AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸರ ಗಲಾಟೆ: ದೂರು ನೀಡಲು ಬಂದವರು ಕಂಗಾಲು

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸ್ ಇನ್ಸ್​ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿ ನಡುವೆ ಗಲಾಟೆ ನಡೆದಿರುವಂತಹ ಘಟನೆ ನಡೆದಿದೆ. ಪೊಲೀಸ್ ಠಾಣೆಯಲ್ಲೇ ಮಹಿಳಾ ಸಿಬ್ಬಂದಿ ಮುಂದೆಯೇ ಅವಾಚ್ಯ ಶಬ್ದಗಳಿಂದ ಸಿಬ್ಬಂದಿ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಪಿಐ, ಪೊಲೀಸ್ ಸಿಬ್ಬಂದಿಗಳು ಬೈದಾಡಿಕೊಂಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸರ ಗಲಾಟೆ: ದೂರು ನೀಡಲು ಬಂದವರು ಕಂಗಾಲು
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲೇ ಪೊಲೀಸರ ಗಲಾಟೆ: ದೂರು ನೀಡಲು ಬಂದವರು ಕಂಗಾಲು
Shivaprasad B
| Edited By: |

Updated on: Nov 22, 2024 | 3:49 PM

Share

ಬೆಂಗಳೂರು, ನವೆಂಬರ್​ 22: ಪೊಲೀಸ್ ಇನ್ಸ್​ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಗಳ ನಡುವೆ ಠಾಣೆಯಲ್ಲೇ ಗಲಾಟೆ ಆಗಿರುವಂತಹ ಘಟನೆ ನಗರದ ಸದಾಶಿವನಗರ ಠಾಣೆಯಲ್ಲಿ (Sadashivnagar police station) ನಡೆದಿದೆ. ಇನ್ಸ್​​ಪೆಕ್ಟರ್​ ಗಿರೀಶ್, ಎಎಸ್​ಐ ರಂಗಸ್ವಾಮಿ, ಹೆಡ್​ ಕಾನ್​ಸ್ಟೇಬಲ್​ಗಳಾದ ಕದಂಬ ಮತ್ತು ವಸಂತ ನಡುವೆ ಗಲಾಟೆ ಆಗಿದೆ. ಸದ್ಯ ಪರಸ್ಪರ ನಿಂದನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೊಲೀಸ್ ಠಾಣೆಯಲ್ಲೇ ಮಹಿಳಾ ಸಿಬ್ಬಂದಿ ಮುಂದೆಯೇ ಅವಾಚ್ಯ ಶಬ್ದಗಳಿಂದ ಸಿಬ್ಬಂದಿ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಪಿಐ, ಪೊಲೀಸ್ ಸಿಬ್ಬಂದಿಗಳು ಬೈದಾಡಿಕೊಂಡಿದ್ದಾರೆ. ಪೊಲೀಸರ ಗಲಾಟೆ ನೋಡಿ ದೂರು ಕೊಡಲು ಬಂದವರು ಕಂಗಾಲಾಗಿದ್ದಾರೆ.

ಕರ್ತವ್ಯ ಲೋಪ: ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಎಎಸ್ಐ ಅಮಾನತ್ತು

ಇನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಎಎಸ್ಐ ಅಮಾನತ್ತು ಮಾಡಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ನಂಜಪ್ಪ, ಎಎಸ್ಐ ಶಿವಶಂಕರೆಡ್ಡಿ ಸಸ್ಪೆಂಡ್ ಆದ ಅಧಿಕಾರಿಗಳು. ಕರ್ತವ್ಯಲೋಪ ಹಿನ್ನಲೆ ಅಮಾನತು ಗೊಳಿಸಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಆದೇಶ ಹೊರಡಿಸಿದ್ದರು.

ಅ. 29 ರಂದು ಬಂಗಾರಪೇಟೆ ಪೊಲೀಸ್ ಠಾಣೆ ಎಎಸ್ಐ ಫರಿದಾ ಬಾನು ಅವರಿಗೆ ಚಾಕು ಇರಿದ ಪ್ರಕರಣ ಸಂಬಂಧದಲ್ಲಿ ಬಿಹಾರ ಮೂಲದ ಅಜಯ್ ಸಿಂಗ್ ಎನ್ನುವರಿಂದ ಚಾಕು ಇರಿದು ಗಾಯಗೊಳಿಸಿದ್ದರು. ಚಾಕು ಇರಿತಕ್ಕು ಮೊದಲು ಅಜಯ್ ಸಿಂಗ್ ಅವರನ್ನು ಪೊಲೀಸರು ಠಾಣೆಗೆ ಕರೆತಂದು ವಾಪಾಸ್ ಕಳಿಸಿದ್ದರು.

ಇದನ್ನೂ ಓದಿ: ಕಾರ್ಯಪ್ಪ, ತಿಮ್ಮಯ್ಯಗೆ ಅವಮಾನಿಸಿ ಪೋಸ್ಟ್: ಪೊಲೀಸ್ ವರಿಷ್ಠಾಧಿಕಾರಿಗೆ ದೂರು

ಪಾನಮತ್ತನಾಗಿ ಚಾಕು ಹಿಡಿದು ಓಡಾಡಿದ ಆರೋಪಿ ಆಜಯಸಿಂಗ್ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ಬಿಟ್ಟು ಕಳಿಸಿದ್ದರು. ಇನ್ನು ಅದೇ ದಿನ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಎಎಸ್ಐ ಫರಿದಾ ಬಾನು ಅವರ ಕೈಗೆ ಇರಿದು ಗಾಯಗೊಳಿದ್ದು, ಈ ಬಗ್ಗೆ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಅವರು ಸಿಪಿಐ ನಂಜಪ್ಪ ಮತ್ತು ಎಎಸ್ ಐ ಶಿವಕುಮಾರ್ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್