AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳಿಗೆ ಮೂರು ತಿಂಗಳಲ್ಲಿ ಮುಕ್ತಿ: ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆ

ಹಳೇ ಪ್ರಕರಣಗಳ ವಿಲೇವಾರಿ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಗಳ ಪೊಲೀಸ್​ ವರಿಷ್ಠಾಧಿಕಾರಿಗಳು ಹಾಗೂ ಐಜಿಪಿಗಳ ಜೊತೆ ಎಡಿಜಿಪಿ ಉಮೇಶ್​ ಕುಮಾರ್ ಅವರು ಸಮಾಲೋಚನೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳಿಗೆ ಮೂರು ತಿಂಗಳಲ್ಲಿ ಮುಕ್ತಿ: ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆ
ಕರ್ನಾಟಕ ಪೊಲೀಸ್​
TV9 Web
| Edited By: |

Updated on: Sep 11, 2023 | 7:41 AM

Share

ಬೆಂಗಳೂರು: ಪೊಲೀಸ್​ ಠಾಣೆಗಳಲ್ಲಿ (Police Station) ಬಾಕಿ ಉಳಿದಿರುವ ಸರಿಸುಮಾರು 1.3 ಲಕ್ಷಕ್ಕೂ ಹೆಚ್ಚಿನ ಹಳೆ ಪ್ರಕರಣಗಳನ್ನು (Cases) ಮೂರು ತಿಂಗಳ ಕಾಲಮಿತಿಯಲ್ಲಿ ಮುಕ್ತಾಯಗೊಳಿಸಲು ರಾಜ್ಯ ಪೊಲೀಸ್​ ಇಲಾಖೆ (Police Department) ಮುಂದಾಗಿದೆ. ಈ ನಿಗದಿತ ಅವಧಿಯಲ್ಲಿ ಹಳೇ ಪ್ರಕರಣಗಳಿಗೆ ಮುಕ್ತಿ ನೀಡುವ ಅಧಿಕಾರಿಗಳನ್ನು ಪುರಸ್ಕರಿಸಲು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಅಪರಾಧ) ಉಮೇಶ್​ ಕುಮಾರ್ ನಿರ್ಧರಿಸಿದ್ದಾರೆ.

ಇನ್ನು ಹಳೇ ಪ್ರಕರಣಗಳ ವಿಲೇವಾರಿ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಗಳ ಪೊಲೀಸ್​ ವರಿಷ್ಠಾಧಿಕಾರಿಗಳು ಹಾಗೂ ಐಜಿಪಿಗಳ ಜೊತೆ ಎಡಿಜಿಪಿ ಸಮಾಲೋಚನೆ ನಡೆಸಿದ್ದಾರೆ. 10 ವರ್ಷಗಳಿಂದ ರಾಜ್ಯದಲ್ಲಿ ಗಂಭೀರ ಸ್ವರೂಪ ಕೃತ್ಯಗಳು (ಕೊಲೆ, ದರೋಡೆ, ಸಲಿಗೆ, ಅವಳಿ ಕೊಲೆ ಸೇರಿ ಇತರೆ) ಹಾಗೂ ಗಂಭೀರವಲ್ಲದ (ಜಗಳ, ನಿಂದನೆ ಇತ್ಯಾದಿ) ಕೃತ್ಯಗಳ ಸಂಬಂಧ ಸಕಾಲಕ್ಕೆ ತನಿಖೆ ನಡೆಸದ ಪತ್ತೆಯಾಗದ ಪ್ರಕರಣಗಳೆಂದು ಹೇಳಿ 1.3 ಲಕ್ಷ ಪ್ರಕರಣಗಳು ಕಡತಗಳಲ್ಲೇ ಉಳಿದಿವೆ.

ಹೀಗಾಗಿ ಈ ಪ್ರಕರಣಗಳ ಬಗ್ಗೆ ಪ್ರತಿ ಠಾಣೆಯಿಂದ ಮಾಹಿತಿ ಪಡೆದು ತ್ವರಿತವಾಗಿ ವಿಲೇವಾರಿ ಮಾಡುವಂತೆ ಎಡಿಜಿಪಿ ಉಮೇಶ್‌ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೊಸದಾಗಿ ದಾಖಲಾಗುವ ಪ್ರಕರಣಗಳ ಜತೆ ಹಳೆ ಪ್ರಕರಣಗಳನ್ನು ಸಹ ಹಂತ ಹಂತವಾಗಿ ಮುಕ್ತಾಯಗೊಳಿಸಲಾಗುತ್ತದೆ. ಈಗ ಪ್ರತಿ ತಿಂಗಳು ಸರಾಸರಿ 2 ಸಾವಿರ ಪ್ರಕರಣಗಳತನಿಖೆ ನಡೆಯುತ್ತಿವೆ.

ಇದನ್ನೂ ಓದಿ: Video: ಸಂಚಾರಕ್ಕೆ ಅಡ್ಡಿಯಾದ ಗುಂಡಿಗಳು: ಸಂಚಾರಿ ಪೊಲೀಸ್​ರ ಕೆಲಸಕ್ಕೆ ಎಲ್ಲರ ಮೆಚ್ಚುಗೆ

ಅಪರಾಧ ಪ್ರಕರಣಗಳ ತನಿಖೆ ಕುರಿತು ಆಗಾಗ್ಗೆ ಪರಿಶೀಲಿಸಿ ಸಭೆ ನಡೆಸಬೇಕು. ಈ ಕುರಿತು ಕೇಂದ್ರ ಕಚೇರಿಗೆ ಕೂಡಾ ನಿಯಮಿತವಾಗಿ ಮಾಹಿತಿ ನೀಡುವಂತೆ ಸಹ ನಿರ್ದೇಶಿಸಲಾಗಿದೆ. ಹಳೇ ಪ್ರಕರಣಗಳ ತನಿಖೆಗೆ ಯಾವುದೇ ಮಾರ್ಗಸೂಚಿ ನೀಡದೇ, ಕಾನೂನು ಪ್ರಕಾರ ಅಧಿಕಾರಿಗಳೇ ಸ್ವಯಂ ಚೌಕಟ್ಟು ರೂಪಿಸಿ ಕೊಂಡು ಹಳೇ ಪ್ರಕರಣಗಳಿಗೆ ಮುಕ್ತಿ ಕೊಡಲಾಗುತ್ತದೆ. ಆದರೆ ಆದಷ್ಟು ಬೇಗ ಪ್ರಕರಣಗಳು ಮುಕ್ತಾಯ ಕಾಣಬೇಕು. ಈ ಬಗ್ಗೆ ಉದಾಸೀನತೆ ತೋರಿದರೆ ಸಹಿಸುವುದಿಲ್ಲ ಎಂದು ಎಡಿಜಿಪಿ ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ಹಳೇ ಪ್ರಕರಣಗಳ ವಿಲೇವಾರಿಯಲ್ಲಿ ರಾಮನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ, ಇನ್ನುಳಿದಂತೆ ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪೊಲೀಸರು ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಎಡಿಜಿಪಿ ಉಮೇಶ್​ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ