AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ದಾಳಿ: ಬೆಂಗಳೂರಿನಲ್ಲಿ 10 ರಿಂದ 15 ಸಾವಿರಕ್ಕೆ ರೆಮ್​ಡೆಸಿವರ್​ ಮಾರುತ್ತಿದ್ದವರ ಬಂಧನ

ರೆಮ್​ಡೆಸಿವರ್ ಚುಚ್ಚುಮದ್ದಿಗೆ ಬೇಡಿಕೆ ಹೆಚ್ಚಾಗಿರುವುದನ್ನೇ ಬಂಡವಾಳ ಮಾಡಿಕೊಂಡ ಕೆಲವರು ₹2,000ದಿಂದ ₹2,500 ಬೆಲೆ ಬಾಳುವ ಔಷಧವನ್ನು ₹10ಸಾವಿರದಿಂದ ₹15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಬೆಂಗಳೂರಿನ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಹಲವು ಕಡೆ ರೈಡ್ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಪೊಲೀಸ್​ ದಾಳಿ: ಬೆಂಗಳೂರಿನಲ್ಲಿ 10 ರಿಂದ 15 ಸಾವಿರಕ್ಕೆ ರೆಮ್​ಡೆಸಿವರ್​ ಮಾರುತ್ತಿದ್ದವರ ಬಂಧನ
ರೆಮ್‌ಡಿಸಿವಿರ್ ಇಂಜೆಕ್ಷನ್
Skanda
| Edited By: |

Updated on: Apr 24, 2021 | 2:17 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಗಂಭೀರಾವಸ್ಥೆಗೆ ತಲುಪಿದವರಿಗೆ ಅಗತ್ಯ ಔಷಧ ಎಂದು ಪರಿಗಣಿಸಲಾಗಿರುವ ರೆಮ್​ಡೆಸಿವರ್​ ಇಂಜೆಕ್ಷನ್​ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 16 ಜನರನ್ನು ಬಂಧಿಸಿರುವುದಾಗಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ದಾಳಿ ವೇಳೆ 55 ರೆಮ್​ಡೆಸಿವಿರ್ ಪತ್ತೆಯಾಗಿದ್ದು, ಮೆಡಿಕಲ್​ ಶಾಪ್​ನಲ್ಲಿ ಕೆಲಸ ಮಾಡುತ್ತಿರುವವರು, ಡಿಸ್ಟ್ರಿಬ್ಯೂಟರ್ಸ್​ ಈ ಅಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

ರೆಮ್​ಡೆಸಿವರ್ ಚುಚ್ಚುಮದ್ದಿಗೆ ಬೇಡಿಕೆ ಹೆಚ್ಚಾಗಿರುವುದನ್ನೇ ಬಂಡವಾಳ ಮಾಡಿಕೊಂಡ ಕೆಲವರು ₹2,000ದಿಂದ ₹2,500 ಬೆಲೆ ಬಾಳುವ ಔಷಧವನ್ನು ₹10ಸಾವಿರದಿಂದ ₹15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಬೆಂಗಳೂರಿನ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಸೇರಿದಂತೆ ಹಲವು ಕಡೆ ರೈಡ್ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಿಸಿಬಿ ದಾಳಿ ಮುಂದುವರೆಯುತ್ತದೆ. ಸಾರ್ವಜನಿಕರಿಗೆ ಅಕ್ರಮ ನಡೆಯುತ್ತಿರುವುದು ಗಮನಕ್ಕೆ ಬಂದರೆ ನಮಗೆ ತಿಳಿಸಬಹುದು ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಶೇ.50ರಷ್ಟು ಬೆಡ್​ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಖಾಸಗಿ ಅಸ್ಪತ್ರೆಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡುವಂತೆ ಸರ್ಕಾರ ಹೇಳಿದ್ದರೂ ಕೆಲ ಆಸ್ಪತ್ರೆಗಳು ಅದನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಇಂದು ಈ ಬಗ್ಗೆ ಪರಿಶೀಲನೆಗಿಳಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಬೆಂಗಳೂರಿನಲ್ಲಿರುವ ಕೆಲ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳ ಪರಿಶೀಲನೆ ವೇಳೆ ಶಿಫಾ ಆಸ್ಪತ್ರೆಯ ಮೋಸ ಬಯಲಾಗಿದ್ದು, ಗೌರವ್​ ಗುಪ್ತಾ ಎಚ್ಚರಿಕೆಗೆ ತಬ್ಬಿಬ್ಬಾದ ಶಿಫಾ ಆಸ್ಪತ್ರೆ ಸಿಬ್ಬಂದಿ ಈಗಲೇ ಶೇ.50ರಷ್ಟು ಬೆಡ್ ಕೊಡ್ತೇವೆ ಸರ್ ಎಂದು ತಡಬಡಾಯಿಸಿದ್ದಾರೆ.

ಅಂತೆಯೇ, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯೂ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಬೆಡ್​ ನೀಡದ ವಿಕ್ರಂ ಆಸ್ಪತ್ರೆಗೆ ಗೌರವ್ ಗುಪ್ತಾ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಅಮ್ಮ, ಮಗನ ದೂರ ಮಾಡಿದ ಕೊರೊನಾ; ಮಗನಿಗೆ ತಾಯಿಯ ಸಾವಿನ ಸುದ್ದಿ ಹೇಳದೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು 

ರೆಮ್​ಡೆಸಿವಿರ್ ಇಂಜೆಕ್ಷನ್​ 25 ಸಾವಿರಕ್ಕೆ ಮಾರುತ್ತಿದ್ದ ಮೂವರ ಬಂಧನ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು