AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪೊಲೀಸ್ ಕಾನ್ಸ್‌ಟೇಬಲ್ ವಿವಾಹ ಆಮಂತ್ರಣ ಪತ್ರಿಕೆ ಎಲ್ಲರಿಗೂ ಮಾದರಿ! ಹೇಗೆ ಗೊತ್ತಾ?

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್‌ಟೇಬಲ್ ಮಂಜುನಾಥ್ ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಸಂಚಾರಿ ನಿಯಮಗಳ ಜಾಗೃತಿ ಮೂಡಿಸುವ ಹಾಗೂ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಆಮಂತ್ರಣ ಮುದ್ರಿಸಿ ಮದುವೆಗೆ ಆಹ್ವಾನಿಸುತ್ತಿದ್ದಾರೆ.

ಈ ಪೊಲೀಸ್ ಕಾನ್ಸ್‌ಟೇಬಲ್ ವಿವಾಹ ಆಮಂತ್ರಣ ಪತ್ರಿಕೆ ಎಲ್ಲರಿಗೂ ಮಾದರಿ! ಹೇಗೆ ಗೊತ್ತಾ?
ಕಾನ್ಸ್‌ಟೇಬಲ್ ಮಂಜುನಾಥ್ ಜೋಡಿ.
preethi shettigar
| Edited By: |

Updated on: Dec 15, 2020 | 5:12 PM

Share

ಬೆಂಗಳೂರು: ಮದುವೆ ಅಂದ್ರೆ ಸಾಕು ಅದೊಂದು ಹಬ್ಬದ ವಾತಾವರಣ, ಲಕ್ಷ ಲಕ್ಷ ಖರ್ಚು ಮಾಡಿ ಆಡಂಬರವಾಗಿ ಮದುವೆ ಮಾಡೋದು ಈ ಕಾಲದ ಟ್ರೆಂಡ್ ಆಗಿಬಿಟ್ಟಿದೆ. ಅಸಲಿಗೆ ಮದುವೆಯ ಸಂಭ್ರಮ ಹೆಚ್ಚಿಸುವುದೇ ವಿವಾಹ ಆಮಂತ್ರಣ ಪತ್ರಿಕೆ. ಆದ್ರೆ ಇಲ್ಲೊಬ್ಬ ಪೊಲೀಸ್ ಕಾನ್ಸ್‌ಟೇಬಲ್​ನ ವಿವಾಹ ಆಮಂತ್ರಣ ಪತ್ರ ಎಲ್ಲರನ್ನ ತಿರುಗಿ ನೋಡುವಂತೆ ಮಾಡಿದೆ ಹಾಗಿದ್ರೆ ಮದುವೆ ಪತ್ರಿಕೆಯಲ್ಲಿ ಏನಿದೆ ಅಂತಹ ವಿಶೇಷ ಅಂತಿರಾ ನೀವೇ ನೋಡಿ.

ಕಾನ್ಸ್‌ಟೇಬಲ್ ಮಂಜುನಾಥ್ ಲಗ್ನ ಪತ್ರಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್‌ಟೇಬಲ್ ಮಂಜುನಾಥ್ ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಸಂಚಾರಿ ನಿಯಮಗಳ ಜಾಗೃತಿ ಮೂಡಿಸುವ ಹಾಗೂ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಆಮಂತ್ರಣ ಮುದ್ರಿಸಿ ಮದುವೆಗೆ ಆಹ್ವಾನಿಸುತ್ತಿದ್ದಾರೆ.

ಕಾನ್ಸ್‌ಟೇಬಲ್ ಮಂಜುನಾಥ್ ಮದುವೆ ಆಮಂತ್ರಣ ಪತ್ರಿಕೆ

ಡಿಸೆಂಬರ್ 16 ಹಾಗೂ 17 ರಂದು ದಾವಣಗೆರೆಯ ಖಾಸಗಿ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನಡೆಯಲಿದ್ದು, ಮಂಜುನಾಥ್‌ರ ಸಮಾಜಮುಖಿ ಕಾರ್ಯ ಹಾಗೂ ಸಂಚಾರಿ ಜಾಗೃತಿ ಮೂಡಿಸುವ ನೂತನ ಪ್ರಯೋಗವನ್ನು ಕಂಡು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಹದ್ಯೋಗಿಗಳು ಹಾಗೂ ಸಾರ್ವಜನಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನ್ಸ್‌ಟೇಬಲ್ ಮಂಜುನಾಥ್

ಪೊಲೀಸ್ ಇಲಾಖೆ ಸುರಕ್ಷತಾ ಕ್ರಮಗಳ ಅರಿವಿಗಾಗಿ ಸೆಲೆಬ್ರೆಟಿಗಳನ್ನ ಕರೆಸೋದು, ಭಿತ್ತಿ ಪತ್ರಗಳನ್ನ ಅಂಟಿಸೋದು, ಆಟೋ‌ಗಳಲ್ಲಿ ಸಾರ್ವಜನಿಕ‌ ಪ್ರಕಟಣೆ ಮಾಡೋದು, ಸಾರ್ವಜನಿಕ‌ ಸ್ಥಳಗಳಲ್ಲಿ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲು ಹಣ ವ್ಯಯಿಸುತ್ತಿದೆ.

ಆದ್ರೆ ಕಾನ್ಸ್‌ಟೇಬಲ್ ಮಂಜುನಾಥ್ ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಸಂಚಾರ ದೀಪಗಳು, ರಸ್ತೆಯಲ್ಲಿನ ಸೂಚನ ಫಲಕಗಳ ಅರ್ಥ, ತುರ್ತು ಸೇವೆಗೆ ಕರೆ ಮಾಡಲು 112 ಬಳಸಬೇಕು ಹಾಗೂ ಸಂಚಾರಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎನ್ನುವ ಮುಂಜಾಗೃತ ಕ್ರಮಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪರಿ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.

ಆನಂದ್ ಸಿಂಗ್ ಪುತ್ರನ ಅದ್ಧೂರಿ ಲಗ್ನ ಪತ್ರಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ!?

 

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್