AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಗೆ 60 ಸಾವಿರ ಬೇಡಿಕೆ ಇಟ್ಟಿದ್ದ ಆ್ಯಂಬುಲೆನ್ಸ್ ಸಿಬ್ಬಂದಿ ಬಂಧನ

ಜೈ ಹನುಮಾನ್ ಆ್ಯಂಬುಲೆನ್ಸ್ ಮಾಲೀಕ/ಚಾಲಕ ಹನುಮಂತಪ್ಪ ಮತ್ತು ನಂದನ್ ಇಂಟರ್‌ನ್ಯಾಷನಲ್ ಆ್ಯಂಬುಲೆನ್ಸ್‌ ಮಾಲೀಕ ಹರೀಶ್ ಅವರುಗಳೇ ಬಂಧಿತರಾಗಿದ್ದು, ಐಪಿಸಿ ಸೆಕ್ಷನ್ 384, 269, 270 ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಬಂಧಿಸಲಾಗಿದೆ.

ಕೊವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಗೆ 60 ಸಾವಿರ ಬೇಡಿಕೆ ಇಟ್ಟಿದ್ದ ಆ್ಯಂಬುಲೆನ್ಸ್ ಸಿಬ್ಬಂದಿ ಬಂಧನ
ಪ್ರಾತಿನಿಧಿಕ ಚಿತ್ರ
guruganesh bhat
|

Updated on:Apr 22, 2021 | 10:26 PM

Share

ಬೆಂಗಳೂರು: ಕೊವಿಡ್ ಸೋಂಕಿನಿಂದ ಮೃತಪಟ್ಟ ಮೃತದೇಹ ಇಟ್ಟುಕೊಳ್ಳಲು  ಮತ್ತು ಅಂತ್ಯಕ್ರಿಯೆ ನಡೆಸಲು  60 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜೈ ಹನುಮಾನ್ ಆ್ಯಂಬುಲೆನ್ಸ್ ಮಾಲೀಕ/ಚಾಲಕ ಹನುಮಂತಪ್ಪ ಮತ್ತು ನಂದನ್ ಇಂಟರ್‌ನ್ಯಾಷನಲ್ ಆ್ಯಂಬುಲೆನ್ಸ್‌ ಮಾಲೀಕ ಹರೀಶ್ ಅವರುಗಳೇ ಬಂಧಿತರಾಗಿದ್ದು, ಐಪಿಸಿ ಸೆಕ್ಷನ್ 384, 269, 270 ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಬಂಧಿಸಲಾಗಿದೆ. ತಂದೆಯ ಅಂತ್ಯ ಸಂಸ್ಕಾರಕ್ಕೆ 60 ಸಾವಿರ ಹಣ ಹೊಂದಿಸಲು  ಮಾಂಗಲ್ಯ ಸರ ಮಾರಲು ಮುಂದಾಗಿದ್ದ ಮಗಳ ನೋವನ್ನು ಟಿವಿ9 ನಡೆಸಿದ್ದ ರಹಸ್ಯ ಕಾರ್ಯಾಚರಣೆ ಬೆಳಕಿಗೆ ತಂದಿತ್ತು.ಮಾಂಗಲ್ಯ ಸರ ಮಾರಾಟ ಮಾಡದಂತೆ ಮೃತ ವ್ಯಕ್ತಿಯ ಮಗಳನ್ನು ರಕ್ಷಿಸಿತ್ತು.

ಏಪ್ರಿಲ್ 20ರಂದು ರಾತ್ರಿ ಮತ್ತಿಕೆರೆಯಲ್ಲಿ ಸೋಂಕಿತ ವ್ಯಕ್ತಿಯೋರ್ವರು ಮೃತಪಟ್ಟಿದ್ದರು. ಆದರೆ, ಅವರು ಬದುಕಿರಬಹುದೆಂದು ಆ್ಯಂಬುಲೆ‌ನ್ಸ್​ನಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಸೋಂಕಿತ ವ್ಯಕ್ತಿ ಮೃತಪಟ್ಟ ಬಗ್ಗೆ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ ನಂತರ ಅದೇ ಆ್ಯಂಬುಲೆ‌ನ್ಸ್​ನಲ್ಲಿ ಹೆಬ್ಬಾಳಕ್ಕೆ ಮೃತದೇಹವನ್ನು ತರಲಾಗಿತ್ತು. ಕುಮಾರ್ ಆ್ಯಂಬುಲೆನ್ಸ್ ಮಾಲೀಕತ್ವದ ಹೆಬ್ಬಾಳದ ನಂದನ್ ಆ್ಯಂಬುಲೆನ್ಸ್ ಸರ್ವಿಸ್‌ ಮೂಲಕ ಕರೆತರಲಾಗಿತ್ತು. ಅಲ್ಲೇ ಇದ್ದ ಖಾಸಗಿ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿತ್ತು. ಈ ವೇಳೆ ಮೃತದೇಹ ಇಡಲು ಮತ್ತು ಅಂತ್ಯಕ್ರಿಯೆಗೆ 60 ಸಾವಿರ ನೀಡುವಂತೆ ಬೇಡಿಕೆ ಇಡಲಾಗಿತ್ತು.

ಒಂದು ದಿನದ ಸೇವಾ ದರ 3,500 ರೂಪಾಯಿ ಬದಲು 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಈ ಬಂಧಿತರು, ಬಳಿಕ 40 ಸಾವಿರ ನೀಡಿದರೆ ಮಾತ್ರ ಶವ ಕೊಡುವುದಾಗಿ ತಿಳಿಸಿದ್ದರು. ಬೇಡಿಕೆ ಇಟ್ಟಷ್ಟು ಹಣ ನೀಡದಿದ್ದರೆ ಹೆಬ್ಬಾಳ ಫ್ಲೈಓವರ್ ಕೆಳಗೆ ಮೃತದೇಹವನ್ನು ಬಿಟ್ಟು ಹೋಗುವುದಾಗಿ ಹೇಳಿದ್ದರು.ಈ ಕುರಿತು ಟಿವಿ9 ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರದ ನಂತರ ಮೃತ ವ್ಯಕ್ತಿಯ ಪುತ್ರಿ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid-19 Karnataka Update: ಕರ್ನಾಟಕದಲ್ಲಿ ಇಂದು 25,795 ಮಂದಿಯಲ್ಲಿ ಕೊರೊನಾ ಸೋಂಕು, 123 ಸಾವು

Published On - 10:21 pm, Thu, 22 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ