AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಎಫೆಕ್ಟ್: “ಮುಖ್ಯಮಂತ್ರಿ ಪದಕ” ಪ್ರದಾನ ಮುಂದೂಡಿಕೆ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಶ್ರಮಿಸುತ್ತಿದ್ದಾರೆ. ಪೊಲೀಸರ ಅವಿರತ ಶ್ರಮದಿಂದ ರಾಜ್ಯದಲ್ಲಿ ಶಾಂತಿ‌ ನೆಲೆಸಿದೆ. ಕೊರೊನಾ ವೇಳೆ ವೇಳೆ ಅಧಿಕಾರಿಗಳು ಉತ್ತಮ‌ವಾಗಿ ಕೆಲಸ ನಿರ್ವಹಿಸಿದ್ದಾರೆ. ಪೊಲೀಸ್​ ಸಿಬ್ಬಂದಿ ತಮ್ಮ ಪ್ರಾಣ ಲೆಕ್ಕಿಸದೆ ಕೆಲಸ ನಿರ್ವಹಿಸಿದ್ದಾರೆ‌ ಎಂದು ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಹೇಳಿದ್ದಾರೆ.

ನೀತಿ ಸಂಹಿತೆ ಎಫೆಕ್ಟ್: ಮುಖ್ಯಮಂತ್ರಿ ಪದಕ ಪ್ರದಾನ ಮುಂದೂಡಿಕೆ
ಪೊಲೀಸ್​​ ಧ್ವಜ ದಿನಾಚರಣೆ
ವಿವೇಕ ಬಿರಾದಾರ
|

Updated on:Apr 03, 2023 | 6:49 AM

Share

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು (Police) ಶ್ರಮಿಸುತ್ತಿದ್ದಾರೆ. ಪೊಲೀಸರ ಅವಿರತ ಶ್ರಮದಿಂದ ರಾಜ್ಯದಲ್ಲಿ ಶಾಂತಿ‌ ನೆಲೆಸಿದೆ. ಕೊರೊನಾ ವೇಳೆ ಅಧಿಕಾರಿಗಳು ಉತ್ತಮ‌ವಾಗಿ ಕೆಲಸ ನಿರ್ವಹಿಸಿದ್ದಾರೆ. ಪೊಲೀಸ್​ ಸಿಬ್ಬಂದಿ ತಮ್ಮ ಪ್ರಾಣ ಲೆಕ್ಕಿಸದೆ ಕೆಲಸ ನಿರ್ವಹಿಸಿದ್ದಾರೆ‌ ಎಂದು ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Government CS Vandita Sharma) ಅವರು ಹೇಳಿದ್ದಾರೆ. ಪೊಲೀಸ್ ಧ್ವಜ ದಿನಾಚರಣೆ ಹಿನ್ನೆಲೆ ಇಂದು (ಏ.2) ಕೋರಮಂಗಲ ಕೆಎಸ್ಆರ್​ಪಿ ಮೈದಾನದಲ್ಲಿ ಪೊಲೀಸ್​ ಕವಾಯತು ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕವಾಗಿ “ಮುಖ್ಯಮಂತ್ರಿ ಪದಕ” ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ವಿತರಣೆ ಮಾಡಬೇಕಿತ್ತು. ಆದರೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಮುಖ್ಯಮಂತ್ರಿ ಪದಕ ವಿತರಣೆ ಮುಂದೂಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಭಾಗಿಯಾಗಿದ್ದರು. ಬಳಿಕ ಮಾತನಾಡಿದ ಅವರು ಹುತಾತ್ಮ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳಿಗೆ ಗೌರವ ಸಲ್ಲಿಸುತ್ತೇನೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಯಾವುದೇ ಸಮಸ್ಯೆ ಆಗದ ರೀತಿ ಕೆಲ‌ಸ ಮಾಡುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಹೇಳಿದರು.

ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಜಿಲ್ಲೆಯ ಮೂವರು ಸೇರಿ ರಾಜ್ಯದ 42 ಪೊಲೀಸರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟವಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಇನ್ಸ್ ಪೆಕ್ಟರ್ ಕೆ.ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೆ.ಶಿವಕುಮಾರ್, ಡಿಎಆರ್ ಪಡೆಯ ಎ.ಹೆಚ್.ಸಿ ಜೈ ಜಗದೀಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Sun, 2 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ