AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ

ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ
ಘಟನೆ ನಡೆದ ಸ್ಥಳ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 6:41 PM

Share

ಮಂಗಳೂರು: ಪೊಲೀಸರನ್ನು ಕಂಡರೆ ಬಹುತೇಕರು ಭಯ ಬೀಳುತ್ತಾರೆ. ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಕಂಡಾಕ್ಷಣ ಒಮ್ಮೆ ಭಯವಾಗೋದು ಸಾಮಾನ್ಯ. ಅದರಲ್ಲೂ ಕಳ್ಳರು, ದುಷ್ಕರ್ಮಿಗಳಿಗಂತೂ ಪೊಲೀಸರನ್ನು ಕಂಡರೆ ನಡುಕ ಹುಟ್ಟಿಬಿಡುತ್ತದೆ. ಆದರೆ, ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಯೋರ್ವ ಹಾಡ ಹಗಲೇ ಪೊಲೀಸರ ಮೇಲೆ ತಲ್ವಾರ್​ನಿಂದ ದಾಳಿ ನಡೆಸಿದ್ದಾನೆ!

ಮಂಗಳೂರಿನ ರಥಬೀದಿಯ ನ್ಯೂಚಿತ್ರ ಟಾಕೀಸ್ ಬಳಿ ಈ ಘಟನೆ ನಡೆದಿದೆ. ​ಇಂದು ಮುಂಜಾನೆ ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ಗಣೇಶ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯ ಮಾತ್ರ ಆಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳಾ ಕಾನ್ಸ್​ಟೇಬಲ್​ಗಳಿಗೆ ಯಾವುದೇ ತೊಂದರೆ ಉಂಟಾಗಿಲ್ಲ.

ತಲ್ವಾರ್‌ನಿಂದ ಹಲ್ಲೆಗೈದು ಪರಾರಿಯಾಗಿರುವ ದುಷ್ಕರ್ಮಿ ಯಾರೆಂಬುದು ಇನ್ನೂ ಪತ್ತೆ ಆಗಿಲ್ಲ. ಇವರ ಶೋಧಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಂದಹಾಗೆ, ಪೊಲೀಸರ ಮೇಲೆ ಹಲ್ಲೆ ನಡೆಸೋಕೆ ಕಾರಣ ಏನು ಎನ್ನುವ ವಿಚಾರ ಕೂಡ ಇನ್ನೂ ಬಹಿರಂಗವಾಗಿಲ್ಲ.

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು