ಬೆಂಗಳೂರಿನಲ್ಲಿ ಕೊಡಗು ಮೂಲದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಆಡಳಿತಾಧಿಕಾರಿಯೊಬ್ಬರು ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಮೂಲದ ಅಪ್ಪಚ್ಚು ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ಆತ್ಮತ್ಯೆಗೆ ಶರಣಾಗಿದ್ದಾರೆ. ಅಪ್ಪಚ್ಚು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಿರಂತರ ಕೆಲಸದಿಂದಾಗಿ ಸಮಯ ನೀಡಲಾಗುತ್ತಿಲ್ಲ ಎಂದು ಕುಟುಂಬದೊಂದಿಗೆ ಹೇಳಿಕೊಂಡಿದ್ದರು. ಎರಡು ತಿಂಗಳಿನಿಂದ ಮಂಕಾಗಿರುತ್ತಿದ್ದರು. ಅದೇ ಬೇಸರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಎಂದಿನಂತೆ ಮೊನ್ನೆ ಕೆಲಸಕ್ಕೆ ಹಾಜರಾಗಿ ನಿನ್ನೆ ಒಂದು ದಿನ ರಜೆ ಪಡೆದಿದ್ದರು. […]

ಬೆಂಗಳೂರಿನಲ್ಲಿ ಕೊಡಗು ಮೂಲದ ಪೊಲೀಸ್ ಅಧಿಕಾರಿ ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: Oct 15, 2019 | 12:32 PM

ಬೆಂಗಳೂರು: ಪೊಲೀಸ್ ಹೌಸಿಂಗ್ ಕಾರ್ಪೋರೇಶನ್ ಆಡಳಿತಾಧಿಕಾರಿಯೊಬ್ಬರು ಕುಟುಂಬದ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಎಂದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಮೂಲದ ಅಪ್ಪಚ್ಚು ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ಆತ್ಮತ್ಯೆಗೆ ಶರಣಾಗಿದ್ದಾರೆ.
ಅಪ್ಪಚ್ಚು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ನಿರಂತರ ಕೆಲಸದಿಂದಾಗಿ ಸಮಯ ನೀಡಲಾಗುತ್ತಿಲ್ಲ ಎಂದು ಕುಟುಂಬದೊಂದಿಗೆ ಹೇಳಿಕೊಂಡಿದ್ದರು. ಎರಡು ತಿಂಗಳಿನಿಂದ ಮಂಕಾಗಿರುತ್ತಿದ್ದರು. ಅದೇ ಬೇಸರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಎಂದಿನಂತೆ ಮೊನ್ನೆ ಕೆಲಸಕ್ಕೆ ಹಾಜರಾಗಿ ನಿನ್ನೆ ಒಂದು ದಿನ ರಜೆ ಪಡೆದಿದ್ದರು. ಮನೆಗೆ ಹೋಗದೆ ಮೆಜೆಸ್ಟಿಕ್ ಬಳಿ ಖಾಸಗಿ‌ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದರು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನೇಣಿಗೆ ಕೊರಳೊಡ್ಡಿದ್ದಾರೆ.

Published On - 12:30 pm, Tue, 15 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us