AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ

ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ
ಘಟನೆ ನಡೆದ ಸ್ಥಳ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 6:41 PM

Share

ಮಂಗಳೂರು: ಪೊಲೀಸರನ್ನು ಕಂಡರೆ ಬಹುತೇಕರು ಭಯ ಬೀಳುತ್ತಾರೆ. ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಕಂಡಾಕ್ಷಣ ಒಮ್ಮೆ ಭಯವಾಗೋದು ಸಾಮಾನ್ಯ. ಅದರಲ್ಲೂ ಕಳ್ಳರು, ದುಷ್ಕರ್ಮಿಗಳಿಗಂತೂ ಪೊಲೀಸರನ್ನು ಕಂಡರೆ ನಡುಕ ಹುಟ್ಟಿಬಿಡುತ್ತದೆ. ಆದರೆ, ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಯೋರ್ವ ಹಾಡ ಹಗಲೇ ಪೊಲೀಸರ ಮೇಲೆ ತಲ್ವಾರ್​ನಿಂದ ದಾಳಿ ನಡೆಸಿದ್ದಾನೆ!

ಮಂಗಳೂರಿನ ರಥಬೀದಿಯ ನ್ಯೂಚಿತ್ರ ಟಾಕೀಸ್ ಬಳಿ ಈ ಘಟನೆ ನಡೆದಿದೆ. ​ಇಂದು ಮುಂಜಾನೆ ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ಗಣೇಶ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯ ಮಾತ್ರ ಆಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳಾ ಕಾನ್ಸ್​ಟೇಬಲ್​ಗಳಿಗೆ ಯಾವುದೇ ತೊಂದರೆ ಉಂಟಾಗಿಲ್ಲ.

ತಲ್ವಾರ್‌ನಿಂದ ಹಲ್ಲೆಗೈದು ಪರಾರಿಯಾಗಿರುವ ದುಷ್ಕರ್ಮಿ ಯಾರೆಂಬುದು ಇನ್ನೂ ಪತ್ತೆ ಆಗಿಲ್ಲ. ಇವರ ಶೋಧಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಂದಹಾಗೆ, ಪೊಲೀಸರ ಮೇಲೆ ಹಲ್ಲೆ ನಡೆಸೋಕೆ ಕಾರಣ ಏನು ಎನ್ನುವ ವಿಚಾರ ಕೂಡ ಇನ್ನೂ ಬಹಿರಂಗವಾಗಿಲ್ಲ.

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?