Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Ravi: ಟೂಲ್​ ಕಿಟ್​ ಪ್ರಕರಣ; ಐದು ದಿನ ಪೊಲೀಸ್​ ಕಸ್ಟಡಿಗೆ ದಿಶಾ ರವಿ

ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರು. ನಂತರ ಅವರನ್ನು ನೇರವಾಗಿ ದೆಹಲಿಗೆ ಕೊಂಡೊಯ್ಯಲಾಗಿತ್ತು.

Disha Ravi: ಟೂಲ್​ ಕಿಟ್​ ಪ್ರಕರಣ; ಐದು ದಿನ ಪೊಲೀಸ್​ ಕಸ್ಟಡಿಗೆ ದಿಶಾ ರವಿ
ದಿಶಾ ರವಿ (ಸಂಗ್ರಹ ಚಿತ್ರ)
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 14, 2021 | 4:03 PM

ದೆಹಲಿ: ರೈತರ ಹೋರಾಟಕ್ಕೆ ಸಂಬಂಧಿಸಿ ಪರಿಸರವಾದಿ ಗ್ರೇಟ್​ ಥನ್​ಬರ್ಗ್​ ಹಂಚಿಕೊಂಡಿದ್ದ ಟೂಲ್​ ಕಿಟ್​ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮೂಲದ ಪರಿಸರವಾದಿ ದಿಶಾ ರವಿ ಅವರನ್ನು ಪೊಲೀಸರು ಬಂಧಿಸಿ ದೆಹಲಿಯ ಪಟಿಯಾಲ ಹೌಸ್​ ಕೋರ್ಟ್​ ಎದುರು ಹಾಜರು ಪಡಿಸಿದ್ದಾರೆ. ಈ ವೇಳೆ ಕೋರ್ಟ್​ ದಿಶಾ ಅವರನ್ನು ಐದು ದಿನ ಪೊಲೀಸ್​ ಕಸ್ಟಡಿಗೆ ನೀಡಿದೆ.

ಕ್ರಿಯೇಟರ್ಸ್ ಆಫ್ ಟೂಲ್ ಕಿಟ್ ವಿರುದ್ಧ ದೆಹಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಚಾರದ ತನಿಖೆ ವೇಳೆ ದಿಶಾ ಹೆಸರು ಬೆಳಕಿಗೆ ಬಂದಿತ್ತು. ಹೀಗಾಗಿ, ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದರು. ನಂತರ ಅವರನ್ನು ನೇರವಾಗಿ ದೆಹಲಿಗೆ ಕೊಂಡೊಯ್ದು ಪಟಿಯಾಲ ಹೌಸ್​ ಕೋರ್ಟ್ ಎದುರು ಹಾಜರುಪಡಿಸಿದ್ದರು.

ದಿಶಾ ರವಿ, ಬೆಂಗಳೂರಿನ ಪ್ರತಿಷ್ಠಿತ ಮಹಿಳಾ ಕಾಲೇಜುಗಳಲ್ಲಿ ಒಂದಾಗಿರುವ ಮೌಂಟ್​ ಕಾರ್ಮಲ್​ ವಿದ್ಯಾರ್ಥಿನಿ ಆಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ದಿಶಾ ರವಿ ವಿರುದ್ಧ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿವೆ. ಖಲಿಸ್ತಾನಿ ಗುಂಪಿನ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಎಂದು ಕರೆದುಕೊಳ್ಳುವ ಸಂಘಟನೆ ಈ ಟೂಲ್​ಕಿಟ್ ಸೃಷ್ಟಿಸಿದೆ ಎಂದು ಈ ಹಿಂದೆ ದೆಹಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನು ಪ್ರಸಾರ ಮಾಡಿರುವ ಆರೋಪ ದಿಶಾ ಮೇಲಿದೆ.

ಇದನ್ನೂ ಓದಿ: ಬೆಂಗಳೂರಿನ ಯುವ ಹವಾಮಾನ ಹೋರಾಟಗಾರ್ತಿ ಬಂಧನ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ