇಪ್ಪತ್ತೈದು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.

ಬಂಧಿತರಿಂದ ಐದು ಬಾಟಲ್​ ರೆಮ್​ಡಿಸಿವಿರ್​ನ ವಶಪಡಿಸಿಕೊಂಡಿದ್ದಾರೆ

ಆಂಬುಲೆನ್ಸ್ ಚಾಲಕ ಅಮಾನತು ಈ ಹಿಂದೆ ಅಕ್ರಮವಾಗಿ ರೆಮ್​ಡಿಸಿವಿರ್ ಇಂಜೆಕ್ಷನ್ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಆಂಬುಲೆನ್ಸ್ ಚಾಲಕನನ್ನು ರಿಮ್ಸ್ ನಿರ್ದೇಶಕ ಡಾ.ಪೀರಾಪುರರಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರಿನ ಒಪೆಕ್ ಬಳಿ ಆ್ಯಂಬುಲೆನ್ಸ್ ನಿಲ್ಲಿಸಿ, ಚಾಲಕ ಬಂಡೆಪ್ಪನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ಸಂದರ್ಭ ಚಾಲಕನ ಜೇಬಿನಲ್ಲಿ ವಯಲ್​ಗಳು ಪತ್ತೆಯಾಗಿದ್ದವು. ಚಾಲಕನ ವಿರುದ್ಧ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದರು. ಚಾಲಕ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಾಟ ಮಾಡುತ್ತಿದ್ದ ವಿಡಿಯೊ ವೈರಲ್ ಆಗಿತ್ತು.

ಇದನ್ನೂ ಓದಿ

ಅಕ್ರಮ ರೆಮ್​ಡಿಸಿವಿರ್ ಇಂಜೆಕ್ಷನ್ ಸಾಗಣೆ: ರಾಯಚೂರಿನಲ್ಲಿ ಆಂಬುಲೆನ್ಸ್​ ಚಾಲಕ ಅಮಾನತು, ಬೆಂಗಳೂರಿನಲ್ಲಿ ಇಬ್ಬರ ಬಂಧನ

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

(Police arrested two people who were illegally selling Remdesivir injection in kalaburagi)

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’