AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆ ಜೊತೆ ಎರಡನೇ ಮದುವೆಯಾಗಿದ್ದ ವ್ಯಕ್ತಿ ಅರೆಸ್ಟ್

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್, 15 ವರ್ಷದ ಯುವತಿಗೆ ಸರ್ಕಾರಿ ಕೆಲಸದ ಆಮಿಷವೊಡ್ಡಿ ಮದುವೆಯಾಗಿದ್ದ ಎಂಬ ಮಾಹಿತಿ ದೊರಕಿದೆ. ಅಧಿಕಾರಿಗಳು ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ಸದ್ಯ ಹಾಸನದ ಉಜ್ವಲ ಕೇಂದ್ರದಲ್ಲಿ ಅಪ್ರಾಪ್ತೆ ಇದ್ದಾಳೆ.

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆ ಜೊತೆ ಎರಡನೇ ಮದುವೆಯಾಗಿದ್ದ ವ್ಯಕ್ತಿ ಅರೆಸ್ಟ್
ಯೋಗೇಶ್ ಗೌಡ
TV9 Web
| Edited By: sandhya thejappa|

Updated on:Jun 06, 2021 | 2:10 PM

Share

ಹಾಸನ: 15 ವರ್ಷದ ಅಪ್ರಾಪ್ತೆಯನ್ನು ಜಿಲ್ಲೆಯ ಅರಕಲಗೂಡು ತಾಲೂಕಿನ ಗ್ರಾಮದ ಯೋಗೇಶ್ ಗೌಡ ಮದುವೆಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. 47 ವರ್ಷದ ಯೋಗೇಶ್ ಗೌಡ ಮೊದಲ ಪತ್ನಿ ನಿಧನವಾದ ಹಿನ್ನೆಲೆ ಎರಡನೇ ಮದುವೆಯಾಗಿದ್ದಾನೆ. ಮೊದಲ ಪತ್ನಿ ಮೃತಪಟ್ಟ 10 ತಿಂಗಳಿಗೆ ಅಪ್ರಾಪ್ತೆ ಜೊತೆ ಯೋಗೇಶ್ ಮದುವೆಯಾಗಿದ್ದು, ಆಲೂರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್, 15 ವರ್ಷದ ಯುವತಿಗೆ ಸರ್ಕಾರಿ ಕೆಲಸದ ಆಮಿಷವೊಡ್ಡಿ ಮದುವೆಯಾಗಿದ್ದ ಎಂಬ ಮಾಹಿತಿ ದೊರಕಿದೆ. ಅಧಿಕಾರಿಗಳು ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ಸದ್ಯ ಹಾಸನದ ಉಜ್ವಲ ಕೇಂದ್ರದಲ್ಲಿ ಅಪ್ರಾಪ್ತೆ ಇದ್ದಾಳೆ. 10 ತಿಂಗಳ ಹಿಂದೆ ಅನಾರೋಗ್ಯದಿಂದ ಯೋಗೇಶ್ ಗೌಡ ಪತ್ನಿ ಸಾವನ್ನಪ್ಪಿದ್ದಳು. ವರ್ಷದೊಳಗೆ ಮದುವೆಯಾಗಬೇಕು. ಶುಭಕಾರ್ಯ ನಡೆಯಬೇಕೆಂದು ಎರಡನೆ ಮದುವೆ ಮಾಡಿಕೊಂಡಿದ್ದಾನೆ.

ಬಾಲಕಿ ಹಾಗು ಆಕೆಯ ಪೋಷಕರನ್ನು ಪುಸಲಾಯಿಸಿ ಯೋಗೇಶ್ ಗೌಡ ಅಪ್ರಾಪ್ತೆಯನ್ನು ಮದುವೆಯಾಗಿದ್ದಾನೆ. ದಾವಣಗೆರೆ ಮೂಲದ ಅಪ್ರಾಪ್ತೆ ಆಲೂರು ತಾಲೂಕಿನ ಮುದಿಗೆರೆಯ ಅಜ್ಜಿ ಮನೆಯಲ್ಲಿದ್ದಳು. ನನ್ನ ಮದುವೆಯಾದರೆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ಆಸೆ ತೋರಿಸಿ ಯೋಗೇಶ್ ಗೌಡ ಮದುವೆಯಾಗಿದ್ದ. ಅರಕಲಗೂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಹಾಸನದ ಉಜ್ವಲ ಕೇಂದ್ರಕ್ಕೆ ಬಿಟ್ಟಿದ್ದಾರೆ. ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಮಾರಕಾಸ್ತ್ರಗಳಿಂದ ಕೊಚ್ಚಿ ಕಲಬುರಗಿ ಯುವಕನ ಬರ್ಬರ ಕೊಲೆ

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು

(Police have arrested a man who had been married with minor girl for a second time)

Published On - 2:09 pm, Sun, 6 June 21

Follow Us
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ