AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Ravi: ಟೂಲ್​ ಕಿಟ್​ ಪ್ರಕರಣ; ಐದು ದಿನ ಪೊಲೀಸ್​ ಕಸ್ಟಡಿಗೆ ದಿಶಾ ರವಿ

ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರು. ನಂತರ ಅವರನ್ನು ನೇರವಾಗಿ ದೆಹಲಿಗೆ ಕೊಂಡೊಯ್ಯಲಾಗಿತ್ತು.

Disha Ravi: ಟೂಲ್​ ಕಿಟ್​ ಪ್ರಕರಣ; ಐದು ದಿನ ಪೊಲೀಸ್​ ಕಸ್ಟಡಿಗೆ ದಿಶಾ ರವಿ
ದಿಶಾ ರವಿ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Feb 14, 2021 | 4:03 PM

Share

ದೆಹಲಿ: ರೈತರ ಹೋರಾಟಕ್ಕೆ ಸಂಬಂಧಿಸಿ ಪರಿಸರವಾದಿ ಗ್ರೇಟ್​ ಥನ್​ಬರ್ಗ್​ ಹಂಚಿಕೊಂಡಿದ್ದ ಟೂಲ್​ ಕಿಟ್​ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮೂಲದ ಪರಿಸರವಾದಿ ದಿಶಾ ರವಿ ಅವರನ್ನು ಪೊಲೀಸರು ಬಂಧಿಸಿ ದೆಹಲಿಯ ಪಟಿಯಾಲ ಹೌಸ್​ ಕೋರ್ಟ್​ ಎದುರು ಹಾಜರು ಪಡಿಸಿದ್ದಾರೆ. ಈ ವೇಳೆ ಕೋರ್ಟ್​ ದಿಶಾ ಅವರನ್ನು ಐದು ದಿನ ಪೊಲೀಸ್​ ಕಸ್ಟಡಿಗೆ ನೀಡಿದೆ.

ಕ್ರಿಯೇಟರ್ಸ್ ಆಫ್ ಟೂಲ್ ಕಿಟ್ ವಿರುದ್ಧ ದೆಹಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಚಾರದ ತನಿಖೆ ವೇಳೆ ದಿಶಾ ಹೆಸರು ಬೆಳಕಿಗೆ ಬಂದಿತ್ತು. ಹೀಗಾಗಿ, ಬೆಂಗಳೂರಿಗೆ ಬಂದಿದ್ದ ದೆಹಲಿ ಪೊಲೀಸರು ಸೋಲದೇವನಹಳ್ಳಿಯಲ್ಲಿರುವ ದಿಶಾ ರವಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದರು. ನಂತರ ಅವರನ್ನು ನೇರವಾಗಿ ದೆಹಲಿಗೆ ಕೊಂಡೊಯ್ದು ಪಟಿಯಾಲ ಹೌಸ್​ ಕೋರ್ಟ್ ಎದುರು ಹಾಜರುಪಡಿಸಿದ್ದರು.

ದಿಶಾ ರವಿ, ಬೆಂಗಳೂರಿನ ಪ್ರತಿಷ್ಠಿತ ಮಹಿಳಾ ಕಾಲೇಜುಗಳಲ್ಲಿ ಒಂದಾಗಿರುವ ಮೌಂಟ್​ ಕಾರ್ಮಲ್​ ವಿದ್ಯಾರ್ಥಿನಿ ಆಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ದಿಶಾ ರವಿ ವಿರುದ್ಧ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿವೆ. ಖಲಿಸ್ತಾನಿ ಗುಂಪಿನ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಎಂದು ಕರೆದುಕೊಳ್ಳುವ ಸಂಘಟನೆ ಈ ಟೂಲ್​ಕಿಟ್ ಸೃಷ್ಟಿಸಿದೆ ಎಂದು ಈ ಹಿಂದೆ ದೆಹಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನು ಪ್ರಸಾರ ಮಾಡಿರುವ ಆರೋಪ ದಿಶಾ ಮೇಲಿದೆ.

ಇದನ್ನೂ ಓದಿ: ಬೆಂಗಳೂರಿನ ಯುವ ಹವಾಮಾನ ಹೋರಾಟಗಾರ್ತಿ ಬಂಧನ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ