Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸರ ಗಲಾಟೆ: ದೂರು ನೀಡಲು ಬಂದವರು ಕಂಗಾಲು

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸ್ ಇನ್ಸ್​ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿ ನಡುವೆ ಗಲಾಟೆ ನಡೆದಿರುವಂತಹ ಘಟನೆ ನಡೆದಿದೆ. ಪೊಲೀಸ್ ಠಾಣೆಯಲ್ಲೇ ಮಹಿಳಾ ಸಿಬ್ಬಂದಿ ಮುಂದೆಯೇ ಅವಾಚ್ಯ ಶಬ್ದಗಳಿಂದ ಸಿಬ್ಬಂದಿ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಪಿಐ, ಪೊಲೀಸ್ ಸಿಬ್ಬಂದಿಗಳು ಬೈದಾಡಿಕೊಂಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸರ ಗಲಾಟೆ: ದೂರು ನೀಡಲು ಬಂದವರು ಕಂಗಾಲು
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸರ ಗಲಾಟೆ: ದೂರು ನೀಡಲು ಬಂದವರು ಕಂಗಾಲು
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Nov 22, 2024 | 3:49 PM

ಬೆಂಗಳೂರು, ನವೆಂಬರ್​ 22: ಪೊಲೀಸ್ ಇನ್ಸ್​ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ಠಾಣೆಯಲ್ಲೇ ಗಲಾಟೆ ಆಗಿರುವಂತಹ ಘಟನೆ ನಗರದ ಸದಾಶಿವನಗರ ಠಾಣೆಯಲ್ಲಿ (Sadashivnagar police station) ನಡೆದಿದೆ. ಇನ್ಸ್​​ಪೆಕ್ಟರ್​ ಗಿರೀಶ್, ಎಎಸ್​ಐ ರಂಗಸ್ವಾಮಿ, ಹೆಡ್​ ಕಾನ್​ಸ್ಟೇಬಲ್​ಗಳಾದ ಕದಂಬ ಮತ್ತು ವಸಂತ ನಡುವೆ ಗಲಾಟೆ ಆಗಿದೆ. ಸದ್ಯ ಪರಸ್ಪರ ನಿಂದನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೊಲೀಸ್ ಠಾಣೆಯಲ್ಲೇ ಮಹಿಳಾ ಸಿಬ್ಬಂದಿ ಮುಂದೆಯೇ ಅವಾಚ್ಯ ಶಬ್ದಗಳಿಂದ ಸಿಬ್ಬಂದಿ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಪಿಐ, ಪೊಲೀಸ್ ಸಿಬ್ಬಂದಿಗಳು ಬೈದಾಡಿಕೊಂಡಿದ್ದಾರೆ. ಪೊಲೀಸರ ಗಲಾಟೆ ನೋಡಿ ದೂರು ಕೊಡಲು ಬಂದವರು ಕಂಗಾಲಾಗಿದ್ದಾರೆ.

ಕರ್ತವ್ಯ ಲೋಪ: ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಎಎಸ್ಐ ಅಮಾನತ್ತು

ಇನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಎಎಸ್ಐ ಅಮಾನತ್ತು ಮಾಡಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ನಂಜಪ್ಪ, ಎಎಸ್ಐ ಶಿವಶಂಕರೆಡ್ಡಿ ಸಸ್ಪೆಂಡ್ ಆದ ಅಧಿಕಾರಿಗಳು. ಕರ್ತವ್ಯಲೋಪ ಹಿನ್ನಲೆ ಅಮಾನತು ಗೊಳಿಸಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಆದೇಶ ಹೊರಡಿಸಿದ್ದರು.

ಅ. 29 ರಂದು ಬಂಗಾರಪೇಟೆ ಪೊಲೀಸ್ ಠಾಣೆ ಎಎಸ್ಐ ಫರಿದಾ ಬಾನು ಅವರಿಗೆ ಚಾಕು ಇರಿದ ಪ್ರಕರಣ ಸಂಬಂಧದಲ್ಲಿ ಬಿಹಾರ ಮೂಲದ ಅಜಯ್ ಸಿಂಗ್ ಎನ್ನುವರಿಂದ ಚಾಕು ಇರಿದು ಗಾಯಗೊಳಿಸಿದ್ದರು. ಚಾಕು ಇರಿತಕ್ಕು ಮೊದಲು ಅಜಯ್ ಸಿಂಗ್ ಅವರನ್ನು ಪೊಲೀಸರು ಠಾಣೆಗೆ ಕರೆತಂದು ವಾಪಾಸ್ ಕಳಿಸಿದ್ದರು.

ಇದನ್ನೂ ಓದಿ: ಕಾರ್ಯಪ್ಪ, ತಿಮ್ಮಯ್ಯಗೆ ಅವಮಾನಿಸಿ ಪೋಸ್ಟ್: ಪೊಲೀಸ್ ವರಿಷ್ಠಾಧಿಕಾರಿಗೆ ದೂರು

ಪಾನಮತ್ತನಾಗಿ ಚಾಕು ಹಿಡಿದು ಓಡಾಡಿದ ಆರೋಪಿ ಆಜಯಸಿಂಗ್ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ಬಿಟ್ಟು ಕಳಿಸಿದ್ದರು. ಇನ್ನು ಅದೇ ದಿನ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಎಎಸ್ಐ ಫರಿದಾ ಬಾನು ಅವರ ಕೈಗೆ ಇರಿದು ಗಾಯಗೊಳಿದ್ದು, ಈ ಬಗ್ಗೆ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಅವರು ಸಿಪಿಐ ನಂಜಪ್ಪ ಮತ್ತು ಎಎಸ್ ಐ ಶಿವಕುಮಾರ್ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್