AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆ ಜೊತೆ ಎರಡನೇ ಮದುವೆಯಾಗಿದ್ದ ವ್ಯಕ್ತಿ ಅರೆಸ್ಟ್

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್, 15 ವರ್ಷದ ಯುವತಿಗೆ ಸರ್ಕಾರಿ ಕೆಲಸದ ಆಮಿಷವೊಡ್ಡಿ ಮದುವೆಯಾಗಿದ್ದ ಎಂಬ ಮಾಹಿತಿ ದೊರಕಿದೆ. ಅಧಿಕಾರಿಗಳು ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ಸದ್ಯ ಹಾಸನದ ಉಜ್ವಲ ಕೇಂದ್ರದಲ್ಲಿ ಅಪ್ರಾಪ್ತೆ ಇದ್ದಾಳೆ.

ಹಾಸನ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆ ಜೊತೆ ಎರಡನೇ ಮದುವೆಯಾಗಿದ್ದ ವ್ಯಕ್ತಿ ಅರೆಸ್ಟ್
ಯೋಗೇಶ್ ಗೌಡ
Follow us
TV9 Web
| Updated By: sandhya thejappa

Updated on:Jun 06, 2021 | 2:10 PM

ಹಾಸನ: 15 ವರ್ಷದ ಅಪ್ರಾಪ್ತೆಯನ್ನು ಜಿಲ್ಲೆಯ ಅರಕಲಗೂಡು ತಾಲೂಕಿನ ಗ್ರಾಮದ ಯೋಗೇಶ್ ಗೌಡ ಮದುವೆಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. 47 ವರ್ಷದ ಯೋಗೇಶ್ ಗೌಡ ಮೊದಲ ಪತ್ನಿ ನಿಧನವಾದ ಹಿನ್ನೆಲೆ ಎರಡನೇ ಮದುವೆಯಾಗಿದ್ದಾನೆ. ಮೊದಲ ಪತ್ನಿ ಮೃತಪಟ್ಟ 10 ತಿಂಗಳಿಗೆ ಅಪ್ರಾಪ್ತೆ ಜೊತೆ ಯೋಗೇಶ್ ಮದುವೆಯಾಗಿದ್ದು, ಆಲೂರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯೋಗೇಶ್, 15 ವರ್ಷದ ಯುವತಿಗೆ ಸರ್ಕಾರಿ ಕೆಲಸದ ಆಮಿಷವೊಡ್ಡಿ ಮದುವೆಯಾಗಿದ್ದ ಎಂಬ ಮಾಹಿತಿ ದೊರಕಿದೆ. ಅಧಿಕಾರಿಗಳು ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ. ಸದ್ಯ ಹಾಸನದ ಉಜ್ವಲ ಕೇಂದ್ರದಲ್ಲಿ ಅಪ್ರಾಪ್ತೆ ಇದ್ದಾಳೆ. 10 ತಿಂಗಳ ಹಿಂದೆ ಅನಾರೋಗ್ಯದಿಂದ ಯೋಗೇಶ್ ಗೌಡ ಪತ್ನಿ ಸಾವನ್ನಪ್ಪಿದ್ದಳು. ವರ್ಷದೊಳಗೆ ಮದುವೆಯಾಗಬೇಕು. ಶುಭಕಾರ್ಯ ನಡೆಯಬೇಕೆಂದು ಎರಡನೆ ಮದುವೆ ಮಾಡಿಕೊಂಡಿದ್ದಾನೆ.

ಬಾಲಕಿ ಹಾಗು ಆಕೆಯ ಪೋಷಕರನ್ನು ಪುಸಲಾಯಿಸಿ ಯೋಗೇಶ್ ಗೌಡ ಅಪ್ರಾಪ್ತೆಯನ್ನು ಮದುವೆಯಾಗಿದ್ದಾನೆ. ದಾವಣಗೆರೆ ಮೂಲದ ಅಪ್ರಾಪ್ತೆ ಆಲೂರು ತಾಲೂಕಿನ ಮುದಿಗೆರೆಯ ಅಜ್ಜಿ ಮನೆಯಲ್ಲಿದ್ದಳು. ನನ್ನ ಮದುವೆಯಾದರೆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ಆಸೆ ತೋರಿಸಿ ಯೋಗೇಶ್ ಗೌಡ ಮದುವೆಯಾಗಿದ್ದ. ಅರಕಲಗೂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಹಾಸನದ ಉಜ್ವಲ ಕೇಂದ್ರಕ್ಕೆ ಬಿಟ್ಟಿದ್ದಾರೆ. ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ಮಾರಕಾಸ್ತ್ರಗಳಿಂದ ಕೊಚ್ಚಿ ಕಲಬುರಗಿ ಯುವಕನ ಬರ್ಬರ ಕೊಲೆ

ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು

(Police have arrested a man who had been married with minor girl for a second time)

Published On - 2:09 pm, Sun, 6 June 21

ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ