AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ನಿಂದ ಕಠಿಣ ಕ್ರಮ: ಹೈ ಬೀಮ್​ ಲೈಟ್ ಒನ್​ವೇ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಮಾಡುವವರೇ ಎಚ್ಚರ

ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮಕ್ಕೆ ಟ್ರಾಫಿಕ್​ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಕರ್ನಾಟಕದಾದ್ಯಂತ ಹೈ ಬೀಮ್​ ಲೈಟ್​ ವಾಹನಗಳನ್ನು ತಡೆದು ದಂಡ ಹಾಕುವ ಕೆಲಸ ನಡೆದಿದೆ. ಇದರ ಜೊತೆಗೆ ಒನ್​ವೇ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಮಾಡುವವರ ವಿರುದ್ಧ ಇದೇ ಆಗಸ್ಟ್​​ನಿಂದ ಇನ್ನಷ್ಟು ಕಠಿಣ ಕ್ರಮಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಆಗಸ್ಟ್​ನಿಂದ ಕಠಿಣ ಕ್ರಮ: ಹೈ ಬೀಮ್​ ಲೈಟ್ ಒನ್​ವೇ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಮಾಡುವವರೇ ಎಚ್ಚರ
ಅಲೋಕ್​ ಕುಮಾರ್
ರಮೇಶ್ ಬಿ. ಜವಳಗೇರಾ
|

Updated on: Jul 22, 2024 | 8:00 PM

Share

ಬೆಂಗಳೂರು, (ಜುಲೈ 22): ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಇದರ ಜೊತೆಗೆ ಇದೀಗ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( ಒನ್​ವೇ), ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ.

ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಾದ ಅಲೋಕ್​ ಕುಮಾರ್​ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್​ ನಂಬರ್​ ಪ್ಲೇಟ್​ ಮೇಲೆ ಸಹ ಆಗಸ್ಟ್ 1ರಿಂದ ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.

ಇದನ್ನೂ ಓದಿ: ಹೈ ಬೀಮ್‌ ಲೈಟ್‌ ಹಾಕಿಕೊಂಡು ಓಡಾಡುವ ವಾಹನಗಳಿಗೆ ಶಾಕ್, ಕರ್ನಾಟಕದಾದ್ಯಂತ 8244 ಕೇಸ್ ಬುಕ್

ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್​ಎಸ್​ 281 ಅಡಿಯಲ್ಲಿ ಮತ್ತು 184 ಐಎಂವಿ ಕಾಯ್ದೆಯಡಿ ಹಾಗೂ ಎಫ್​ಐಆರ್​ ದಾಖಲು ಮಾಡಲು ಕ್ರಮ ಜರುಗಿಸಬೇಕೆಂದು ಖಡಕ್ ಸೂಚನೆ ರವಾನಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಇತರೆ ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗು ಫುಟ್​ಬಾತ್​ ಮೇಲೆ ಮೋಟಾರು ಸೈಕಲ್​ಗಳ ಚಾಲನೆ ಮಾಡುವುದು ಬಹಳ ಸಾಮಾನ್ಯವಾಗಿದೆ. ಅದಕ್ಕಾಗಿ ಆಗಸ್ಟ್​ 1ರಿಂದ ಈ ವಿಶೇಷ ಕಾರ್ಯಚರಣೆ ನಡೆಸಬೇಕು. ಇದರ ಜೊತೆ ಜನರಲ್ಲಿ ಮುಂಚಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಕರಪತ್ರ, ಧ್ವನಿ ವರ್ದಕ ಉಪಕರಣಗಳ ಮೂಲಕ ಈ ಬಗ್ಗೆ ತಿಳುವಳಿಕೆ ನೀಡಬೇಕೆಂದು ಹೇಳಿದ್ದಾರೆ.

ಒಟ್ಟಿನಲ್ಲಿ ಅಪಘಾತ ತಡೆಗಟ್ಟು ನಿಟ್ಟಿನಲ್ಲಿ ರಸ್ತೆ ಮತ್ತು ಸುರಕ್ಷತೆ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಾದ ಅಲೋಕ್​ ಕುಮಾರ್ ಪಣ ತೊಟ್ಟಿದ್ದು, ಈ ಬಗ್ಗೆ ವಾಹನ ಸವಾರರು ಎಚ್ಚೆತ್ತುಕೊಳ್ಳಬೇಕಿದೆ. ಒಂದು ವೇಳೆ ಈ ಮೇಲಿನ ಎಲ್ಲಾ ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!