AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಕೇಸ್: ವಿಚಾರಣೆಗೆ ಹಾಜರಾಗಲು ರಮೇಶ್ ಜಾರಕಿಹೊಳಿಗೆ ಪೊಲೀಸರಿಂದ ನೋಟಿಸ್ ಜಾರಿ

ಆಡುಗೋಡಿಯ ತಾಂತ್ರಿಕ ಘಟಕಕ್ಕೆ ಬಂದು ವಿಚಾರಣೆ ಎದುರಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಸಿಡಿ ಕೇಸ್: ವಿಚಾರಣೆಗೆ ಹಾಜರಾಗಲು ರಮೇಶ್ ಜಾರಕಿಹೊಳಿಗೆ ಪೊಲೀಸರಿಂದ ನೋಟಿಸ್ ಜಾರಿ
ಶಾಸಕ ರಮೇಶ್ ಜಾರಕಿಹೊಳಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 28, 2021 | 8:01 PM

Share

ಬೆಂಗಳೂರು: ವಿವಾದಾತ್ಮಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕಬ್ಬನ್​ಪಾರ್ಕ್ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಆಡುಗೋಡಿಯ ತಾಂತ್ರಿಕ ಘಟಕಕ್ಕೆ ಬಂದು ವಿಚಾರಣೆ ಎದುರಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಚೆಗೆ ಯುವತಿಯ ಪೋಷಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದ್ದರು.

ಇನ್ನಿಬ್ಬರಿಗೂ ನೊಟೀಸ್ ಸಿಡಿ ಪ್ರಕರಣದ ಸೂತ್ರಧಾರ ಎನ್ನಲಾಗಿರುವ ನರೇಶ್​ಗೌಡನ ಹೆಂಡತಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ವ್ಯಕ್ತಿ ಚೇತನ್ ಎಂಬಾತನಿಗೂ ಎಸ್​ಐಟಿಯಿಂದ ನೋಟಿಸ್​ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 10ಕ್ಕೆ ಆಡುಗೋಡಿ ಟೆಕ್ನಿಕಲ್​ ವಿಂಗ್​​ಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ.

ನಾಳೆ ಯುವತಿ ಹೇಳಿಕೆ ಸಾಧ್ಯತೆ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಯುವತಿಯೂ ನಾಳೆ ನಗರಕ್ಕೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಈ ಹಿಂದೆ ಯುವತಿ ಬಿಡುಗಡೆ ಮಾಡಿದ್ದ ಸಿಡಿಯಲ್ಲಿ ‘ನೇರವಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವೆ’ ಎಂದು ಯುವತಿ ಹೇಳಿದ್ದರು. ಯುವತಿ ಪರ ಪೊಲೀಸರಿಗೆ ದೂರು ಸಲ್ಲಿಸಿದ್ದ ಬೆಂಗಳೂರಿನ ವಕೀಲ ಜಗದೀಶ್ ಸಹಕಾರ ನಗರದ ತಮ್ಮ ಕಚೇರಿಯಲ್ಲಿ ಆಪ್ತ ವಕೀಲರ  ಸಭೆ ನಡೆಸಿದರು. ನಾಳೆ ಬೆಳಿಗ್ಗೆ 11.30ರ ಬಳಿಕ ಯುವತಿ ನಗರಕ್ಕೆ ಬರಬಹುದು ಎನ್ನಲಾಗುತ್ತಿದೆ. ನಾಳೆ ಬೆಳಿಗ್ಗೆ ಏನೆಲ್ಲಾ ಬೆಳವಣಿಗೆ ಆಗಲಿದೆ ಎಂಬುದನ್ನು ಗಮನಿಸಿದ ನಂತರ ಯುವತಿಯನ್ನು ಕರೆತರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ -ವಕೀಲ ಜಗದೀಶ್

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ; ವಕೀಲ ಜಗದೀಶ್

Published On - 7:42 pm, Sun, 28 March 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು