AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ದಾಳಿ: ಬೆಂಗಳೂರಿನಲ್ಲಿ 10 ರಿಂದ 15 ಸಾವಿರಕ್ಕೆ ರೆಮ್​ಡೆಸಿವರ್​ ಮಾರುತ್ತಿದ್ದವರ ಬಂಧನ

ರೆಮ್​ಡೆಸಿವರ್ ಚುಚ್ಚುಮದ್ದಿಗೆ ಬೇಡಿಕೆ ಹೆಚ್ಚಾಗಿರುವುದನ್ನೇ ಬಂಡವಾಳ ಮಾಡಿಕೊಂಡ ಕೆಲವರು ₹2,000ದಿಂದ ₹2,500 ಬೆಲೆ ಬಾಳುವ ಔಷಧವನ್ನು ₹10ಸಾವಿರದಿಂದ ₹15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಬೆಂಗಳೂರಿನ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಹಲವು ಕಡೆ ರೈಡ್ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಪೊಲೀಸ್​ ದಾಳಿ: ಬೆಂಗಳೂರಿನಲ್ಲಿ 10 ರಿಂದ 15 ಸಾವಿರಕ್ಕೆ ರೆಮ್​ಡೆಸಿವರ್​ ಮಾರುತ್ತಿದ್ದವರ ಬಂಧನ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
| Edited By: |

Updated on: Apr 24, 2021 | 2:17 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಗಂಭೀರಾವಸ್ಥೆಗೆ ತಲುಪಿದವರಿಗೆ ಅಗತ್ಯ ಔಷಧ ಎಂದು ಪರಿಗಣಿಸಲಾಗಿರುವ ರೆಮ್​ಡೆಸಿವರ್​ ಇಂಜೆಕ್ಷನ್​ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 16 ಜನರನ್ನು ಬಂಧಿಸಿರುವುದಾಗಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ದಾಳಿ ವೇಳೆ 55 ರೆಮ್​ಡೆಸಿವಿರ್ ಪತ್ತೆಯಾಗಿದ್ದು, ಮೆಡಿಕಲ್​ ಶಾಪ್​ನಲ್ಲಿ ಕೆಲಸ ಮಾಡುತ್ತಿರುವವರು, ಡಿಸ್ಟ್ರಿಬ್ಯೂಟರ್ಸ್​ ಈ ಅಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

ರೆಮ್​ಡೆಸಿವರ್ ಚುಚ್ಚುಮದ್ದಿಗೆ ಬೇಡಿಕೆ ಹೆಚ್ಚಾಗಿರುವುದನ್ನೇ ಬಂಡವಾಳ ಮಾಡಿಕೊಂಡ ಕೆಲವರು ₹2,000ದಿಂದ ₹2,500 ಬೆಲೆ ಬಾಳುವ ಔಷಧವನ್ನು ₹10ಸಾವಿರದಿಂದ ₹15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಬೆಂಗಳೂರಿನ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಹಲವು ಕಡೆ ರೈಡ್ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಿಸಿಬಿ ದಾಳಿ ಮುಂದುವರೆಯುತ್ತದೆ. ಸಾರ್ವಜನಿಕರಿಗೆ ಅಕ್ರಮ ನಡೆಯುತ್ತಿರುವುದು ಗಮನಕ್ಕೆ ಬಂದರೆ ನಮಗೆ ತಿಳಿಸಬಹುದು ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಶೇ.50ರಷ್ಟು ಬೆಡ್​ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಖಾಸಗಿ ಅಸ್ಪತ್ರೆಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡುವಂತೆ ಸರ್ಕಾರ ಹೇಳಿದ್ದರೂ ಕೆಲ ಆಸ್ಪತ್ರೆಗಳು ಅದನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಇಂದು ಈ ಬಗ್ಗೆ ಪರಿಶೀಲನೆಗಿಳಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಬೆಂಗಳೂರಿನಲ್ಲಿರುವ ಕೆಲ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳ ಪರಿಶೀಲನೆ ವೇಳೆ ಶಿಫಾ ಆಸ್ಪತ್ರೆಯ ಮೋಸ ಬಯಲಾಗಿದ್ದು, ಗೌರವ್​ ಗುಪ್ತಾ ಎಚ್ಚರಿಕೆಗೆ ತಬ್ಬಿಬ್ಬಾದ ಶಿಫಾ ಆಸ್ಪತ್ರೆ ಸಿಬ್ಬಂದಿ ಈಗಲೇ ಶೇ.50ರಷ್ಟು ಬೆಡ್ ಕೊಡ್ತೇವೆ ಸರ್ ಎಂದು ತಡಬಡಾಯಿಸಿದ್ದಾರೆ.

ಅಂತೆಯೇ, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯೂ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಬೆಡ್​ ನೀಡದ ವಿಕ್ರಂ ಆಸ್ಪತ್ರೆಗೆ ಗೌರವ್ ಗುಪ್ತಾ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು 

ರೆಮ್​ಡೆಸಿವಿರ್ ಇಂಜೆಕ್ಷನ್​ 25 ಸಾವಿರಕ್ಕೆ ಮಾರುತ್ತಿದ್ದ ಮೂವರ ಬಂಧನ

ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ