AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ

ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಆಳವಾಗಿ ತನಿಖೆ ಮಾಡುವ ಉದ್ದೇಶದಿಂದ ಎಲ್ಲಾ ಪ್ರಕರಣಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಜತೆಗೆ ತನಿಖಾಧಿಕಾರಿಯಾಗಿ ಓರ್ವ ಎಸಿಪಿ ದರ್ಜೆ ಅಧಿಕಾರಿ ನೇಮಕಕ್ಕೆ ಪೊಲೀಸ್ ಇಲಾಖೆ​ ಸೂಚಿಸಿದೆ.

ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ
ಸಾಹಿತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
Shivaprasad B
| Edited By: |

Updated on:Aug 24, 2023 | 7:06 PM

Share

ಬೆಂಗಳೂರು, ಆಗಸ್ಟ್ 24: ಬೆದರಿಕೆ (threats) ಪತ್ರಗಳಿಗೆ ಸಂಬಂಧಿಸಿದಂತೆ ಆಗಸ್ಟ್ 23 ರಂದು ಸಾಹಿತಿಗಳ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಬೆನ್ನಲೆ ಬೆಂಗಳೂರು ಪೊಲೀಸ್ ಎಲ್ಲಾ ಪ್ರಕರಣಗಳ ತನಿಖಾಧಿಕಾರಿಯಾಗಿ ಓರ್ವ ಎಸಿಪಿ ದರ್ಜೆ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಲಾಗಿದೆ. ಜೊತೆಗೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಆಳವಾಗಿ ತನಿಖೆ ಮಾಡುವ ಉದ್ದೇಶದಿಂದ ಎಲ್ಲಾ ಪ್ರಕರಣಗಳು ಸಿಸಿಬಿ ವರ್ಗಾವಣೆ ಕುರಿತಂತೆ ಡಿಜಿ ಮತ್ತು ಐಜಿಪಿ ಡಾ.ಅಲೋಕ್ ಮೋಹನ್ ಪತ್ರ ಬರೆದಿದ್ದಾರೆ.

ಪ್ರತಿದಿನ ಪ್ರಕರಣಗಳ ಮೇಲ್ವಿಚಾರಣೆ ನಡೆಸಲು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಉಪಪೋಲಿಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅನಾಮಧೇಯ ಪತ್ರಗಳ ಹಿನ್ನಲೆ ಕೆಲ ಸಾಹಿತಿಗಳಿಂದ ದೂರು ಕೂಡ ನೀಡಲಾಗಿದ್ದು, ನಗರದ ವಿವಿಧ ಠಾಣೆಗಳಲ್ಲಿ ಕೇಸ್​ಗಳು ದಾಖಲಾಗಿವೆ.

ಸಾಹಿತಿಗಳ ನಿಯೋಗಕ್ಕೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಭೇಟಿ ಮಾಡಿದ್ದ ಸಾಹಿತಿಗಳ ನಿಯೋಗವೂ ಮನವಿ ಸಲ್ಲಿಸಿದ್ದರು. ಅಷ್ಟೆ ಅಲ್ಲದೇ ಸೂಕ್ತ ಕ್ರಮ ವಹಿಸುವುದಾಗಿ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಇದನ್ನೂ ಓದಿ: ಯಶವಂತಪುರ ಕ್ಷೇತ್ರದಲ್ಲಿ ಸುಂಟರಗಾಳಿ ಎದ್ದಿದೆ, ಇದು ನಮಗೆ ಎಚ್ಚರಿಕೆ ಗಂಟೆ; ಸೋಮಶೇಖರ್ ಭೇಟಿ ಬಳಿಕ ಹೀಗೆ ಹೇಳಿದ್ದೇಕೆ ಅಶೋಕ್?

ಹಿರಿಯ ಸಾಹಿತಿಗಳಾದ ಮರುಳಸಿದ್ದಪ್ಪ, ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ಎಲ್.ಎನ್.ಮುಕುಂದರಾಜ್, ರುದ್ರಪ್ಪ ಹನಗವಾಡಿ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಸೇರಿ ಹಲವು ಪ್ರಮುಖರಿಂದ ನಿನ್ನೆ ಸಭೆ ಮಾಡಲಾಗಿದೆ.

ಇದನ್ನೂ ಓದಿ: ಚಂದ್ರಯಾನ 3 ರ ಯಶಸ್ಸಿಗೆ ನಿಪ್ಪಾಣಿ ತಾಲೂಕಿನ ಇಬ್ಬರು ವಿಜ್ಞಾನಿಗಳ ಮಹತ್ತರ ಕೊಡುಗೆ

ಸಭೆಯಲ್ಲಿ ಹಿರಿಯ ಸಾಹಿತ್ಯ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ, ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಲ್ಲಿ ಸಾಹಿತಿಗಳಿಗೆ ನಿರಂತರ ಬೆದರಿಕೆ ಕರೆಗಳು ಮತ್ತು ಪತ್ರಗಳು ಬಂದಿವೆ. ಇದು ಆತಂಕಕ್ಕೆ ತಳ್ಳುವ ಮೂಲಕ ಸಮಾಜದಲ್ಲಿ ಮುಜುಗರದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:55 pm, Thu, 24 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?