AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: 415 ಚೀಲ ತೊಗರಿ ಬೇಳೆ ಮಾರಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್

ಬಾಗಲಕೋಟೆಯ ನವನಗರದ ಎಪಿಎಂಸಿ ಯಾರ್ಡನಲ್ಲಿರುವ ರಾಕೇಶ ಗುಜ್ಜರ ಎನ್ನುವವರ ಅಡತಿ ಅಂಗಡಿಯಿಂದ ತೊಗರಿಬೇಳೆ ಚೀಲಗಳನ್ನು ಲಾರಿಯಲ್ಲಿ ಹೊತ್ತೊಯ್ದಿದ್ದರು.

ಬಾಗಲಕೋಟೆ: 415 ಚೀಲ ತೊಗರಿ ಬೇಳೆ ಮಾರಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್
ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
TV9 Web
| Edited By: |

Updated on: Nov 11, 2021 | 9:22 AM

Share

ಬಾಗಲಕೋಟೆ: ಸುಮಾರು 415 ಚೀಲ ತೊಗರಿ ಬೇಳೆಯನ್ನು ಮಾರಿ ತಲೆಮರಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಾಗಲಕೋಟೆಯ ನವನಗರ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಅಂಕುಶ ರಾಠೋಡ ಮತ್ತು ದಿನೇಶ್ ಜಾಧವ್ ಬಂಧಿತ ಆರೋಪಿಗಳು. 17 ಲಕ್ಷ ರೂ. ಮೌಲ್ಯದ 415 ಚೀಲ ತೊಗರಿ ಬೇಳೆಯನ್ನು ಹೊತ್ತೊಯ್ದಿದ್ದರು. ರಾಕೇಶ ಗುಜ್ಜರ ಎಂಬುವವರ ಅಂಗಡಿಯಿಂದ ಹೊತ್ತೊಯ್ದಿದ್ದರು. ನಂತರ ಸಂತೆಯಲ್ಲಿ ಮಾರಾಟ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು.

ಬಾಗಲಕೋಟೆಯ ನವನಗರದ ಎಪಿಎಂಸಿ ಯಾರ್ಡನಲ್ಲಿರುವ ರಾಕೇಶ ಗುಜ್ಜರ ಎನ್ನುವವರ ಅಡತಿ ಅಂಗಡಿಯಿಂದ ತೊಗರಿಬೇಳೆ ಚೀಲಗಳನ್ನು ಲಾರಿಯಲ್ಲಿ ಹೊತ್ತೊಯ್ದಿದ್ದರು. 60ಕೆ.ಜಿ ತೂಕದ 17ಲಕ್ಷಕ್ಕೂ ಅಧಿಕ ಮೌಲ್ಯದ 415 ಚೀಲಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಹೋಗಿದ್ದರು. ಛತ್ತಿಸ್ಗಡ್ ರಾಜ್ಯದ ರಾಯಪೂರಕ್ಕೆ ತಲುಪಿಸಬೇಕಾಗಿತ್ತು. ಆದರೆ ತಲುಪಿಸಬೇಕಾಗಿದ್ದ ಜಾಗಕ್ಕೆ ತಲುಪಿಸದೇ ಸಂತೆಯಲ್ಲಿ ಮಾರಾಟ ಮಾಡಿಕೊಂಡು ಆರೋಪಿಗಳು ತಲೆ ಮರೆಸಿಕೊಂಡಿದ್ದರು.

415 ಚೀಲಗಳಲ್ಲಿ 245 ಚೀಲಗಳನ್ನು ಸಂತೆಯಲ್ಲಿ ಮಾರಾಟ ಮಾಡಿದ್ದಾರೆ. ಬಾಕಿ ಉಳಿದ 170 ಚೀಲಗಳು ಹಾಗೂ 245 ಚೀಲಗಳನ್ನ ಮಾರಾಟ ಮಾಡಿ ಬಂದ 8 ಲಕ್ಷಕ್ಕೂ ಅಧಿಕ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವನಗರದ ಸಿಪಿಐ ಎಸ್ಎಂ ಆವಜಿ ಹಾಗೂ ತಂಡದಿಂದ ಆರೋಪಿಗಳನ್ನ ಬಂಧಿಸಲಾಗಿದೆ. ನವನಗರ ಠಾಣೆಯಲ್ಲಿ ಅಕ್ಟೋಬರ್ 20 ರಂದು ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರದ ಮಿಟ್ಟಹಳ್ಳಿಯಲ್ಲಿ ಮತ್ತೆ ಭೂಮಿಯಿಂದ ಬಂತು ಭಾರಿ ಶಬ್ದ!

ದುಬಾರಿ ಪೆಟ್ರೋಲ್​ಗೆ ಹಣ ತೆತ್ತು ಸರ್ಕಾರವನ್ನು ಶಪಿಸುತ್ತಿರುವವರ ಚಿತ್ತ ಈಗ ಜಾಸ್ತಿ ಮೈಲೇಜ್ ನೀಡುವ ಇ-ಸ್ಕೂಟರ್​ಗಳತ್ತ!

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ