ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ

ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ರಕ್ಷಣೆ ನೀಡುವ ಪೊಲೀಸರ ಮೇಲೆ ಮಂಗಳೂರಲ್ಲಿ ನಡೆಯಿತು ತಲ್ವಾರ್​ನಿಂದ ದಾಳಿ
ಘಟನೆ ನಡೆದ ಸ್ಥಳ
Edited By:

Updated on: Dec 16, 2020 | 6:41 PM

ಮಂಗಳೂರು: ಪೊಲೀಸರನ್ನು ಕಂಡರೆ ಬಹುತೇಕರು ಭಯ ಬೀಳುತ್ತಾರೆ. ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಕಂಡಾಕ್ಷಣ ಒಮ್ಮೆ ಭಯವಾಗೋದು ಸಾಮಾನ್ಯ. ಅದರಲ್ಲೂ ಕಳ್ಳರು, ದುಷ್ಕರ್ಮಿಗಳಿಗಂತೂ ಪೊಲೀಸರನ್ನು ಕಂಡರೆ ನಡುಕ ಹುಟ್ಟಿಬಿಡುತ್ತದೆ. ಆದರೆ, ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಯೋರ್ವ ಹಾಡ ಹಗಲೇ ಪೊಲೀಸರ ಮೇಲೆ ತಲ್ವಾರ್​ನಿಂದ ದಾಳಿ ನಡೆಸಿದ್ದಾನೆ!

ಮಂಗಳೂರಿನ ರಥಬೀದಿಯ ನ್ಯೂಚಿತ್ರ ಟಾಕೀಸ್ ಬಳಿ ಈ ಘಟನೆ ನಡೆದಿದೆ. ​ಇಂದು ಮುಂಜಾನೆ ಮುಖ್ಯ ಕಾನ್​ಸ್ಟೇಬಲ್ ಗಣೇಶ್​ ಹಾಗೂ ಮಹಿಳಾ ಕಾನ್​​ಸ್ಟೇಬಲ್​ಗಳು ಕೆಲಸಕ್ಕೆ ಹಾಜರಾಗಿದ್ದರು. ಈ ವೇಳೆ ದುಷ್ಕರ್ಮಿ ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಬಂದರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಗಣೇಶ್‌ಗೆ ಗಾಯಗಳಾಗಿವೆ.

ಗಣೇಶ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯ ಮಾತ್ರ ಆಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳಾ ಕಾನ್ಸ್​ಟೇಬಲ್​ಗಳಿಗೆ ಯಾವುದೇ ತೊಂದರೆ ಉಂಟಾಗಿಲ್ಲ.

ತಲ್ವಾರ್‌ನಿಂದ ಹಲ್ಲೆಗೈದು ಪರಾರಿಯಾಗಿರುವ ದುಷ್ಕರ್ಮಿ ಯಾರೆಂಬುದು ಇನ್ನೂ ಪತ್ತೆ ಆಗಿಲ್ಲ. ಇವರ ಶೋಧಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಂದಹಾಗೆ, ಪೊಲೀಸರ ಮೇಲೆ ಹಲ್ಲೆ ನಡೆಸೋಕೆ ಕಾರಣ ಏನು ಎನ್ನುವ ವಿಚಾರ ಕೂಡ ಇನ್ನೂ ಬಹಿರಂಗವಾಗಿಲ್ಲ.

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us