AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್ಡೌನ್ ನಡುವೆ ಬೆಂಗಳೂರಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ, ಪಶ್ಚಿಮ ವಿಭಾಗದಲ್ಲಿ 18 ಕಡೆ ಪೊಲೀಸರಿಂದ ತಪಾಸಣೆ

ನಗರದಲ್ಲಿ ಸರಗಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಪಶ್ಚಿಮ ವಿಭಾಗದಲ್ಲಿ 18 ಕಡೆ ಪೊಲೀಸರಿಂದ ತಪಾಸಣೆ ನಡೆಯುತ್ತಿದೆ. ಮೆಜೆಸ್ಟಿಕ್, ಕಾಟನ್‌ಪೇಟೆ, ಉಪ್ಪಾರಪೇಟೆ, ಮೈಸೂರು ರಸ್ತೆ, ನಾಗರಬಾವಿ, ಕೆಂಗೇರಿ ಸುತ್ತಮುತ್ತ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.

ಲಾಕ್ಡೌನ್ ನಡುವೆ ಬೆಂಗಳೂರಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ, ಪಶ್ಚಿಮ ವಿಭಾಗದಲ್ಲಿ 18 ಕಡೆ ಪೊಲೀಸರಿಂದ ತಪಾಸಣೆ
ಮೀನಿನ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿರುವ ಯುವಕರು
TV9 Web
| Edited By: |

Updated on: Jun 06, 2021 | 1:38 PM

Share

ಬೆಂಗಳೂರು: ಕೊರೊನಾ ಲಾಕ್ಡೌನ್ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಅತಿಯಾಗುತ್ತಿದೆ. ಕೆ.ಎಸ್.ಲೇಔಟ್‌ನ 18ನೇ ಅಡ್ಡರಸ್ತೆಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಸರೋಜಿನಿ ರಾಯನ್(86) ಎಂಬ ವೃದ್ಧೆಯ ಸರಗಳ್ಳತನ ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಮತ್ತೊಂದೆಡೆ ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತದಲ್ಲಿರುವ ಮೀನಿನ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಯುವಕರಿಬ್ಬರು ಮೀನಿನ ಅಂಗಡಿ ಶೆಟರ್ ಮುರಿದು ಕ್ಯಾಶ್ ಬಾಕ್ಸ್ ಕಳ್ಳತನ ಮಾಡಿದ್ದಾರೆ. ಕದಿಯುವ ದೃಶ್ಯಗಳು ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಗರದಲ್ಲಿ ಸರಗಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಪಶ್ಚಿಮ ವಿಭಾಗದಲ್ಲಿ 18 ಕಡೆ ಪೊಲೀಸರಿಂದ ತಪಾಸಣೆ ನಡೆಯುತ್ತಿದೆ. ಮೆಜೆಸ್ಟಿಕ್, ಕಾಟನ್‌ಪೇಟೆ, ಉಪ್ಪಾರಪೇಟೆ, ಮೈಸೂರು ರಸ್ತೆ, ನಾಗರಬಾವಿ, ಕೆಂಗೇರಿ ಸುತ್ತಮುತ್ತ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.

ಬೆಳಿಗ್ಗೆ 5 ಗಂಟೆಯಿಂದ ಸ್ಪೆಷಲ್ ಡ್ರೈವ್ ಚುರುಕುಗೊಂಡಿದೆ. ಇಂದು ಭಾನುವಾರ ಹಿನ್ನೆಲೆ ಬೇಕಾಬಿಟ್ಟಿ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರತಿ ವಾಹನಗಳನ್ನು ಚೆಕ್ ಮಾಡಿ ಕಳಿಸಲಾಗುತ್ತಿದೆ. ಹಾಗೂ ಅನಾವಶ್ಯಕವಾಗಿ ಓಡಾಡ್ತಿದ್ದ ಹಲವು ವಾಹನಗಳನ್ನು ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತವರ ಸೋದರನ ವಿರುದ್ಧ ಕಳ್ಳತನದ ಆರೋಪ; ಠಾಣೆಯಲ್ಲಿ ದೂರು ದಾಖಲು

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!