AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ನಗರದಲ್ಲಿ ಪೊಲೀಸರಿಂದ ಮುಂದುವರೆದ ಗಾಂಜಾ ಕುಳಗಳ ಬೇಟೆ: 467 ಜನರು ವಶಕ್ಕೆ ಪಡೆದು ತಪಾಸಣೆ

ಇಂದು ಹುಬ್ಬಳ್ಳಿಯ ಆರ್​ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಎರಡನೇ ಸುತ್ತಿನ ಜಾಗೃತಿ ಕಾರ್ಯಗಾರ ಮಾಡಲಾಗಿದೆ. ಪಾಸಿಟಿವ್ ಬಂದ ವ್ಯಸನಿಗಳಿಗೆ ಮತ್ತು ಪೋಷಕರಿಗೂ ಪೊಲೀಸರಿಂದ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಮಾದಕ ವಸ್ತುಗಳ ವ್ಯಸನದಿಂದ ಹೊರ ಬರಲು ಸಲಹೆ ನೀಡಲಾಗಿದೆ. ಮಕ್ಕಳ ನಡತೆಯಿಂದ ಬೇಸತ್ತ ಪೋಷಕರು ಕಮಿಷನರ್ ಮುಂದೆ ಕಣ್ಣೀರು ಹಾಕಿದ್ದಾರೆ. 

ಅವಳಿ ನಗರದಲ್ಲಿ ಪೊಲೀಸರಿಂದ ಮುಂದುವರೆದ ಗಾಂಜಾ ಕುಳಗಳ ಬೇಟೆ: 467 ಜನರು ವಶಕ್ಕೆ ಪಡೆದು ತಪಾಸಣೆ
ಅವಳಿ ನಗರದಲ್ಲಿ ಪೊಲೀಸರಿಂದ ಮುಂದುವರೆದ ಗಾಂಜಾ ಕುಳಗಳ ಬೇಟೆ: 467 ಜನರು ವಶಕ್ಕೆ ಪಡೆದು ತಪಾಸಣೆ
ಶಿವಕುಮಾರ್ ಪತ್ತಾರ್
| Edited By: |

Updated on: Aug 04, 2024 | 7:59 PM

Share

ಹುಬ್ಬಳ್ಳಿ, ಆಗಸ್ಟ್​ 4: ಅವಳಿ ನಗರದಲ್ಲಿ ಪೊಲೀಸರಿಂದ ಗಾಂಜಾ (ganja) ಕುಳಗಳ ಭೇಟಿ ಮುಂದುವರೆದಿದೆ. ಗಾಂಜಾ ಮಾರಾಟಗಾರರು ಮತ್ತು ವ್ಯಸನಿಗಳು ಸೇರಿದಂತೆ ಒಟ್ಟು 467 ಜನರನ್ನು ಖಾಕಿ (police) ವಶಕ್ಕೆ ಪಡೆದುಕೊಂಡಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ವಶಕ್ಕೆ ಪಡೆದವರನ್ನು ಹುಬ್ಬಳ್ಳಿಯ ಕಿಮ್ಸ್, ಧಾರವಾಡದ ಎಸ್ಡಿಎಂ, ಡಿ ಮಾನ್ಸ್​ಗಳಲ್ಲಿ ತಪಾಸಣೆ ಮಾಡಿಸಲಾಗಿದೆ.

467 ಗಾಂಜಾ ವ್ಯಸನಿಗಳಲ್ಲಿ 251 ಜನರ ರಿಸಲ್ಟ್ ಪಾಸಿಟಿವ್ ಬಂದಿದ್ದು, 216 ಜನರ ವರದಿ ನೆಗೆಟಿವ್ ಬಂದಿದೆ. ವಶಕ್ಕೆ ಪಡೆದವರಲ್ಲಿ 45 ಜನರ ಮೇಲೆ ದೂರು ದಾಖಲಾಗಿದೆ. ಡ್ರಗ್ ಫೆಡ್ಲರ್​ಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿದ ಪಿಎಸ್ಐ

ಕಳೆದ ಭಾನುವಾರ ಒಂದನೇ ಸುತ್ತಿನ ಜಾಗೃತಿ ಕಾರ್ಯಗಾರ ಮಾಡಲಾಗಿದ್ದು, ಇಂದು ಹುಬ್ಬಳ್ಳಿಯ ಆರ್​ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಎರಡನೇ ಸುತ್ತಿನ ಜಾಗೃತಿ ಕಾರ್ಯಗಾರ ಮಾಡಲಾಗಿದೆ. ಪಾಸಿಟಿವ್ ಬಂದ ವ್ಯಸನಿಗಳಿಗೆ ಮತ್ತು ಪೋಷಕರಿಗೂ ಪೊಲೀಸರಿಂದ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಮಾದಕ ವಸ್ತುಗಳ ವ್ಯಸನದಿಂದ ಹೊರ ಬರಲು ಸಲಹೆ ನೀಡಲಾಗಿದೆ. ಮಕ್ಕಳ ನಡತೆಯಿಂದ ಬೇಸತ್ತ ಪೋಷಕರು ಕಮಿಷನರ್ ಮುಂದೆ ಕಣ್ಣೀರು ಹಾಕಿದ್ದಾರೆ.

ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡ ಗ್ರಾಮದ ಬಸವರಾಜ ಹೊಸೂರ (47) ಆತ್ಮಹತ್ಯೆ ಮಾಡಿಕೊಂಡ ಕೈದಿ. ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಜೋಡಿ ಕೊಲೆ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು.

ಅನಾರೋಗ್ಯ ಹಿನ್ನೆಲೆ ಭಾರತೀಯ ಯೋಧ ರಾಜಸ್ಥಾನದಲ್ಲಿ ಸಾವು

ಬಾಗಲಕೋಟೆ: ಅನಾರೋಗ್ಯದಿಂದ ಬಾಗಲಕೋಟೆ ಜಿಲ್ಲೆಯ ಯೋಧ ರಾಜಸ್ಥಾನದ ಜೋಧ್‌ಪುರ್ ಬೆಟಾಲಿಯನ್​ನಲ್ಲಿ  ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಉಸಿರಾಟ ಸಮಸ್ಯೆಯಿಂದ ಹನುಮಂತ ತಳವಾರ(32) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಮನೆಯಲ್ಲೇ ದರೋಡೆ, ಎಫ್​ಐಆರ್​ ದಾಖಲು: ಅನುಮಾನ ಹುಟ್ಟಿಸಿದ ಪೊಲೀಸರ ನಡೆ

ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿ. 2011ರಲ್ಲಿ ಸೇನೆಗೆ ಸೇರ್ಪಡೆ ಆಗಿದ್ದರು. ನಾಳೆ ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!